ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ

KannadaprabhaNewsNetwork |  
Published : Sep 13, 2024, 01:38 AM IST
ಪೊಟೋ-ಪಟ್ಟಣದ ಬಿ.ಸಿ.ಎನ್.ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಚ್.ಪಾಟೀಲ ಉದ್ಘಾಟಿಸಿ ಮಾತನಾಡಿದರು.  | Kannada Prabha

ಸಾರಾಂಶ

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು

ಲಕ್ಷ್ಮೇಶ್ವರ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಡಿ.ಎಚ್.ಪಾಟೀಲ ಹೇಳಿದರು.

ಗುರುವಾರ ಪಟ್ಟಣದ ಬಿ.ಸಿ.ಎನ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಲಕ್ಷ್ಮೇಶ್ವರ ಉತ್ತರ ಮತ್ತು ಮಾಗಡಿ ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರತಿಭಾ ಕಾರಂಜಿ ಒಂದು ವಿನೂತನ ಕಾರ್ಯಕ್ರಮವಾಗಿದ್ದು, ಕ್ಲಸ್ಟರ್, ಬ್ಲಾಕ್ ಮತ್ತು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸ್ಪರ್ಧೆ ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಿಗೆ ಸಾಮಾನ್ಯ ವೇದಿಕೆ ಒದಗಿಸುತ್ತದೆ, ಇದರಲ್ಲಿ ಯಶಸ್ವಿ ಮಕ್ಕಳಿಗೆ ಪ್ರಶಂಸಾ ಪತ್ರ ಮತ್ತು ಬಹುಮಾನ ನೀಡಲಾಗುತ್ತದೆ.ಇಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಉನ್ನತ ಮಟ್ಟದ ಸ್ಪರ್ಧೆಗಳಿಗೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಈ ವೇಳೆ ಶಿರಹಟ್ಟಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಈಶ್ವರ ಮೆಡ್ಲೇರಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಎಚ್.ಎಂ.ಗುತ್ತಲ, ಲಕ್ಷ್ಮೇಶ್ವರ ಕ್ಲಷ್ಟರ್ ಮಟ್ಟದ ಬಿಆರ್‌ಪಿ ಬಿ.ಎಂ. ಯರಗುಪ್ಪಿ ಮಾತನಾಡಿ ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ.ಅದನ್ನು ಗುರುತಿಸಿ, ಪ್ರೋತ್ಸಾಯಿಸಬೇಕು ಎಂದರು.

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆಯಲ್ಲಿ 13ಪ್ರಾಥಮಿಕ ಶಾಲೆಗಳು ಮತ್ತು 11 ಪ್ರೌಢಶಾಲೆಗಳ ಮಕ್ಕಳು ಭಾಗವಹಿಸಿದ್ದರು.ಈ ವೇಳೆ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಸಭೆಯಲ್ಲಿ ಎನ್ ಪಿಎಸ್ ಅಧ್ಯಕ್ಷ ಎಫ್.ಎಸ್.ತಳವಾರ, ಗೀತಾ ಹಳ್ಯಾಳ, ಬಿಆರ್ ಪಿ, ವಿ.ಎಚ್. ದೀಪಾಳಿ, ಮುಖ್ಯ ಶಿಕ್ಷಕ ವಿರೇಶ ಕಮ್ಮಾರ, ಪ್ರೌಶಾ ಸಂಘದ ಎಸ್.ಡಿ. ಲಮಾಣಿ, ಎಚ್.ಎಂ.ಗುತ್ತಲ, ಕ್ಲಸ್ಟರ ಸಿಆರ್‌ಪಿ ಉಮೇಶ ನೇಕಾರ ಮತ್ತು ಕೆ ಪಿ ಕಂಬಳಿ, ಎನ್.ಎನ್.ಸಾವಿರಕುರಿ, ಎನ್.ಎ.ಮುಲ್ಲಾ, ಎಸ್.ಎಂ.ಬೋಮಲೆ, ಸಿ.ವಿ.ವಡಕಣ್ಣವರ, ಗಿರೀಶ್ ನೇಕಾರ, ಜ್ಯೋತಿ ಗಾಯಕವಾಡ, ಲೋಕೇಶ ಮಠದ, ಶಿಕ್ಷಕ ಎನ್.ಎನ್. ಶಿಗ್ಲಿ, ಎಚ್.ಡಿ. ನಿಂಗರೆಡ್ಡಿ, ಡಿ.ಸಿ. ಪತ್ತಾರ ಹಾಗೂ ಕ್ಲಸ್ಟರಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎನ್.ಎಸ್.ಬಂಕಾಪೂರ ನಿರೂಪಿಸಿದರು, ಸತೀಶ ಬೋಮಲೆ ಸ್ವಾಗತಿಸಿದರು. ಉಮೇಶ ನೇಕಾರ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!