ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಮಂಗಳವಾರ (ಡಿ.೧೬) ಮಧ್ಯಾಹ್ನ ೩.೧೫ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಯಂತಿ ಮಹೋತ್ಸವ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ವಹಿಸುವರು. ಸ್ಮರಣ ಸಂಚಿಕೆಯನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಚಲುವರಾಯಸ್ವಾಮಿ ಬಿಡುಗಡೆಗೊಳಿಸುವರು. ವಿಶೇಷ ಆಹ್ವಾನಿತರಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಪಾಲ್ಗೊಳ್ಳುವರು ಎಂದರು.
ಸಂಜೆ ೫ ಗಂಟೆಗೆ ನಡೆಯಲಿರುವ ಸಾವಯವ ಕೃಷಿ-ಸಿರಿಧಾನ್ಯ ಮತ್ತು ಉತ್ಪನ್ನಗಳು ಕುರಿತ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಂದ್ರವನ ಆಶ್ರಮದ ಶ್ರೀತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ವಹಿಸುವರು. ಆರ್ಗ್ ಟ್ರೀ ಸಿಇಒ ಬಿ.ಮಹೇಶ್ ತೆಂಕಹಳ್ಳಿ ಉಪನ್ಯಾಸ ನೀಡುವರು ಎಂದರು.ಸುತ್ತೂರು ಅತಿ ಪುರಾತನ ಮಠಗಳಲ್ಲಿ ಒಂದಾಗಿದ್ದು, ಜನಪರ ಕಾಳಜಿ, ಮೌಲ್ಯ, ಶೈಕ್ಷಣಿಕವಾಗಿ ಅನೇಕ ಸುಧಾರಣೆಗಳನ್ನು ಮಾಡುತ್ತಾ ಬಂದಿದೆ. ಸಮಾಜದ ಮೂಢನಂಬಿಕೆಯನ್ನು ಹೋಗಲಾಡಿಸಿ ಅನೇಕರಿಗೆ ಆಶ್ರಯ ನೀಡಿದೆ. ಜಯಂತ್ಯುತವದ ಅಂಗವಾಗಿ ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವ ಮೂರ್ತಿ ಸುತ್ತೂರು ಕ್ಷೇತ್ರದಿಂದ ಟಿ.ನರಸೀಪುರ, ಬೆಳಕವಾಡಿ ಮಾರ್ಗವಾಗಿ ಮಳವಳ್ಳಿ ತಲುಪಲಿದೆ ಎಂದರು.
ಡಿ.೨೧ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ತುಮಕೂರು ಶ್ರೀಸಿದ್ಧಗಂಗಾಮಠದ ಶ್ರೀಸಿದ್ಧಲಿಂಗ ಮಹಾ ಸ್ವಾಮಿಗಳು, ರಾಜನಹಳ್ಳಿ ಶ್ರೀವಾಲ್ಮೀಕಿ ಪೀಠದ ಶ್ರೀಪ್ರಸನ್ನಾನಂದ ಪುರಿ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರೋಪ ಭಾಷಣ ಮಾಡುವರು. ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಎಚ್.ಸಿ.ಮಹದೇವಪ್ಪ, ಈಶ್ವರ್ ಬಿ.ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಲಕ್ಷ್ಮೀ ಆರ್.ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದಿನೇಶ್ಗೂಳಿಗೌಡ ವಿವಿಧ ಮಠಗಳ ಮಠಾಧೀಶರು ಭಾಗವಹಿಸುವರು.
ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಮಾರೇಹಳ್ಳಿ ಹೆಲಿಪ್ಯಾಡ್ನಲ್ಲಿ ೩ ಹೆಲಿಕಾಪ್ಟರ್ ನಿಲ್ಲುವಂತೆ ಜಾಗ ಗುರುತಿಸಲಾಗಿದೆ. ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಇಬ್ಬರು ಎಸ್ಪಿ, ನಾಲ್ಕು ಮಂದಿ ಡಿವೈಎಸ್ಪಿ ಸೇರಿದಂತೆ ೧೦೦೦ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ೧೦೦ ಮಳಿಗೆಗಳನ್ನು ತೆರೆದಿದ್ದು, ೫೦ ಮಳಿಗೆಗಳನ್ನು ಮಹಿಳಾ ಸ್ವಸಹಾಯ ಗುಂಪುಗಳಿಗೆ ನೀಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಪ್ರತಿನಿತ್ಯ ದಾಸೋಹ ನೀಡಲಾಗುವುದು ಎಂದರು.
ಕನ್ನಡಪ್ರಭ ವಾರ್ತೆ ಮಂಡ್ಯ
ಡಿ.೧೬: ಬೆಳಗ್ಗೆ- ವಾಂಗೀಬಾತ್, ಕೇಸರಿ ಬಾತು, ರವೆ ಉಪ್ಪಿಟ್ಟು, ಮಧ್ಯಾಹ್ನ - ಬಿಸಿಬೇಳೆ ಬಾತ್, ಕಾರಾಬೂಂದಿ, ಮೊಸರನ್ನ, ಡ್ರೈ ಜಾಮೂನು, ರಾತ್ರಿ - ಹೋಳಿಗೆ, ತುಪ್ಪ, ಅನ್ನ ಸಾಂಬಾರ್, ಗಟ್ಟಿ ಮಜ್ಜಿಗೆ.
ಡಿ.೧೮: ಬೆಳಗ್ಗೆ- ರವೆ ವಾಂಗಿಬಾತ್, ಟಮೋಟೋಬಾತ್, ಚಟ್ನಿ. ಮಧ್ಯಾಹ್ನ ಅಕ್ಕಿಪಾಯಸ, ಕೋಸಂಬರಿ, ಅನ್ನ, ಸಾಂಬಾರ್, ಗಟ್ಟಿಮಜ್ಜಿಗೆ, ರಾತ್ರಿ- ಬೆಲ್ಲದ ಮಿಠಾಯಿ, ವಾಂಗಿಬಾತ್, ಮೊಸರನ್ನ.
ಡಿ.೨೦: ಬೆಳಗ್ಗೆ- ಅಕ್ಕಿ ಉಪ್ಪಿಟ್ಟು, ಕೇಸರಿಬಾತ್, ಚಟ್ನಿ. ಮಧ್ಯಾಹ್ನ- ಗೋಧಿ ಪಾಯಸ, ಕೋಸು ಕಡ್ಲೆಬೇಳೆ ಪಲ್ಯ, ಅನ್ನ-ಸಾಂಬಾರ್. ರಾತ್ರಿ- ಹಾರ್ಲಿಕ್ಸ್ ಬರ್ಫಿ, ಮೆಂತ್ಯ ಬಾತ್, ಮೊಸರನ್ನ.
ಡಿ.೨೧: ವಾಂಗಿಬಾತು, ಅವಲಕ್ಕಿ ಉಪ್ಪಿಟ್ಟು, ಚಟ್ನಿ. ಮಧ್ಯಾಹ್ನ- ಹೆಸರುಬೇಳೆ ಪಾಯಸ, ಸುವರ್ಣಗೆಡ್ಡೆ ಪಲ್ಯ, ಅನ್ನ-ಸಾಂಬಾರ್. ರಾತ್ರಿ- ಲಾಡು, ನಿಂಬೆಹಣ್ಣಿನ ಚಿತ್ರಾನ್ನ, ಮೊಸರನ್ನ.ಡಿ.೨೨: ಖಾರಪೊಂಗಲ್, ಸಿಹಿಪೊಂಗಲ್, ಹುಳಿಗೊಜ್ಜು