ನಾರ್ವೆ ಸೊಸೈಟಿ ಅಧ್ಯಕ್ಷರಾಗಿ ಪ್ರವೀಣ್‌ ಗೌಡ ಆಯ್ಕೆ

KannadaprabhaNewsNetwork |  
Published : Apr 28, 2025, 12:47 AM IST
27ಎಚ್ಎಸ್ಎನ್10 : ಬೇಲೂರು ತಾಲೂಕಿನ    ನಾರ್ವೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಜಿ.ಆರ್ ಪ್ರವೀಣ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು. | Kannada Prabha

ಸಾರಾಂಶ

ತಾಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಆರ್ ಪ್ರವೀಣ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಆರ್ ಪ್ರವೀಣ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾದರು.

ಕಳೆದ ೧೦ ತಿಂಗಳಿನಿಂದ ಅಧ್ಯಕ್ಷರಾಗಿ ಆಡಳಿತ ನಡೆಸುತ್ತಿದ್ದ ಗೀತಾ ಲಕ್ಷ್ಮಣ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ನೂತನ ಅಧ್ಯಕ್ಷೀಯ ಸ್ಥಾನಕ್ಕೆ ಜಿ.ಆರ್ ಪ್ರವೀಣ್ ಗೌಡ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಗುರುಮೂರ್ತಿಯವರು ಅಧ್ಯಕ್ಷರನ್ನಾಗಿ ಘೋಷಿಸಿದ್ದರಿಂದ ಅವಿರೋಧ ಆಯ್ಕೆಯಾದರು.

ಈ ವೇಳೆ ಅಧ್ಯಕ್ಷ ಜಿ.ಆರ್ ಪ್ರವೀಣ್ ಗೌಡ ಮಾತನಾಡಿ, ನಾನು ಎರಡನೇ ಬಾರಿಗೆ ನಿರ್ದೇಶಕನಾಗಿ ಆಯ್ಕೆಯಾಗಿ ಈ ಬಾರಿ ಪ್ರಥಮ ಬಾರಿಗೆ ಅಧ್ಯಕ್ಷನಾಗಿದ್ದೇನೆ. ಹಿರಿಯ ನಿರ್ದೇಶಕರು ಹಾಗೂ ನಿಕಟಪೂರ್ವ ಅಧ್ಯಕ್ಷರ ಸಹಕಾರ ಪಡೆದು ರೈತರ ಪರವಾಗಿ ನಿಷ್ಕಲ್ಮಷ ಮನಸ್ಸಿನಿಂದ ಕಾರ್ಯಭಾರ ಮಾಡುತ್ತೇನೆ ಎಂದರು.

ನಿರ್ದೇಶಕ ಕೃಷ್ಣಗೌಡ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯಂತಹ ಸಮಸ್ಯೆ ರೈತರನ್ನು ಜರ್ಜರಿತರನ್ನಾಗಿ ಮಾಡಿದೆ. ಆದ್ದರಿಂದ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ, ಕೃಷಿ ಸಂಬಂಧ ದೊರಕುವ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸುವ ಕಾರ್ಯವನ್ನು ನೂತನ ಅಧ್ಯಕ್ಷರ ಜೊತೆಗೂಡಿ ಮಾಡುತ್ತೇವೆ ಎಂದರು.

ಈ ವೇಳೆ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜು, ಮೇಲ್ವಿಚಾರಕ ದಿನೇಶ್, ಸೋಮಯ್ಯ, ದೇವರಾಜು, ಮಧುಕುಮಾರ್, ಗೀತಾ, ಚೇತನ್ ಕುಮಾರ್, ಸಿಇಒ ಜ್ಯೋತಿ ಎಸ್. ಶ್ರೀಕಾಂತ್, ಮಲ್ಲಿಕಾರ್ಜುನ್ ನಾರ್ವೆ, ರಾಜಶೇಖರ್, ಕಾಫಿ ಬೆಳೆಗಾರರಾದ ಸಂಪತ್ , ದೇವರಾಜ್, ವೆಂಕಟೇಶ್ ಮೂರ್ತಿ, ದಿವಾಕರ , ಶ್ರೀಕಾಂತ್ ನಾರ್ವೆ, ರಾಜಶೇಖರ್ ಹೇಮರಾಜ್ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌