ಉಡುಪಿ: ಭಗವಾನ್ ಕೃಷ್ಣ ಎಲ್ಲರ ಮನೆಮನದ ಮಗು. ಎಲ್ಲರಿಗೂ ಆಪ್ತ. ಆತನಿಗೆ ಸಮರ್ಪಿಸುವ ಎಲ್ಲಾ ಕಾಣಿಕೆ ಎಲ್ಲೂ ಹೋಗದೆ ಮನೆಯ ಮಗುವಿನ ಏಳ್ಗೆಗೆ ಕಾರಣವಾಗುತ್ತದೆ. ಹೊರೆಕಾಣಿಕೆಯೂ ಇದಕ್ಕೆ ಹೊರತಾಗಿಲ್ಲ. ಶೀರೂರು ಪರ್ಯಾಯ ಅದು ಭಕ್ತರ ಪರ್ಯಾಯ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಭಾವೀ ಪರ್ಯಾಯ ಶಿರೂರು ಮಠದ ದಿವಾನ ಡಾ.ಉದಯಕುಮಾರ ಸರಳತ್ತಾಯ ಹೇಳಿದರು.ಅವರು ಪರ್ಯಾಯೋತ್ಸವದ ಪೂರ್ವಬಾವೀ ಹೊರಕಾಣಿಕೆ - ಸಾಂಸ್ಕೃತಿಕ ಹಾಗೂ ಪ್ರಚಾರ ಸಮಿತಿಗಳ ಸಭೆಯನ್ನು ಉದ್ದೇಶಿಸಿ ಮಾತಾಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶಪಾಲ್ ಸುವರ್ಣ ಸರ್ವರ ಸಹಕಾರ ಕೋರಿದರು. ಸಭೆಯನ್ನು ಉದ್ದೇಶಿಸಿ ಪ್ರಮುಖರಾದ ಮಟ್ಟಾರ್ ರತ್ನಾಕರ ಹೆಗ್ಡೆ ,ರಮೇಶ್ ಕಾಂಚನ್, ಜಯಪ್ರಕಾಶ ಕೆದ್ಲಾಯ, ಗೋಪಾಲಕೃಷ್ಣ ಅಸ್ರಣ್ಣ, ಡಾ. ವಿಜಯೇಂದ್ರ ರಾವ್ ಮೊದಲಾದವರು ಮಾತಾಡಿದರು.ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪ್ರಚಾರ ಸಿದ್ಧತೆಯ ಕುರಿತಾಗಿಯೂ ಚರ್ಚಿಸಲಾಯಿತು. ಅಶ್ವತ್ಥ ಭಾರದ್ವಾಜ್ ಸ್ವಾಗತಿಸಿ ವಂದಿಸಿದರು.