ಕಲಘಟಗಿ:
ಪಟ್ಟಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ಜನಸ್ಪಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಮಟ್ಟದಲ್ಲಿ ಐದು ಜನಸಂಪರ್ಕ ಸಭೆ ಜರುಗಿಸಿ, ಜನರ ಅಹವಾಲು ಸ್ವೀಕರಿಸಿ ಶೇ. 75ರಷ್ಟು ದೂರುಗಳಿಗೆ ಸ್ಥಳದಲ್ಲಿ ಪರಿಹಾರ ನೀಡಲಾಗಿದೆ. ಇನ್ನುಳಿದವುಗಳು ಸರ್ಕಾರ, ಇಲಾಖೆಗಳ ಹಂತದಲ್ಲಿ ಆಗಬೇಕಿದೆ ಮತ್ತು ಕೆಲವು ನ್ಯಾಯಾಲಯ ಪ್ರಕರಣಗಳು ಇವೆ. ಇವುಗಳನ್ನು ಹಂತ-ಹಂತವಾಗಿ ಪರಿಹರಿಸುವುದಾಗಿ ಸಚಿವರು ತಿಳಿಸಿದರು.263ಕ್ಕೂ ಹೆಚ್ಚು ಅರ್ಜಿ ಸ್ವೀಕೃತ:
ಕಣ್ಣೀರಾದ ಸಚಿವ:
ವಿಶೇಷಚೇತನ ನಾಗರಾಜ ತಾಯಿ ಕಸ್ತೂರಿ ತುಂಬ್ರಿಕೊಪ್ಪ ಉಸ್ತುವಾರಿ ಸಚಿವರಲ್ಲಿ ವಿನಂತಿಸಿದರು. ಅವರ ಪರಿಸ್ಥಿತಿ ನೋಡಿ ಕಣ್ಣೀರಾದ ಸಚಿವರು, ತಮ್ಮ ಫೌಂಡೇಶನ್ ವತಿಯಿಂದ ಸಹಾಯ ಮಾಡುವ ಭರವಸೆ ನೀಡಿದರು. ಜತೆಗೆ ಆರೋಗ್ಯ, ಅಂಗವಿಕಲ ಕಲ್ಯಾಣ ಇಲಾಖೆಯಿಂದ ಯೋಜನಗಳ ಸಹಾಯ ಮಾಡಿಸುವುದಾಗಿ ತಿಳಿಸಿದರು. ಅಗತ್ಯ ಚಿಕಿತ್ಸೆ, ಔಷಧಿ ನೀಡುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಅನ್ನಭಾಗ್ಯ ಯೋಜನೆಯ ನೇರ ನಗದು ಹಣ ಜಮೆ ಆಗದ ಪ್ರಕರಣಗಳಲ್ಲಿ ಆಧಾರ್ ಜೋಡಣೆ ಮತ್ತು ಬ್ಯಾಂಕ್ ಹೊಸ ಖಾತೆ ತೆರೆಯಲು ಅನುಕೂಲವಾಗುವಂತೆ ಆಯ್ದ ನಗರ ಹಾಗೂ ಗ್ರಾಮೀಣ ನ್ಯಾಯಬೆಲೆ ಅಂಗಡಿಗಳಲ್ಲಿ ಕೆವೈಸಿ ಜೋಡಣೆ ಸಲುವಾಗಿ ಜು. 1ರಿಂದ 7ರ ವರೆಗೆ ಸಪ್ತಾಹ ಅಭಿಯಾನ ಜಿಲ್ಲೆಯಲ್ಲಿ ಆಯೋಜಿಸಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಜನಸ್ಪಂದನ ಸಭೆಗಳಲ್ಲಿ ಸ್ವೀಕರಿಸುವ ಸಾರ್ವಜನಿಕ ಅರ್ಜಿಗಳನ್ನು ಜು. 15ರೊಳಗೆ ವಿಲೇವಾರಿ ಮಾಡಲಾಗುವುದು ಎಂದು ಇದೇ ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಸಿಇಒ ಸ್ವರೂಪ ಟಿ.ಕೆ., ಎಸ್ಪಿ ಡಾ.ಗೋಪಾಲ ಬ್ಯಾಕೋಡ, ತಾಲೂಕು ಉಸ್ತುವಾರಿ ಅಧಿಕಾರಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶ್ಯಾನಪ್ಪಗೌಡ ಪಾಟೀಲ, ತಾಲೂಕು ಅಧ್ಯಕ್ಷ ಬಸವರಾಜ ಬಾವಕರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.