ಕನ್ನಡಪ್ರಭ ವಾರ್ತೆ ಬಳ್ಳಾರಿ
ಎಮ್ಮಿಗನೂರು ಗ್ರಾಮದಲ್ಲಿ ಕ್ಷೇತ್ರ ಭೇಟಿಯ ಸಂದರ್ಭದಲ್ಲಿ ಗರ್ಭಿಣಿ ತಾಯಿಯ ಮನೆ ಭೇಟಿ ಕೈಗೊಂಡು ತಾಯಿ ಕಾರ್ಡ್, ತೂಕ, ದೇಹದಲ್ಲಿ ರಕ್ತದ ಪ್ರಮಾಣ ಮುಂತಾದವುಗಳನ್ನು ಪರಿಶೀಲಿಸಿ ಮಾತನಾಡಿದರು.
ಶಿಶು ಮತ್ತು ತಾಯಿ ಮರಣವನ್ನು ತಡೆಗಟ್ಟಲು ಗರ್ಭಿಣಿ ಎಂದು ಗೊತ್ತಾದ ದಿನದಿಂದ ಅಗತ್ಯ ಪರೀಕ್ಷೆಗಳು, ದೇಹದಲ್ಲಿ ರಕ್ತದ ಪ್ರಮಾಣ ಅನುಸಾರ ಕಬ್ಬಿಣಾಂಶ ಮಾತ್ರೆಗಳ ಸೇವನೆ, ತೂಕ, ರಕ್ತದೊತ್ತಡ, ಎಚ್ಐವಿ, ಎಚ್ಬಿಎಸ್ಎಜಿ ಮುಂತಾದ ಅಗತ್ಯ ಪರೀಕ್ಷೆಗೆ ಒಳಗಾಗಬೇಕು ಎಂದು ಸಲಹೆ ನೀಡಿದರು.ಹೆರಿಗೆಯನ್ನು ಆಸ್ಪತ್ರೆಯಲ್ಲಿಯೇ ಮಾಡಿಸಲು ಕುಟುಂಬದ ಸದಸ್ಯರಿಗೆ ತಿಳಿಸುವುದರ ಜೊತೆಗೆ ಪ್ರಸ್ತುತ ಪ್ರಖರ ಬಿಸಿಲಿನ ಹಿನ್ನೆಲೆಯಲ್ಲಿ ಗರ್ಭಿಣಿಯರ ಹೆಚ್ಚು ಪೌಷ್ಟಿಕಯುಕ್ತ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಸಾಧ್ಯವಾದಷ್ಟು ಹೆಚ್ಚು ನೀರು ಕುಡಿಯುವುದಕ್ಕೆ ಕುಟುಂಬದ ಸದಸ್ಯರಿಗೆ ತಿಳಿಸಿದರು. ಇವುಗಳ ಜೊತೆಗೆ ಗರ್ಭಾವಸ್ಥೆಯಲ್ಲಿ ಕಂಡುಬರಬಹುದಾದ ತೊಂದರೆಗಳು ಮತ್ತು ಅವುಗಳ ಲಕ್ಷಣಗಳಾಧಾರದ ಮೇಲೆ ತಕ್ಷಣ ವೈದ್ಯರ ಭೇಟಿ ಮಾಡುವಂತೆ ತಿಳಿಸಿದರು.1ರಿಂದ 3 ತಿಂಗಳ ಮೊದಲ ತ್ರೈಮಾಸಿಕದಲ್ಲಿ ಗರ್ಭಿಣಿಗೆ ಗೊತ್ತಿಲ್ಲದೆ ಎಕ್ಟೋಪಿಕ್ ಪ್ರೆಗ್ನೆನ್ಸಿ ಉಂಟಾಗುವ ತೊಂದರೆಯಾಗಿರುತ್ತದೆ. ಗರ್ಭಿಣಿಗೆ ಗರ್ಭನಾಳದಲ್ಲಿ ಅಥವಾ ಗರ್ಭಕೋಶದ ಹೊರಭಾಗದಲ್ಲಿ ಗರ್ಭಕಂಠದ ಹತ್ತಿರ ಗರ್ಭ ನಿಂತಲ್ಲಿ ಅದನ್ನು ಎಕ್ಟೋಪಿಕ್ ಪ್ರೆಗ್ನೆನ್ಸಿ ಎನ್ನಲಾಗುವುದು. ಸಾಮಾನ್ಯವಾಗಿ ಈ ರೀತಿಯ ಗರ್ಭಧಾರಣೆಯಲ್ಲಿ ಕೆಲವೊಮ್ಮೆ ಗರ್ಭಿಣಿಗೆ ತೀವ್ರ ರೀತಿಯ ರಕ್ತಸ್ರಾವ, ಸಹಿಸಲಾಗದ ಅಸಾಧಾರಣ ನೋವು, ತಲೆ ತಿರುಗುವಿಕೆ ಕಂಡುಬರಬಹುದು. ಸಾಮಾನ್ಯವಾಗಿ ಈ ಹಂತದಲ್ಲಿ ಕಾರಣವಿಲ್ಲದೆ ರಕ್ತಸ್ರಾವವಾಗುವುದು, ಇದ್ದಕ್ಕಿದ್ದಂತೆ ಹೊಟ್ಟೆನೋವು ಅಥವಾ ಮೊದಲನೆ ಹೆರಿಗೆ ಸಿಜೆರಿಯನ್ ಆಗಿದ್ದರೆ ನೋವು ಜಾಸ್ತಿ ಕಂಡುಬರುವುದು, ಗರ್ಭ ಕಂಠದ ಮಾರ್ಗ ಸಣ್ಣದಿದ್ದಾಗ, ದುರ್ವಾಸನೆಯುಕ್ತ ಯೋನಿಸ್ರಾವವಾಗುತ್ತಿದ್ದರೆ ನಿರ್ಲಕ್ಷಿಸದೆ ವೈದ್ಯರ ಬಳಿ ತಕ್ಷಣ ತೆರಳಬೇಕು ಎಂದು ತಿಳಿಸಿದರು.