ಗರ್ಭಿಣಿ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು: ಡಾ. ಅರುಂಧತಿ

KannadaprabhaNewsNetwork |  
Published : Jan 26, 2024, 01:50 AM IST
ಕಾರ್ಯಕ್ರಮದಲ್ಲಿ ೪೦ ಜನಗರ್ಭಿಣಿ ಮಹಿಳೆಯರಿಗೆ ಊಡಿ ತುಂಬುವ ಮೂಲಕ ಸೀಮಂತ ಮಾಡಲಾಯಿತು. | Kannada Prabha

ಸಾರಾಂಶ

ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.

ಗದಗ: ಪ್ರತಿಯೊಬ್ಬ ಗರ್ಭಿಣಿ ಆರೋಗ್ಯಯುತ ಜೀವನ ನಡೆಸಲು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡಬೇಕು. ಹೆಚ್.ಐ.ವಿ ಮುಕ್ತ ಮಗುವನ್ನು ಪಡೆಯಲು ಕಾಯಿಲೆಯ ಮಾಹಿತಿ ಪಡೆದು ಎಲ್ಲ ಗರ್ಭಿಣಿಯರು ತಪಾಸಣೆ ಮಾಡಿಸಿಕೊಳ್ಳಬೇಕೆಂದು ಡಾ. ಅರುಂಧತಿ ಕುಲಕರ್ಣಿ ಹೇಳಿದರು.

ನಗರದ ಹಳೆ ಜಿಲ್ಲಾಸ್ಪತ್ರೆಯ ಡ್ಯಾಪ್ಕ್ಯೂ ಕಚೇರಿ ಸಭಾಭವನದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ (ಪಿಪಿಟಿಸಿಟಿ ಕೇಂದ್ರ) ಸಂಯುಕ್ತ ಆಶ್ರಯದಲ್ಲಿ ನಡೆದ ತಾಯಿಯಿಂದ ಮಗುವಿಗೆ ಹೆಚ್.ಐ.ವಿ ಸೋಂಕು ನಿರ್ಮೂಲನೆಗಾಗಿ ಆಂದೋಲನ ಕಾರ್ಯಕ್ರಮ ಹಾಗೂ ಗರ್ಭಿಣಿ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಗರ್ಭಿಣಿಯು ಪ್ರತಿ ತ್ರೈಮಾಸಿಕದಲ್ಲಿ ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸಲು ತಿಳಿಸಿದರು. ಪ್ರತಿದಿನ ಯೋಗ ವ್ಯಾಯಾಮ ಮಾಡುತ್ತ ಚಟುವಟಿಕೆಯಿಂದ ಇರಲು ತಿಳಿಸಿದರು.

ಹೆಚ್.ಐ.ವಿ ಏಡ್ಸ್ ಕಾಯ್ದೆ ಜಾರಿಯಾಗಿದ್ದು, ಹೆಚ್.ಐ.ವಿಯೊಂದಿಗೆ ಬದುಕುತ್ತಿರುವ ವ್ಯಕ್ತಿಗಳಿಗೆ ಸಾರ್ವಜನಿಕ ಕ್ಷೇತ್ರ ಹಾಗೂ ಖಾಸಗಿ ಕ್ಷೇತ್ರದಲ್ಲಿ ಹೆಚ್.ಐ.ವಿ ಸಂಬಂಧಿತ ತಾರತಮ್ಯದ ವಿರುದ್ಧ ಕಾನೂನಿನ ರಕ್ಷಣೆ ನೀಡಿದೆ ಎಂದರು.

ಜಿಲ್ಲಾ ಐಸಿಟಿಸಿ ಮೇಲ್ವಿಚಾರಕ ಬಸವರಾಜ ಲಾಳಗಟ್ಟಿ ಮಾತನಾಡಿ, ಹೆಚ್.ಐ.ವಿ. ಕಾರ್ಯಕ್ರಮ ಜಿಲ್ಲೆಯಲ್ಲಿ ಉತ್ತಮವಾಗಿ ಕಾರ್ಯಗತಗೊಂಡಿದ್ದು, ಹೆಚ್.ಐ.ವಿ. ಸೋಂಕಿತ ಗರ್ಭಿಣಿ ಮಹಿಳೆಯಿಂದ ಹುಟ್ಟಿದ ಮಕ್ಕಳು ಹೆಚ್.ಐ.ವಿ.ಯಿಂದ ಮುಕ್ತವಾಗಿದ್ದು ಉತ್ತಮ ಪ್ರಗತಿಯಾಗಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆಯು ಹೆಚ್.ಐ.ವಿ ನಿಯಂತ್ರಣದಲ್ಲಿ ಉತ್ತಮ ಪ್ರಗತಿ ಸಾಧಿಸಿದ್ದು, ಹೆಚ್.ಐ.ವಿ. ಸೋಂಕಿನ ಪ್ರಮಾಣ ೦.೦೩% ಇದ್ದು, ಸೋಂಕನ್ನು ಸೊನ್ನೆಗೆ ತರಲು ಪ್ರತಿಯೊಬ್ಬರು ಕೈ ಜೋಡಿಸಬೇಕೆಂದು ತಿಳಿಸಿದರು.

ಹೆಚ್‌ಐವಿ ಸೋಂಕಿತರಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಜಿಲ್ಲೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ವಿವರಿದರು. ಯೋಜನೆಗಳಾದ ಅನ್ನ ಅಂತ್ಯೋದಯ ಯೋಜನೆ, ವಿಶೇಷ ಪಾಲನಾ ಯೋಜನೆ, ವಸತಿ ಸೌಲಭ್ಯ, ಧನಶ್ರೀ ಯೋಜನೆ, ಚೇತನಾಯೋಜನೆ, ಮೈತ್ರಿ ಯೋಜನೆ, ಉಚಿತ ಕಾನೂನು ಸೇವೆ ಹಾಗೂ ಮೂಲಭೂತ ತರಬೇತಿಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ತಾಯಿಯಿಂದ ಮಗುವಿಗೆ ಸೋಂಕಿನ ನಿರ್ಮೂಲನೆಗಾಗಿ, ಹೆಪಟೆಟಿಸ್ ಹಾಗೂ ಸಿಫಿಲಿಸ್ ನಿರ್ಮೂಲನೆಗಾಗಿ ಗರ್ಭಿಣಿಯರಿಗೆ ಈ ಮೂರು ರೋಗಗಳ ತಪಾಸಣೆ ಮಾಡಿ, ಸಾಮೂಹಿಕ ಸೀಮಂತ ಕಾರ್ಯಕ್ರಮ ಮಾಡುವುದರ ಮುಖಾಂತರ ಜಾಗೃತಿಯನ್ನು ಮೂಡಿಸಲಾಯಿತು.

ಡಾ. ಮಹೇಶ ಕೊಪ್ಪಳ, ನಗರ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಚವಡಿ, ಮುರ್ನಾಳ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಇದ್ದರು. ಚನ್ನಮ್ಮ ಸ್ವಾಗತಿಸಿದರು. ರೇಣುಕಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಸಿಯೋಥೆರಪಿಗೆ ವಿಶ್ವಾದ್ಯಂತ ವಿಫುಲ ಅವಕಾಶ : ಯುಟಿ ಖಾದರ್‌
ಪುತ್ರನ ಪಾಸ್‌ಪೋರ್ಟ್‌ಗಾಗಿ ಅನಂತ್‌ ಕೋರ್ಟ್‌ಗೆ ಮನವಿ