- - ದರ್ಶನ್ ಧ್ರುವನಾರಾಯಣ್ಕನ್ನಡಪ್ರಭ ವಾರ್ತೆ ನಂಜನಗೂಡು
ನಗರದ ದೇವೀರಮ್ಮನಹಳ್ಳಿ ಶರಣ ಸಂಗಮ ಮಠದ ಆವರಣದಲ್ಲಿ ಪ್ರತಿಧ್ವನಿ ವೇದಿಕೆ ವತಿಯಿಂದ ಯೋಜಿಸಿದ್ದ ನಮ್ಮೂರ ಕನ್ನಡ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನಾಡು, ನುಡಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಕನ್ನಡ ಭಾಷೆ ಬಗ್ಗೆ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚಾಗಿ ನಡೆಯಬೇಕಿದೆ ಎಂದರು.ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಸಲುವಾಗಿ ಕೈಗಾರಿಕೆಗಳು ಹೆಚ್ಚಾಗಬೇಕೆಂಬುದು ಎಲ್ಲರ ಆಶಯ. ಆದರೆ ಕೈಗಾರಿಕೆಗಳಿಗೆ ಸ್ಥಳೀಯರಿಗಿಂತ ಹೆಚ್ಚಾಗಿ ಹೊರ ದೇಶ ಹಾಗೂ ಹೊರ ರಾಜ್ಯದವರೇ ಹೂಡಿಕೆ ಮಾಡುವುದರಿಂದ ಸ್ಥಳೀಯರಿಗೆ ಉದ್ಯೋಗವಕಾಶ ನೀಡದೇ ಹೊರಗಿನವರೇ ಆದ್ಯತೆ ನೀಡುವುದರಿಂದ ಅಂತವರಿಗೆ ರೈತರ ಭೂಮಿ ಕೊಟ್ಟು ಏನೂ ಪ್ರಯೋಜನವಾಗುವುದಿಲ್ಲ. ಖಾಸಗಿ ವಲಯದಲ್ಲೂ ಸ್ಥಳೀಯರಿಗೆ ಉದ್ಯೋಗ ಮೀಸಲು ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ನಂಜನಗೂಡು ಮಧು, ಟಿ.ಆರ್. ವಿದ್ಯಾಸಾಗರ್, ಶಂಕರ್ ಪ್ರಸಾದ್, ಗೋಳೂರು ನಾರಾಯಣಸ್ವಾಮಿ, ಚೇತನ್, ಹರಿಪ್ರಸಾದ್, ಪೈಲ್ವಾನ್ ಸಿದ್ದರಾಜು, ಮುನೀರ್, ಗೀತಾ, ಮಣಿಕಂಠ, ಹಲ್ಲರೆ ಶಿವಬುದ್ಧಿ, ಮಹೇಂದ್ರ, ಮಹೇಶ್, ಕಲ್ಮಳ್ಳಿ ನಟರಾಜು, ಹುಸ್ಕೂರು ರಾಜಶೇಖರ್, ವಸಂತ ಚನ್ನಪ್ಪ, ಸೌಮ್ಯಾ ಸಿದ್ದರಾಜು, ಕೆ. ನಂಜುಂಡಯ್ಯ, ಉಲ್ಲಾಸ್ ಅವರಿಗೆ ಕನ್ನಡಧ್ವನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ಬಸವಕೇಂದ್ರದ ಬಸವಯೋಗಿ ಪ್ರಭುಗಳು, ಶರಣ ಸಂಗಮ ಮಠದ ನಾಗರಾಜೇಂದ್ರ ಸ್ವಾಮೀಜಿ, ಜಾಮಿಯ ಮಸೀದಿಯ ಅಬ್ದುಲ್ ಮುಸಾಫಿರ್ ರಷಾದಿ ಸಾನ್ನಿಧ್ಯ ವಹಿಸಿದ್ದರು.ಮಾಜಿ ಸಚಿವ ಕೋಟೆ ಎಂ.ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾಂಪೋಸ್ಟ್ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಪ್ರತಿಧ್ವನಿ ವೇದಿಕೆ ರಾಜ್ಯಾಧ್ಯಕ್ಷ ಪ್ರಸಾದ್, ತಾಲೂಕು ಅಧ್ಯಕ್ಷ ತ್ರಿಣೇಶ್, ಪಟ್ಟಣ ಅಧ್ಯಕ್ಷ ಆನಂದ್, ಬ್ಲಾಕ್ ಕಾಂಗ್ರೆಸ್ಅಧ್ಯಕ್ಷ ಕುರಹಟ್ಟಿ ಮಹೇಶ್, ಜಿಪಂ ಮಾಜಿ ಸದಸ್ಯ ಸಿ. ಚಿಕ್ಕರಂಗನಾಯಕ, ವಿಶ್ವಕರ್ಮ ನಿಗಮದ ಮಾಜಿ ಅಧ್ಯಕ್ಷ ನಂದಕುಮಾರ್, ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಬುಲೆಟ್ ಮಹದೇವಪ್ಪ, ಮುಖಂಡರಾದ ನಾಗೇಶ್ ರಾಜ್, ನಗರ ಪಾಲಿಕೆ ಮಾಜಿ ಸದಸ್ಯ ಪ್ರದೀಪ್ ಕುಮಾರ್ ಮೊದಲಾದವರು ಇದ್ದರು.