ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಶಾಲೆಯ 6 ವಿದ್ಯಾರ್ಥಿಗಳಿಗೆ 10ರೊಳಗಿನ ರ್ಯಾಂಕ್
ರಾಜ್ಯಕ್ಕೆ 3ನೇ ರ್ಯಾಂಕ್ ಪಡೆದಿರುವ ಪ್ರಾವ್ಯ ಪಿ. ಶೆಟ್ಟಿ ತನ್ನ ಈ ಸಾಧನೆಯಿಂದ ಪುಳಕಿತರಾಗಿದ್ದು, ಮುಂದೆ ವೈದ್ಯೆಯಾಗುವ ಕನಸನ್ನು ವ್ಯಕ್ತಪಡಿಸಿದ್ದಾರೆ.
ಈ ಉತ್ಕೃಷ್ಟವಾದ ಫಲಿತಾಂಶವನ್ನು ಮೊದಲೇ ನಿರೀಕ್ಷಿಸಿದ್ದೆ. ತನ್ನ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಯ ಸಹಕಾರವೇ ಕಾರಣ. ಶಾಲೆಯಲ್ಲಿ ಅತ್ಯುತ್ತಮ ಬೋಧನೆ, ನಿರಂತರ ಪೂರ್ವತಯಾರಿ ಪರೀಕ್ಷೆಗಳು, ಪರೀಕ್ಷಾ ಸಮಯದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಾಗಾರಗಳು, ಸಹಪಠ್ಯ ಚಟುವಟಿಕೆಗಳು ತಮಗೆ ಬಹಳ ಸಹಾಯಕವಾದವು. ನಾನು ಹಾಸ್ಟೆಲ್ ವಿದ್ಯಾರ್ಥಿಯಾಗಿದ್ದು, ಹಾಸ್ಟೆಲ್ನ ಸ್ಟಡಿ ಅವರ್ಸ್ ತುಂಬಾ ಉಪಯುಕ್ತವಾಗಿತ್ತು. ವಿಶೇಷವಾಗಿ ನಮ್ಮ ಶಾಲೆಯಲ್ಲಿ 6ನೇ ತರಗತಿಯಿಂದಲೇ ಬೋಧಿಸುತ್ತಿರುವ ಐಐಟಿ/ನೀಟ್ ಫೌಂಡೇಶನ್ ಕೋರ್ಸಿನ ಮಾಸಿಕ ಪರೀಕ್ಷೆಗಳು ಜಟಿಲವಾದ ಪ್ರಶ್ನೆಗಳನ್ನು ಸರಳವಾಗಿ ಉತ್ತರಿಸಲು ನೆರವಾಯಿತು. ಪಿಯುಸಿ ಶಿಕ್ಷಣವನ್ನು ನಮ್ಮದೇ ಸುಜ್ಞಾನ ಪಿಯು ಕಾಲೇಜಿನಲ್ಲಿ ಮುಂದುವರಿಸುತ್ತೇನೆ ಎಂದು ತಿಳಿಸಿದ್ದಾರೆ.