ಕಸದಿಂದ ಸಾವಯವ ಗೊಬ್ಬರ ತಯಾರಿಕೆ: ವರಸಿದ್ಧಿ ವೇಣುಗೋಪಾಲ್‌

KannadaprabhaNewsNetwork |  
Published : Jul 05, 2024, 12:48 AM IST
ಇಂದಾವರ ಗ್ರಾಮದ ಸಮೀಪದಲ್ಲಿರುವ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಸಾವಯವ ಗೊಬ್ಬರ ಮಾರಾಟಕ್ಕೆ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಚಾಲನೆ ನೀಡಿದರು. ಪೌರಾಯುಕ್ತ ಬಸವರಾಜ್‌, ತೇಜಸ್ವಿನಿ, ವೆಂಕಟೇಶ್, ಮಾಡ್ಲ ಪ್ರಕಾಶ್‌ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ನಗರದಲ್ಲಿ ಸಂಗ್ರಹಿಸಲಾಗುತ್ತಿರುವ ಮನೆ ಮನೆ ಕಸದಿಂದ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಹೇಳಿದರು.

ಇಂದಾವರ ಗ್ರಾಮದ ಸಮೀಪದ ಕಸ ವಿಲೇವಾರಿ ಘಟಕದಲ್ಲಿ ಸಾವಯವ ಗೊಬ್ಬರ ಮಾರಾಟಕ್ಕೆ ಚಾಲನೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಗರದಲ್ಲಿ ಸಂಗ್ರಹಿಸಲಾಗುತ್ತಿರುವ ಮನೆ ಮನೆ ಕಸದಿಂದ ಸಾವಯವ ಗೊಬ್ಬರ ತಯಾರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ಹೇಳಿದರು.

ಇಂದಾವರ ಗ್ರಾಮದ ಸಮೀಪದ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಸಾವಯವ ಗೊಬ್ಬರ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೆಜಿಗೆ 2 ರು.ಗಳಂತೆ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದರು.

ಟನ್‌ಗಟ್ಟಲೇ ಸಂಗ್ರಹಿಸುವ ಕಸವನ್ನು ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್‌ನಿಂದ ಬೇರ್ಪಡಿಸಿ ಟ್ರಾಮರ್ ಯಂತ್ರದ ಸಹಾಯ ದಿಂದ ಮೂರು ವಿಭಾಗಗಳಲ್ಲಿ ವಿಂಗಡಿಸಲಾಗಿದೆ. ಅಂತಿಮ ಹಂತದಲ್ಲಿ ಸಾವಯವ ಗೊಬ್ಬರ ತಯಾರಿಕೆಯಾಗಲಿದೆ. ಪ್ರಸ್ತುತ 75 ಟನ್‌ಗಳಷ್ಟು ಗೊಬ್ಬರ ಮಾರಾಟಕ್ಕೆ ಸಿದ್ಧವಾಗಿ ರೈತರು, ಬೆಳೆಗಾರರಿಗೆ ಹರಾಜು ಮೂಲಕ ವಿತರಿಸ ಲಾಗುವುದು ಎಂದರು.

ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಹಲವಾರು ವರ್ಷಗಳಿಂದ ಕಸದ ತ್ಯಾಜ್ಯ ಸಂಸ್ಕರಿಸಿ, ಗೊಬ್ಬರ ತಯಾರಿಸಿ ರೈತರಿಗೆ ಉಚಿತವಾಗಿ ಕೊಡುವ ವ್ಯವಸ್ಥೆಯಿತ್ತು. ಇದೀಗ ಹರಾಜು ಮುಖಾಂತರ ಮಾರಾಟ ಮಾಡಲಾಗುತ್ತಿದೆ. ಅಲ್ಲದೇ ಸಾರ್ವಜನಿಕ ವಲಯದಲ್ಲಿ ಕಸದಿಂದ ಗೊಬ್ಬರ ತಯಾರಿಸುವ ಪ್ರಕ್ರಿಯೆ ಮನವರಿಕೆ ಮಾಡಲಾಗುತ್ತಿದೆ ಎಂದರು.ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲೇ ಬೀಸಾಡುವ ಬದಲು ಕಸದ ವಾಹನಗಳಿಗೆ ಹಾಕಬೇಕು. ಪ್ರತಿ ಮೂರು ತಿಂಗಳಿ ಗೊಮ್ಮೆ ಈ ರೀತಿ ಕಸವನ್ನು ವಿಂಗಡಿಸುವ ಮೂಲಕ ಗೊಬ್ಬರ ತಯಾರಿಸಿ ಮಾರಾಟ ಮಾಡಲಾಗುವುದು. ಈ ರೀತಿಯ ಉತ್ತಮ ಕೆಲಸಕ್ಕೆ ಸಾರ್ವಜನಿಕರ ಸಹಕಾರ ಅತ್ಯವಶ್ಯಕವಾಗಿದೆ. ಹೀಗಾಗಿ ಹಸಿ ಹಾಗೂ ಒಣ ಕಸವನ್ನು ಬೇರ್ಪಡಿಸಿ ನೀಡಿದರೆ ಗೊಬ್ಬರ ತಯಾರಿಸಲು ಇನ್ನಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ ತೇಜಸ್ವಿನಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಈಶ್ವರಪ್ಪ, ವೆಂಕಟೇಶ್, ಮಾಡ್ಲ ಪ್ರಕಾಶ್, ಮಲ್ಲೇಶ್ ಹಾಗೂ ನಗರಸಭೆ ಸಿಬ್ಬಂದಿ ಹಾಜರಿದ್ದರು. 4 ಕೆಸಿಕೆಎಂ 2ಇಂದಾವರ ಗ್ರಾಮದ ಸಮೀಪದ ಕಸ ವಿಲೇವಾರಿ ಘಟಕದಲ್ಲಿ ಗುರುವಾರ ಸಾವಯವ ಗೊಬ್ಬರ ಮಾರಾಟಕ್ಕೆ ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್‌ ಚಾಲನೆ ನೀಡಿದರು. ಪೌರಾಯುಕ್ತ ಬಸವರಾಜ್‌, ತೇಜಸ್ವಿನಿ, ವೆಂಕಟೇಶ್, ಮಾಡ್ಲ ಪ್ರಕಾಶ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''
ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ