ಮಳೆಯ ಅಬ್ಬರ ಕಡಿಮೆಯಾಗಲು ದೇವರಿಗೆ ಅಗಿಲು ಸೇವೆ

KannadaprabhaNewsNetwork |  
Published : Aug 03, 2024, 12:34 AM IST
ಕಳಸದ ಶ್ರೀ ಕಳಸೇಶ್ವರ ಸ್ವಾಮಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಗಿಲು ಸೇವೆ ಸಲ್ಲಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು: ರಾಜ್ಯದಲ್ಲಿ ಈ ಬಾರಿ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಕಾಫಿನಾಡು ಚಿಕ್ಕಮಗಳೂರು ಹೊರತಾಗಿಲ್ಲ, ಮಳೆಯಿಂದ ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿರುವ ಜತೆಗೆ ಕಾಫಿ ಸೇರಿದಂತೆ ಎಲ್ಲಾ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದೆ.

ಚಿಕ್ಕಮಗಳೂರು: ರಾಜ್ಯದಲ್ಲಿ ಈ ಬಾರಿ ವರುಣನ ಆರ್ಭಟ ಜೋರಾಗಿದೆ. ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಕಾಫಿನಾಡು ಚಿಕ್ಕಮಗಳೂರು ಹೊರತಾಗಿಲ್ಲ, ಮಳೆಯಿಂದ ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿ ಹಾನಿಯಾಗಿರುವ ಜತೆಗೆ ಕಾಫಿ ಸೇರಿದಂತೆ ಎಲ್ಲಾ ಬೆಳೆಗಳ ಮೇಲೆ ದುಷ್ಪರಿಣಾಮ ಬೀರಿದೆ.ಮಳೆಯ ಅಬ್ಬರ ಕಡಿಮೆಯಾಗಲೆಂದು ದಕ್ಷಿಣ ಕಾಶಿ ಎಂದೇ ಖ್ಯಾತಿಯಾದ ಕಳಸದ ಶ್ರೀ ಕಳಸೇಶ್ವರ ಸ್ವಾಮಿಗೆ ಭಕ್ತರು ಗುರುವಾರ ಅಗಿಲು ಸೇವೆ ಸಲ್ಲಿಸಿದರು.

ಕಳಸ ತಾಲೂಕಿನಲ್ಲಿ ಈ ಬಾರಿ ವಾಡಿಕೆಗಿಂತಲೂ ಸರಾಸರಿ ಶೇ. 23 ರಷ್ಟು ಹೆಚ್ಚುವರಿ ಮಳೆಯಾಗಿದೆ. ನದಿ, ಹಳ್ಳಗಳು ತುಂಬಿ ಹರಿಯುತ್ತಿವೆ. ಹಲವೆಡೆ ವಿದ್ಯುತ್‌ ಸಂಪರ್ಕ ಕಡಿದು ಹೋಗಿದೆ. ವರುಣನ ಆರ್ಭಟ ಕಡಿಮೆ ಮಾಡುವಂತೆ ಭಕ್ತರು ಕಳಸೇಶ್ವರ ಸ್ವಾಮಿ ಮೊರೆ ಹೋಗಿದ್ದಾರೆ.

ಅತಿವೃಷ್ಠಿ ಹಾಗೂ ಅನಾವೃಷ್ಠಿಯ ಸಂದರ್ಭದಲ್ಲಿ ಮಲೆನಾಡಿನ ಭಕ್ತರು ಕಳಸೇಶ್ವರ ಸ್ವಾಮಿಗೆ ಅಗಿಲು ಸೇವೆ ಸಲ್ಲಿಸುವ ಸಂಪ್ರದಾಯ ಅನಾಧಿಕಾಲದಿಂದಲೂ ನಡೆದುಕೊಂಡು ಬಂದಿದೆ. ಸೇವೆ ನಂತರ ಭಕ್ತರು ಅಂದುಕೊಂಡಂತೆ ಆಗಿದೆ ಎಂಬುದು ಪ್ರತೀತಿ. ಮಡಿವಂತರಾಗಿ ಬಂದ ಭಕ್ತರು ದೇವರಿಗೆ ವಿಶೇಷ ಪೂಜೆ ಹಾಗೂ ಅಗಿಲು ಸೇವೆ ಸಲ್ಲಿಸಿದರು.ಪೋಟೋ ಫೈಲ್‌ ನೇಮ್‌ 2 ಕೆಸಿಕೆಎಂ 6ಕಳಸದ ಶ್ರೀ ಕಳಸೇಶ್ವರ ಸ್ವಾಮಿಗೆ ಭಕ್ತರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಅಗಿಲು ಸೇವೆ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ