ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಚನ್ನಬಸವ ಸ್ವಾಮೀಜಿ

KannadaprabhaNewsNetwork |  
Published : Aug 31, 2024, 01:45 AM IST
೩೦ವೈಎಲ್‌ಬಿ೧:ಯಲಬುರ್ಗಾ ತಾಲೂಕಿನÀ ಚಿಕ್ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಂಡಿ ಕ್ಲಸ್ಟರ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಜರುಗಿತು. | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದು ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ಯಲಬುರ್ಗಾ: ವಿದ್ಯಾರ್ಥಿಗಳ ಬೌದ್ಧಿಕ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ನಿಡಗುಂದಿಕೊಪ್ಪ ಶಾಖಾ ಶಿವಯೋಗಿಮಂದಿರದ ಅಭಿನವ ಚನ್ನಬಸವ ಸ್ವಾಮೀಜಿ ಹೇಳಿದರು.

ತಾಲೂಕಿನ ಚಿಕ್ಕೊಪ್ಪಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ಬಂಡಿ ಕ್ಲಸ್ಟರ್ ವಲಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳ ಮಕ್ಕಳಲ್ಲಿರುವ ಪ್ರತಿಭೆ ಇಂದು ಪಟ್ಟಣದ ಮಕ್ಕಳಲ್ಲಿ ಕಾಣಸಿಗುತ್ತಿಲ್ಲ. ಯಾವುದಾದರೂ ಕಲೆ ಜೀವಂತವಾಗಿ ಉಳಿದಿದ್ದರೆ, ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಎಂದರು.

ಗ್ರಾಮದ ಹಿರಿಯ ಮುಖಂಡರಾದ ಶೇಖರಗೌಡ ಪಾಟೀಲ ಮಾತನಾಡಿ, ಸೃಜನಾತ್ಮಕ ಗುಣಗಳನ್ನು ಬೆಳೆಸುವಲ್ಲಿ ಪ್ರತಿಭಾ ಕಾರಂಜಿ ಅತ್ಯಂತ ಮಹತ್ವದ್ದಾಗಿದ್ದು, ನಶಿಸಿ ಹೋಗುತ್ತಿರುವ ನಾಡಿನ ಸಂಸ್ಕೃತಿ, ಜಾನಪದ ಕಲೆಗಳ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ವಹಿಸಿ ಅಧ್ಯಯನ ಮಾಡಿ ಸ್ಪರ್ಧಾ ವೇದಿಕೆಗಳಲ್ಲಿ ಪ್ರತಿಭೆ ಅನಾವರಣಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಸಿದ್ಲಿಂಗಪ್ಪ ಶ್ಯಾಗೋಟಿ, ಮೆಹಬೂಬ ಬಾದಶಾಹ, ಶೇಖರಗೌಡ ಪಾಟೀಲ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಶಿಕ್ಷಕರು-ಪಾಲಕರು ಪರಿಶ್ರಮ ವಹಿಸಬೇಕಿದೆ. ಮಕ್ಕಳಲ್ಲಿ ಅನೇಕ ಪ್ರತಿಭೆಗಳು ಇರುತ್ತವೆ. ಅವುಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ ಆಶಾಕಿರಣವಾಗಿದೆ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಭೀಮಪ್ಪ ಬಂಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಿಆರ್‌ಪಿ ನಾಗರಾಜ ಕುರಿ, ಬಸನಗೌಡ ದಳಪತಿ, ಶಂಕರಗೌಡ ದ್ಯಾಂಪೂರ, ನಿಂಗಪ್ಪ ಕಮತರ, ನಾಗಪ್ಪ ವಡ್ಡರ, ನಾಗರಾಜ ಕಜ್ಜಿ, ನಂದೆಪ್ಪ ನಾಯಕ, ಪರಸಪ್ಪ, ಮುದಕಪ್ಪ, ಶರಣಪ್ಪ ವಡ್ಡರ, ಜ್ಯೋತಿ ಕಮತರ, ಸೋಮಪ್ಪ ಕಾರಬಾರಿ, ದೊಡ್ಡಬಸವ ಹಕಾರಿ, ಮುಖ್ಯಶಿಕ್ಷಕ ಖಾದರಸಾಬ ಮುಜಾವರ, ಶಿಕ್ಷಕ ಪ್ರಭಯ್ಯ ಬಳಗೇರಿಮಠ, ನಾಗರಾಜ ನಡುವಿನಕೇರಿ ಸೇರಿದಂತೆ ಮತ್ತಿತರರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ