ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಹೊಂಬೇಗೌಡನದೊಡ್ಡಿ ಬಳಿ ಟಿ.ಕಾಗೇಪುರ ಗ್ರಾಮದ ಪಿ.ಎಂ.ನರೇಂದ್ರಸ್ವಾಮಿ ಅಭಿಮಾನಿಗಳ ಬಳಗ ಆಯೋಜಿಸಿದ್ದ ಜೋಡಿ ಕರುಗಳ ಚಕ್ಕಡಿ ಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದಲ್ಲಿ ಇಂತಹ ಕ್ರೀಡೆಗಳು ನಡೆಯುವುದು ಅಪರೂಪ. ಒಳ್ಳೆಯ ಮನರಂಜನೆ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹಿಸಲು ಈ ಸ್ಪರ್ಧೆ ಸಹಕಾರಿಯಾಗಿದೆ ಎಂದರು. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರಾಸುಗಳ ಪಾತ್ರ ಪ್ರಮುಖ. ರೈತರು ಕೃಷಿ ಜೊತೆಗೆ ಮನರಂಜನೆಗೂ ಜಾನುವಾರುಗಳನ್ನು ಬಳಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಉತ್ತಮ ಮಳೆಯಾಗುತ್ತಿದೆ. ಎಲ್ಲರೂ ವ್ಯವಸಾಯಕ್ಕೂ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.
ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ.ಪುಟ್ಟಬಸವಯ್ಯ ಮಾತನಾಡಿ, ರೈತರು ಕೃಷಿ ಜೊತೆಗೆ ಕುಟುಂಬದ ನಿರ್ವಹಣೆಯ ದೃಷ್ಟಿಯಿಂದ ರಾಸುಗಳು ಮುಖ್ಯ. ಗ್ರಾಮೀಣ ಕ್ರೀಡೆಗಳಾದ ಕೆಸರುಗದ್ದೆ ಓಟ, ಎತ್ತಿನ ಗಾಡಿ, ಚಕ್ಕಡಿ ಗಾಡಿ ಓಟದ ಸ್ಪರ್ಧೆ ಮನರಂಜನೆಗೆ ಅನುಕೂಲವಾಗಿದೆ ಎಂದು ಹೇಳಿದರು.ಚಕ್ಕಡಿಗಾಡಿ ಸ್ಪರ್ಧೆಯು ಗ್ರಾಮೀಣ ಭಾಗದ ಕ್ರೀಡಾಸಕ್ತರ ಗಮನ ಸೆಳೆಯಿತು. ಕ್ರೀಡಾಕೂಟದಲ್ಲಿ ಮಂಡ್ಯ, ಹಾಸನ, ಮೈಸೂರು, ಚಿಕ್ಕಮಗಳೂರು, ತುಮಕೂರು, ರಾಮನಗರ ಸೇರಿ ವಿವಿಧ ಜಿಲ್ಲೆಗಳ 105ಕ್ಕೂ ಜೋಡಿಗಳ ಚಕ್ಕಡಿಗಾಡಿಗಳು ಭಾಗಿಯಾಗಿದ್ದವು.
ವಿಜೇತರಿಗೆ ಬಹುಮಾನ ವಿತರಣೆ: