ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನಿಂದ ಮಂಡ್ಯದಲ್ಲಿ ಡಿ.20 ರಿಂದ 3ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ವಹಿಸಲಿದ್ದಾರೆ ಎಂದರು.
ಕಸಾಪ ರಾಜ್ಯಾಧ್ಯಕ್ಷ ನಾಡೊಜ ಡಾ.ಮಹೇಶ್ ಜ್ಯೋಷಿ ಸಭೆ ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಂಚಾಲಕರಾದ ಮೀರಾಶಿವಲಿಂಗಯ್ಯ ಉಪಸ್ಥಿತಿ ಇರಲಿದ್ದಾರೆ. ಸಭೆಗೆ ಶಾಸಕರು, ತಾಲೂಕಿನ ಗ್ರಾಪಂ, ತಾಪಂ, ಜಿಪಂ ಹಾಗೂ ಪುರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಮತ್ತು ಕನ್ನಡಪರ ಹೋರಾಟಗಾರರು, ಕಸಾಪ ಅಜೀವ ಸದಸ್ಯರು ಸೇರಿದಂತೆ ಪಕ್ಷಾತೀತವಾಗಿ ಎಲ್ಲರು ಭಾಗವಹಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಸ್ವಾಮೀಗೌಡ, ಮಹಿಳಾ ಆಶಾಲತಾ ಪುಟ್ಟೇಗೌಡ, ನಗರ ಘಟಕ ಅಧ್ಯಕ್ಷ ಸುರೇಶ್, ತಾಲೂಕು ಘಟಕದ ಕೋಸಾಧ್ಯಕ್ಷ ಬಸವರಾಜು, ನಿಕಟಪೂರ್ವ ಅಧ್ಯಕ್ಷ ಪುರುಷೊತ್ತಮ್ ಇದ್ದರು.ಅ.18 ರಂದು ಪೂರ್ವಭಾವಿ ಸಭೆಪಾಂಡವಪುರ:ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಅ.18 ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಕಸಾಪ ಭವನದಲ್ಲಿ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ಜೋಷಿ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರಾದ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಪೂರ್ವಭಾವಿ ಸಭೆ ಕಡೆಯಲಾಗಿದೆ.