ಸೈನಿಕರಿಗೆ ಶಕ್ತಿ ತುಂಬಲು ಎಳ್ಳಾರೆ ದೇವಳದಲ್ಲಿ ಪ್ರಾರ್ಥನೆ

KannadaprabhaNewsNetwork |  
Published : May 11, 2025, 01:27 AM IST
ದೇಶದ ಸೈನಿಕರಿಗೆ ಶಕ್ತಿ ತುಂಬಲು ಮುನಿಯಲು ಉದಯ ಶೆಟ್ಟಿ ನೇತೃತ್ವದಲ್ಲಿ ಎಳ್ಳಾರೆ ದೇವಸ್ಥಾನದಲ್ಲಿ ಪ್ರಾರ್ಥನೆ  | Kannada Prabha

ಸಾರಾಂಶ

ಭಾರತೀಯ ಸೇನೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಾರ್ಕಳ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂದೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.

ಈ ಸಂದರ್ಭ ಮಾಜಿ ಸೈನಿಕ ವಿಶ್ವನಾಥ್ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಗದೀಶ್ ಹೆಗ್ಡೆ, ರಾಘವ ದೇವಾಡಿಗ, ಮಾಜಿ ಸದಸ್ಯೆ ಶಶಿಕಲಾ ಭಟ್, ಸದಸ್ಯ ದೀಕ್ಷಿತ್ ಶೆಟ್ಟಿ, ಅಜಿತ್ ಎಳ್ಳಾರೆ, ಶೇಖರ್ ಎಳ್ಳಾರೆ, ರಶಿಕ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ