ದೊಡ್ಡಣ್ಣಗುಡ್ಡೆ ಕ್ಷೇತ್ರದಲ್ಲಿ ಪ್ರಸನ್ನಾಕ್ಷಿ ಪ್ರತಿಷ್ಠೆ, ಮಹಾಚಂಡಿಕಾಯಾಗ ಸಂಪನ್ನ

KannadaprabhaNewsNetwork |  
Published : Jul 14, 2024, 01:36 AM IST
ಯಾಗ13 | Kannada Prabha

ಸಾರಾಂಶ

ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನಾಕ್ಷಿಯ ಪ್ರತಿಷ್ಠಾಪನೆಯೂ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಗಾಯತ್ರಿ ಧ್ಯಾನಪೀಠದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ಪರಿವಾರ ಶಕ್ತಿಯಾಗಿ ಶ್ರೀ ಪ್ರಸನ್ನಾಕ್ಷಿಯ ಪ್ರತಿಷ್ಠಾಪನೆಯೂ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ, ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಂಡಿತು..

ಆದ್ಯ ಗಣಪತಿಯಾಗ, ಪಂಚವೀಂಶತಿ ಕಲಾಶಾರಾಧನೆ, ಪ್ರತಿಷ್ಠಾ ಪ್ರಧಾನ ಹೋಮಗಳೊಂದಿಗೆ ಕಾರ್ಯಕ್ರಮಗಳು ಸಂಪನ್ನಗೊಂಡವು. ಗತಕಾಲದಲ್ಲಿ ಕ್ಷೇತ್ರ ರಚನೆಗೆ ಕಾರಣೀಭೂತರಾಗಿ ತಪಸ್ಸನ್ನು ಆಚರಿಸಿದ ಶ್ರೀ ಕಪಿಲ ಮಹರ್ಷಿಗಳ ಸಾನಿಧ್ಯದಲ್ಲಿ ನವಕ ಕಲಶ ಪ್ರಧಾನ ಹೋಮ, ಕಲಶಾಭಿಷೇಕ, ಕಾಮಧೇನುವಿಗೆ ವಿಶೇಷ ಪೂಜೆಗಳು ವೇದಮೂರ್ತಿ ಹೇರೂರು ಆನಂದ ಭಟ್ ಅವರು ನೆರವೇರಿಸಿದರು.

ವೇ.ಮೂ. ವಾಮನ ಭಟ್ ಅವರ ಪ್ರಧಾನತ್ವದಲ್ಲಿ ನೆರವೇರಿದ ಮಹಾ ಚಂಡಿಕಾಯಾಗದಲ್ಲಿ ಶ್ರೀಯುತ ವೇ.ಮೂ. ಪೆರಡೂರು ದಿನೇಶ್ ಅಡಿಗ, ವೇದಮೂರ್ತಿ ಸೀತಾರಾಮ ಭಟ್, ಹೆರ್ಗ ಗಣೇಶ್ ಭಟ್, ನಾಗಶಯನ, ಸ್ವಸ್ತಿಕಾಚಾರ್ಯ ಸಹಕರಿಸಿದರು.

ಮಹಾಚಂಡಿಕಾಯಿಯಾಗದಲ್ಲಿ ಬ್ರಾಹ್ಮಣ ಸುವಾಸಿನಿಯರು ಅಧಿಕ ಸಂಖ್ಯೆಯಲ್ಲಿ ಆರಾಧನೆ ಸ್ವೀಕರಿಸಿದರು. ವಿಶೇಷವಾದ ಶೃಂಗಾರವಾದ್ಯ, ನಾದಸ್ವರ ವಾದ್ಯ, ಕೊಂಬು ಕಹಳೆ, ಚಂಡೆ ವಾದನದೊಂದಿಗೆ ಶ್ರೀ ಪ್ರಸನ್ನಾಕ್ಷಿಯ ಪ್ರತಿಷ್ಠಾಪನೆ ನೆರವೇರಿತು.

ಕ್ಷೇತ್ರದಲ್ಲಿ ದುರ್ಗಾ ಆದಿಶಕ್ತಿಯನ್ನು ವಿಶೇಷವಾಗಿ ಶ್ರೀ ಆನಂದ್ ಬಾಯಿರಿ ಅಲಂಕರಿಸಿದರು ಅನಿಶಾಚಾರ್ಯ ಮಹಾಪೂಜೆ ನೆರವೇರಿಸಿದರು. ಮಧ್ಯಾಹ್ನ ನೆರವೇರಿದ ಮಹಾ ಅನ್ನಸಂತರ್ಪಣೆಯಲ್ಲಿ ಸಹಸ್ರ ಸಂಖ್ಯೆಗೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದರು ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ
ಪರಿಸರಕ್ಕೆ ವಿಷ ಉಣಿಸುತ್ತಿವೆ ಗ್ರಾಪಂಗಳು