ಸಾಂಸ್ಕೃತಿಕ ಕಲಾ ಸಂಘಗಳಿಗೆ ಆದ್ಯತೆ

KannadaprabhaNewsNetwork |  
Published : Nov 18, 2024, 12:01 AM IST
ಮುಂಡರಗಿ ಪಟ್ಟಣದ ಜೆ.ಎಚ್. ಪಟೀಲ ನಗರದ ಸಭಾಂಗಣದಲ್ಲಿ ಶ್ರೀ ರತ್ನಾಕರ ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣ ನಗರ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಎಸ್ ಟಿ (ರಿ)ಮಕ್ತುಂಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಬೆಂಗಳೂರು ಇವರ ಸಹಯೋಗದೊಂದಿಗೆ ಜರುಗಿದ ಜನಪದ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮವನ್ನು ಜಿಪಂ ಮಾಜಿ ಉಪಾಧ್ಯಕ್ಷೆ ಶೋಭಾ ಮೇಟಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ನೀಡಲಾಗುತ್ತಿದೆ. ಕಲಾವಿದರು ಇದರ ಸದುಪಯೋಗ ಪಡೆಯಬೇಕು

ಮುಂಡರಗಿ: ನಮ್ಮ ಇಲಾಖೆಯಿಂದ ನೋಂದಾಯಿತ ಸಾಂಸ್ಕೃತಿಕ ಕಲಾಸಂಘಗಳಿಗೆ ಆದ್ಯತೆ ಮೇರೆಗೆ ಪ್ರಾಯೋಜಕತ್ವ ಕಾರ್ಯಕ್ರಮ ನೀಡಲಾಗುತ್ತಿದೆ. ಸಾಂಸ್ಕೃತಿಕ ಪರಂಪರೆ ಉಳಿಸಿ ಬೆಳೆಸಲು ಶ್ರಮಿಸುತ್ತಿರುವ ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಸದಾಕಾಲ ಇರುತ್ತದೆ ಎಂದು ಗದಗ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ವೀರಯ್ಯಸ್ವಾಮಿ ತಿಳಿಸಿದರು.

ಅವರು ಇತ್ತೀಚೆಗೆ ಮುಂಡರಗಿ ಪಟ್ಟಣದ ಜೆ.ಎಚ್. ಪಾಟೀಲ ನಗರದ ಸಭಾಂಗಣದಲ್ಲಿ ಶ್ರೀರತ್ನಾಕರ ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣ ನಗರ ಅಭಿವೃದ್ಧಿ ಶಿಕ್ಷಣ ಸಂಸ್ಥೆ ಎಸ್ ಟಿ (ರಿ)ಮಕ್ತುಂಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಬೆಂಗಳೂರು ಸಹಯೋಗದೊಂದಿಗೆ ಜರುಗಿದ ಜನಪದ ಸಾಂಸ್ಕೃತಿಕ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ನೀಡಲಾಗುತ್ತಿದೆ. ಕಲಾವಿದರು ಇದರ ಸದುಪಯೋಗ ಪಡೆಯಬೇಕು. ಮಾಶಾಸನ ಪಡೆಯುತ್ತಿರುವ ಕಲಾವಿದರು ತಮ್ಮ ಜೀವಿತ ಪ್ರಮಾಣ ಪತ್ರ ಕಡ್ಡಾಯವಾಗಿ ಇಲಾಖೆಗೆ ನೀಡಬೇಕು ಎಂದರು.

ಜಿಪಂ ಮಾಜಿ ಉಪಾಧ್ಯಕ್ಷೆ ಶೋಭಾ ಮೇಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ನಾಡು ಪ್ರಾಚೀನ ಕಲೆಗಳ ಬೀಡು. ಹಂತಿ ಪದ, ಲಾವಣಿ ಪದ, ಸೋಬಾನ ಪದ, ಬಿಸೋ ಪದ, ಕುಟ್ಟುವ ಪದ ಸೇರಿದಂತೆ ಮೊದಲಾದ ಕಲೆ ಉಳಿಸ ಬೆಳೆಸಬೇಕಾಗಿದೆ. ಇಂತಹ ಜಾನಪದ ಕಲಾವಿದರು ಮುಂದಿನ ಪೀಳಿಗೆಗೆ ಈ ಕಲೆಗಳನ್ನು ಧಾರೆ ಎರೆಯಬೇಕು ಎಂದರು.

ತಾಲೂಕು ಕಸಾಪ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅನೇಕ ಸಂಗೀತ, ಸುಗಮ ಸಂಗೀತ, ನೃತ್ಯ, ಗಾಯನ, ನಾಟಕ, ಕೋಲಾಟ, ವಚನ ಗೀತೆ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಅಧ್ಯಕ್ಷ ಶಿವು ವಾಲಿಕಾರ, ಹನುಮಂತ ವಾಲಿಕಾರ, ದೇವು ಹಡಪದ, ಮಹಾಂತೇಶ ವಾಲಿಕಾರ, ಸುರೇಶ ಹಡಪದ, ಪ್ರಭಾವತಿ ಬೆಳವಣಕಿಮಠ, ದಾನಪ್ಪ ಹಡಪದ, ಲಲಿತಮ್ಮ ಹೊಸಮನಿ, ಗಂಗಾಧರ ಬಳಗೇರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಮಂಜುನಾಥ ಮುಧೋಳ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ