ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಹಾಗೂ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಶ್ರೀ ಕ್ಷೇತ್ರದ ತಪೋವನದಲ್ಲಿ 10 ದಿನಗಳ ಕಾಲ ನಡೆದ ಗುರು- ಶಿಷ್ಯ ಪರಂಪರೆ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಸಾನಿಧ್ಯವಹಿಸಿ ಅವರು ಮಾತನಾಡಿದರು.
ಮೊದಲ ತರಬೇತಿ ಶಿಬಿರದಲ್ಲಿ ಪಾರಂಪರಿಕ ವೈದ್ಯ ಜ್ಞಾನವಿರುವ ನುರಿತ ವೈದ್ಯರಿಂದ ಪ್ರಾಯೋಗಿಕವಾಗಿ ಗಿಡಮೂಲಿಕೆಗಳಿಂದ ಔಷಧಿ ತಯಾರಿಸುವ ವಿಧಾನಗಳನ್ನು ಪರಿಚಯಿಸಲಾಗಿದೆ. ಪರಿಷತ್ತಿನ ಎಲ್ಲಾ ಪದಾಧಿಕಾರಿಗಳು ಶಿಬಿರವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಶ್ಲಾಘಿಸಿದರು.ಈ ಮೊದಲು ಆರು ತಿಂಗಳಿಗೊಮ್ಮೆ ಈ ತರಬೇತಿ ಶಿಬಿರ ಪ್ರಾರಂಭಿಸಬೇಕೆಂದು ಉದ್ದೇಶಿಸಲಾಗಿತ್ತು. ಆದರೆ, ಶಿಬಿರದ ಯಶಸ್ಸು ನೋಡಿದಾಗ ಮುಂದಿನ ದಿನಗಳಲ್ಲಿ 50 ಜನರನ್ನೊಳಗೊಂಡ ತರಬೇತಿ ಶಿಬಿರವನ್ನು ಮೂರು ತಿಂಗಳಿಗೊಮ್ಮೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಪರಿಷತ್ತಿನ ರಾಜ್ಯಾಧ್ಯಕ್ಷ ಜಿ.ಮಹದೇವಯ್ಯ ಮಾತನಾಡಿ, ಶಿಬಿರದಲ್ಲಿ ತಾವು ಕಲಿತಿರುವ ವಿದ್ಯೆಯನ್ನು ಇನ್ನೊಬ್ಬರಿಗೆ ತಿಳಿಸಿ ಪಾರಂಪರಿಕ ವೈದ್ಯ ಪದ್ಧತಿ ಜೀವಂತವಾಗಿರುವಂತೆ ಮಾಡಬೇಕು. ಶಿಬಿರಾರ್ಥಿಗಳು ಮುಂದಿನ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಬಂದು ಇನ್ನೊಬ್ಬರಿಗೆ ವೈದ್ಯಪದ್ಧತಿಯನ್ನು ತಿಳಿಸಬೇಕು ಎಂದು ಹೇಳಿದರು.
ಪರಿಷತ್ನ ರಾಜ್ಯ ಪ್ರಧಾನ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ ಮಾತನಾಡಿ, ಎಲ್ಲರ ಸಹಕಾರದಿಂದ ಶಿಬಿರ ಯಶಸ್ಸು ಕಂಡಿದೆ. ರಾಜ್ಯದ ಹಲವು ಭಾಗಗಳ ಪಾರಂಪರಿಕ ವೈದ್ಯರು ಮುಂದಿನ ತರಬೇತಿ ಶಿಬಿರಕ್ಕೆ ನೋಂದಣಿ ಮಾಡಿಸಿಕೊಳ್ಳುವ ಆತುರತೆಯಲ್ಲಿದ್ದಾರೆ. ಮುಂದಿನ ತರಬೇತಿ ಶಿಬಿರವನ್ನು ಶ್ರೀಕ್ಷೇತ್ರದಲ್ಲಿಯೇ ಆಯೋಜಿಸಲಾಗುವುದು ಎಂದು ತಿಳಿಸಿದರು.