ಕನ್ನಡಪ್ರಭ ವಾರ್ತೆ ಮೈಸೂರು
ಮಾನಸ ಗಂಗೋತ್ರಿಯ ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನಾ ಮತ್ತು ವಿಸ್ತರಣ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ವಿ. ಶ್ರೀನಿವಾಸಪ್ರಸಾದ್ ಗೆ ನುಡಿನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಸಾದ್ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ? ಎಂದು ಅವರು ಮರುಪ್ರಶ್ನಿಸಿದ್ದಾಗಿ ಹೇಳಿದರು.ಪಿ.ವಿ. ನರಸಿಂಹರಾವ್ ಅವರಿಗೆ ಆಫ್ರಿಕಾದ ಜನಾಂಗೀಯ ನಿಂದನೆ ಅಮಾನವೀಯ, ಕಳಂಕ ಎನ್ನುವುದಾದರೆ ಭಾರತದಲ್ಲಿನ ಅಸ್ಪಶ್ಯತೆ ಯಾಕೇ ಕಾಣುವುದಿಲ್ಲ ಎಂದು ದಿಟ್ಟವಾಗಿ ಹೇಳುವ ಎದೆಗಾರಿಕೆ ಪ್ರಸಾದ್ ಅವರಿಗಿತ್ತು ಎಂದರು.
ಮಹಾರಾಣಿ ಕಾಲೇಜು ಹಾಸ್ಟೆಲ್ ನಲ್ಲಿ ದಲಿತ ಮತ್ತು ಇತರೆ ಜಾತಿಯ ಹೆಣ್ಣು ಮಕ್ಕಳ ನಡುವೆ ಗಲಾಟೆ ನಡೆದಾಗ ಅಹಂ ತೋರದೆ ನಿರ್ವಹಿಸಿದ ಪಾತ್ರ, ಶ್ರಿರಂಗಪಟ್ಟಣ ತಾಲೂಕಿನ ಮಹದೇವಪುರದಲ್ಲಿ ಅಂಬೇಡ್ಕರ್ ಜಯಂತಿ ವೇಳೆ ನಾಯಕತ್ವ ವಿಚಾರವಾಗಿ ಉಂಟಾದ ವೈಮನಸ್ಸನ್ನು ಪ್ರಸಾದ್ ಅವರು ನಿಭಾಯಿಸಿದ್ದನ್ನು ಮರೆಯಲಾಗದು ಎಂದರು.
ಕ್ರಿಕೆಟ್ ಗೆ ಸಚಿನ್ ತೆಂಡೂಲ್ಕರ್, ಕರ್ನಾಟಕದ ಘನತೆಗೆ ರಾಜಕುಮಾರ್ ಎಂಬಂತೆ ರಾಜಕಾರಣಿಯಾಗಿ ಅಂಬೇಡ್ಕರ್ ಅವರನ್ನು ಕುರಿತು ಮಾತಾಡುವುದನ್ನು ಪ್ರಸಾದ್ ಮಾದರಿ. ಯಾರಿಗೂ ನೋವಾಗದೇ ಯಾರನ್ನೂ ನೋಯಿಸದೇ ಸ್ಪಷ್ಟವಾಗಿ ಮಾತಾಡುವುದಕ್ಕೂ ಅವರು ಉದಾಹರಣೆಯಾಗಿಸಬಹುದು ಎಂದು ಅವರು ತಿಳಿಸಿದರು.