ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಸಿ.ಎಫ್.ಟಿ.ಆರ್.ಐ ಹತ್ತಿರ ಇರುವ ಮಹಾತ್ಮ ಗಾಂಧಿ ಅಂಬೇಡ್ಕರ್ ಸಮುದಾಯ ಭವನದಲ್ಲಿ ಸಮೃದ್ಧಿ ಸೇವಾ ಸಮಿತಿ ಟ್ರಸ್ಟ್ ಆಯೋಜಿಸಿದ್ದ ಬ್ಯೂಟಿಷಿಯನ್ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅತಿ ಮುಖ್ಯವಾಗಿರುತ್ತದೆ. ಈ ಹಿಂದೆ ಮನೆಗೆಲಸಕ್ಕಷ್ಟೇ ಸೀಮಿತವಾಗಿದ್ದ ಮಹಿಳೆ ಪ್ರಸ್ತುತ ಎಲ್ಲಾ ಕ್ಷೇತ್ರಗಳಲ್ಲಿಯೂ ಕೆಲಸ ನಿರ್ವಹಿಸುತ್ತಿದ್ದಾಳೆ ಎಂದರು.
ಬ್ಯೂಟಿಷಿಯನ್ ತರಬೇತಿಗೆ ಮಹಿಳೆಯರು ಕೇವಲ ಪ್ರಮಾಣಪತ್ರ ಪಡೆಯಲು ಬರಬಾರದು. ಅನುಭವಿ ತರಬೇತುದಾರರಿಂದ ತರಬೇತಿ ಪಡೆದು, ವೃತ್ತಿಯಲ್ಲಿ ಗುಣಮಟ್ಟ ಕಾಯ್ದುಕೊಂಡಾಗ ಹೆಚ್ಚು ಹೆಚ್ಚು ಗ್ರಾಹಕರನ್ನು ತಲುಪಲು ಸಾಧ್ಯವಾಗುತ್ತದೆ. ಯಾವುದೇ ವೃತ್ತಿಯಲ್ಲಿ ಮೊದಲು ನಮ್ಮಲ್ಲಿಗೆ ಬರುವ ಗ್ರಾಹಕರನ್ನು ಸೌಜನ್ಯದಿಂದ ಮಾತನಾಡಿಸಬೇಕು ಎಂದು ಅವರು ಸಲಹೆ ನೀಡಿದರು.ಮೈಸೂರು ಬ್ಯೂಟಿಷಿಯನ್ ಅಸೋಸಿಯೇಷನ್ ನಿರ್ದೇಶಕಿ ಮಾಲಿನಿ ಪಾಲಾಕ್ಷ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಸಮೃದ್ಧಿ ಸೇವಾ ಸಮಿತಿ ಟ್ರಸ್ಟ್ ಗೌರವಾಧ್ಯಕ್ಷರಾದ ಕಾಂತಿಲಾಲ್ ಜೈನ್, ಸಲಹೆಗಾರ ವೆಂಕಟೇಶ್ ಕುಮಾರ್, ಕಾರ್ಯದರ್ಶಿ ಜ್ಯೋತಿ, ಸಹ ಕಾರ್ಯದರ್ಶಿ ಚರಣ್, ಖಜಾಂಚಿ ಗಾಯಿತ್ರಿ, ನಿರ್ದೇಶಕ ರಾಜೇಶ್, ಸಂಚಾಲಕರಾದ ಎನ್. ಭರತ್, ದಾಕ್ಷಾಯಿಣಿ, ರಚನಾ, ಸುಶೀಲಾ ಮೊದಲಾದವರು ಇದ್ದರು.