ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್

KannadaprabhaNewsNetwork |  
Published : Jun 04, 2024, 12:30 AM IST
ದ್ವಿತೀಯ ತಂಡ | Kannada Prabha

ಸಾರಾಂಶ

ಕೊಡಗು ಅಂಚೆ ನೌಕರರ ಆಶ್ರಯದಲ್ಲಿ ಪ್ರೀಮಿಯರ್‌ ಲೀಗ್‌ ಕ್ರಿಕೆಟ್‌ ಪಂದ್ಯಾಟ ನಡೆಯಿತು. ಒಟ್ಟು 4 ತಂಡಗಳು ಭಾಗವಹಿಸಿದ್ದವು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನಡೆಯಿತು.

ಕುಶಾಲನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಕೊಡಗು ಜಿಲ್ಲೆಯ ಅಂಚೆ ವಿಭಾಗದ ಮೂರು ಉಪವಿಭಾಗ ಮತ್ತು ಪ್ರಧಾನ ಅಂಚೆ ಕಚೇರಿ ಸೇರಿದಂತೆ ಒಟ್ಟು ನಾಲ್ಕು ತಂಡಗಳು ಪಾಲ್ಗೊಂಡಿದವು.

ಹಾಸನ ಅಂಚೆ ವಿಭಾಗದ ಉಪ ಅಧೀಕ್ಷಕರಾದ ಎಚ್. ಸೋಮಯ್ಯ ಅವರು ಪಂದ್ಯಾಟಕ್ಕೆ ಚಾಲನೆ ನೀಡಿದರು. ಮಡಿಕೇರಿ ಅಂಚೆ ನಿರೀಕ್ಷಕರಾದ ಬಿ ಡಿ ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸೋಮವಾರಪೇಟೆ ಉಪವಿಭಾಗ ಮತ್ತು ಮಡಿಕೇರಿ ಉಪ ವಿಭಾಗಗಳ ನಡುವೆ ಫೈನಲ್ ಪಂದ್ಯಾವಳಿ ನಡೆದು ಸೋಮವಾರಪೇಟೆ ಉಪ ವಿಭಾಗ ತಂಡ ಜಯಗಳಿಸಿತು.

ಪಂದ್ಯ ಪುರುಷೋತ್ತಮರಾಗಿ ಶಿವಕುಮಾರ್, ಉತ್ತಮ ತಂಡವಾಗಿ ಮಡಿಕೇರಿ ಉಪ ವಿಭಾಗ ಪ್ರಶಸ್ತಿ ಪಡೆದುಕೊಂಡಿತು.

ಪಂದ್ಯಾವಳಿಯಲ್ಲಿ ಮಡಿಕೇರಿ ಪ್ರಧಾನ ಕಚೇರಿಯ ಪ್ರಮುಖರಾದ ಬೇಬಿ ಜೋಸೆಫ್, ಸಿಎಲ್ ಮಹೇಶ್, ಸಂದೀಪ್, ಸೋಮಪ್ಪ, ವಿರಾಜಪೇಟೆ ಉಪವಿಭಾಗದ ಮಂಜು, ಶಫೀರ್, ಸತ್ಯ ಪ್ರಸನ್ನ, ಸೋಮವಾರಪೇಟೆ ಉಪವಿಭಾಗದ ಉಪ ಅಧೀಕ್ಷಕ ಶಿವಕುಮಾರ್, ಅಶೋಕ್, ಎಂ ಎಸ್ ಮಂಜುನಾಥ್, ಭಾಸ್ಕರ್ ಗಾಡ್ವಿನ್, ಮನೋಜ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ