ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿ ಹೃದಯಾಘಾತದಿಂದ ಸಾವು

KannadaprabhaNewsNetwork |  
Published : Jan 31, 2025, 12:50 AM ISTUpdated : Jan 31, 2025, 07:30 AM IST
deadbody

ಸಾರಾಂಶ

ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿಯೊಬ್ಬರು ಮರಳಿ ಬರುವಾಗ ಹೃದಯಾಘಾತವಾಗಿ ರೈಲಿನಲ್ಲಿಯೇ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಜರುಗಿದೆ.

  ಬೆಳಗಾವಿ : ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿಯೊಬ್ಬರು ಮರಳಿ ಬರುವಾಗ ಹೃದಯಾಘಾತವಾಗಿ ರೈಲಿನಲ್ಲಿಯೇ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಜರುಗಿದೆ. ಬೆಳಗಾವಿಯ ದೇಶಪಾಂಡೆ ಗಲ್ಲಿಯ ರವೀಂದ್ರ ಜಠಾರ (60) ಮೃತಪಟ್ಟವರು. ಮೂರು ದಿನಗಳ ಹಿಂದೆ ರೈಲಿನಲ್ಲಿ ಸ್ನೇಹಿತರ ಜತೆಗೆ ಪ್ರಯಾಗರಾಜ್‌ಗೆ ತೆರಳಿದ್ದರು. 

ಕುಂಭಮೇಳದಲ್ಲಿ ಸ್ನಾನ ಮಾಡಿ ಮುಗಿಸಿ, ರೈಲಿನ ಮೂಲಕ ಬೆಳಗಾವಿಗೆ ಬರುವಾಗ ಪುಣೆ ಬಳಿ ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪುಣೆಯಲ್ಲಿಯೇ ಸ್ನೇಹಿತರು, ಸಂಬಂಧಿಕರು ಮರಣೋತ್ತರ ಪರೀಕ್ಷೆ ನಡೆಸಿದ್ದು, ಶುಕ್ರವಾರ ಮೃತದೇಹ ಬೆಳಗಾವಿಗೆ ಬರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!