ಬಹುರೂಪಿ ನಾಟಕೋತ್ಸವ ಯಶಸ್ಸಿಗೆ ಇಲಾಖೆಗಳು ಕೈಜೋಡಿಸಿ - ಜಿಲ್ಲಾಧಿಕಾರಿ ಡಾಯಕೆ.ವಿ.ರಾಜೇಂದ್ರ

KannadaprabhaNewsNetwork |  
Published : Feb 21, 2024, 02:08 AM IST
15 | Kannada Prabha

ಸಾರಾಂಶ

ಮಾ.6 ರಂದು ಜಾನಪದೋತ್ಸವ ಉದ್ಘಾಟನೆಗೂಳ್ಳಲಿದ್ದು, 7 ರಿಂದ ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕ ಪ್ರದರ್ಶನಕ್ಕೆ 118 ಅರ್ಜಿಗಳು ಸಲ್ಲಿಕೆಯಾಗಿದ್ದು ಸಮಿತಿಯು 18 ನಾಟಕಗಳನ್ನು ಆಯ್ಕೆ ಮಾಡಿದೆ. ಸಾಮಾಜಿಕ ಸಮಸ್ಯೆಗಳಿಗೆ ಒತ್ತು ನೀಡುವುದರೊಂದಿಗೆ, ಪ್ರಯೋಗಶೀಲ ನಾಟಕಗಳಿಗೆ ಎಲ್ಲಾ ವಯೋಮಾನದವರಿಗೆ ಸಲ್ಲುವ ನಾಟಕಗಳು ಆಯ್ಕೆಯಾಗಿದ್ದು, ಕನ್ನಡ ಹಾಗೂ ಬಹುಭಾಷಾ ನಾಟಕಗಳು ಇರಲಿವೆ. ಇದರೊಂದಿಗೆ ರಾಷ್ಟ್ರೀಯ ವಿಚಾರ ಸಂಕಿರಣಗಳು ಜರುಗಲಿದ್ದು, ಕಲಾತ್ಮಕ ಹಾಗೂ ವಿದ್ವತ್ಪೂರ್ಣ ಚಿಂತನೆಗೆ ಹಚ್ಚುವ ವಿಷಯಗಳಿರಲಿ

ಕನ್ನಡಪ್ರಭ ವಾರ್ತೆ ಮೈಸೂರು

ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಇವ ನಮ್ಮವ, ಇವ ನಮ್ಮವ ಎಂಬ ಉಕ್ತಿಯ ಶೀರ್ಷಿಕೆಯಡಿ ಹೆಸರಾಂತ ಬಹುರೂಪಿ ನಾಟಕೋತ್ಸವ ಮಾ.6 ರಿಂದ 11 ರವರಗೆ ರಂಗಾಯಣದಲ್ಲಿ ಜರುಗಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ನಾಟಕೋತ್ಸವದ ಯಶಸ್ಸಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಹುರೂಪಿ ನಾಟಕೋತ್ಸವ ಪೂರ್ವಭಾವಿ ಸಭೆಯಲ್ಲಿ ನಾಟಕೋತ್ಸವ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಬಹುರೂಪಿ ನಾಟಕೋತ್ಸವ ಜೈಪುರ ಉತ್ಸವ, ಬೆಂಗಳೂರು ಹಬ್ಬದ ರೀತಿಯಲ್ಲಿ ಬ್ರಾಂಡಿಂಗ್ ಆಗಬೇಕು ಎಂದರು.

ಮಾ.6 ರಂದು ಜಾನಪದೋತ್ಸವ ಉದ್ಘಾಟನೆಗೂಳ್ಳಲಿದ್ದು, 7 ರಿಂದ ನಾಟಕಗಳು ಪ್ರದರ್ಶನಗೊಳ್ಳಲಿವೆ. ನಾಟಕ ಪ್ರದರ್ಶನಕ್ಕೆ 118 ಅರ್ಜಿಗಳು ಸಲ್ಲಿಕೆಯಾಗಿದ್ದು ಸಮಿತಿಯು 18 ನಾಟಕಗಳನ್ನು ಆಯ್ಕೆ ಮಾಡಿದೆ. ಸಾಮಾಜಿಕ ಸಮಸ್ಯೆಗಳಿಗೆ ಒತ್ತು ನೀಡುವುದರೊಂದಿಗೆ, ಪ್ರಯೋಗಶೀಲ ನಾಟಕಗಳಿಗೆ ಎಲ್ಲಾ ವಯೋಮಾನದವರಿಗೆ ಸಲ್ಲುವ ನಾಟಕಗಳು ಆಯ್ಕೆಯಾಗಿದ್ದು, ಕನ್ನಡ ಹಾಗೂ ಬಹುಭಾಷಾ ನಾಟಕಗಳು ಇರಲಿವೆ. ಇದರೊಂದಿಗೆ ರಾಷ್ಟ್ರೀಯ ವಿಚಾರ ಸಂಕಿರಣಗಳು ಜರುಗಲಿದ್ದು, ಕಲಾತ್ಮಕ ಹಾಗೂ ವಿದ್ವತ್ಪೂರ್ಣ ಚಿಂತನೆಗೆ ಹಚ್ಚುವ ವಿಷಯಗಳಿರಲಿ ಎಂದರು.

ನಾಟಕೋತ್ಸವಕ್ಕೆ ಗಣ್ಯರು, ಚಿಂತಕರು ಆಗಮಿಸುವುದರಿಂದ ಅವರಿಗೆ ಉತ್ತಮ ವ್ಯವಸ್ಥೆ ಕಲ್ಪಿಸಿ, ಪಾಲಿಕೆಯವರು ಕಾರ್ಯಕ್ರಮ ನಡೆಯುವ ಕಲಾಮಂದಿರ ಸುತ್ತಮುತ್ತಲಿನ ಸ್ವಚ್ಚತೆಗೆ ಗಮನ ಹರಿಸಿ, ಸಾವಿರಾರು ಸಂಖ್ಯೆಯಲ್ಲಿ ಜನ ಸೇರುವುದರಿಂದ ಟ್ರಾಪಿಕ್ ಸಮಸ್ಯೆ ಆಗದಂತೆ ಹಾಗೂ ಸಾರಿಗೆ ಇಲಾಖೆಯವರು ಮುಖ್ಯ ಸ್ಥಳಗಳಿಗೆ ಬಸ್ ಸಂಚಾರ ವ್ಯವಸ್ಥೆ ಇರುವಂತೆ ಸಂಬಂಧಿಸಿದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿ ಎಂದು ಅವರು ಸೂಚಿಸಿದರು

ರಂಗಾಯಣದ ಉಪ ನಿರ್ದೇಶಕಿ ನಿರ್ಮಲಾ ಮಠಪತಿ ಮಾತನಾಡಿ, ನಾಟಕೋತ್ಸವ 4 ಸ್ಥಳಗಳಲ್ಲಿ ನಡೆಯಲಿದೆ. 5 ದಿನಗಳ ಚಲನಚಿತ್ರೋತ್ಸವ, ರಾಷ್ಟ್ರೀಯ ವಿಚಾರ ಸಂಕಿರಣ, ಕರಕುಶಲ ವಸ್ತುಪ್ರದರ್ಶನ, ಕರಕುಶಲ ಪ್ರಾತ್ಯಕ್ಷಿಕೆ, ಚಿತ್ರಕಲಾ ಪ್ರದರ್ಶನ, ಚಾರಿತ್ರಿಕ ದಾಖಲೆಗಳ ಪ್ರದರ್ಶನ, ಜಾನಪದ ಕಲಾ ಪ್ರದರ್ಶನ ಹಾಗೂ ರಂಗ ಗೀತೆಗಳ ಗಾಯನ ಇರಲಿದೆ ಎಂದರು.

ಹಿರಿಯ ರಂಗಕರ್ಮಿ ಉಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಪಾಲಿಕೆ ಉಪ ಆಯುಕ್ತ ಸೋಮಶೇಖರ್, ತೋಟಗಾರಿಕೆ ಉಪ ನಿರ್ದೇಶಕ ಮಂಜುನಾಥ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೈಕ್‌ಗೆ ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿ ಸಂಚಾರ: ಪ್ರಕರಣ ದಾಖಲು
ಸಾಲದ ಹೊರೆ ಹೆಚ್ಚಿಸಿ, ಕರಾವಳಿ ಕಡೆಗಣಿಸಿದ ಬಜೆಟ್: ಕಾಮತ್‌