ಕನ್ನಡಪ್ರಭ ವಾರ್ತೆ ಪಾವಗಡ
ಭಾನುವಾರ ಪಟ್ಟಣದಲ್ಲಿ ಡಿಎಸ್ಎಸ್ ಜಿಲ್ಲಾ ಯುವ ಘಟಕದ ಟಿ.ಎನ್. ಪೇಟೆ ರಮೇಶ್ ಇತರೆ ಮುಖಂಡರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ತಾಲೂಕಿನ ಮಾದಿಗ ಹಾಗೂ ದಲಿತ ಸಮುದಾಯದ ಒಳತಿಗಾಗಿ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ರ ಬೃಹತ್ ಸಮಾರಂಭ ಆಯೋಜನೆಗೆ ಉದ್ದೇಶಿಸಲಾಗಿದೆ. ಮಾದಿಗ ಸಮಾಜವನ್ನು ಒಗ್ಗೂಡಿಸುವ ಹಾಗೂ ಸಮಾಜದ ಎಲ್ಲಾ ಮುಖಂಡರು ಮತ್ತು ಶೋಷಿತ, ಜನಪರ ಹೋರಾಟಗಾರರ ಸಹಕಾರದ ಮೇರೆಗೆ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಮಾದಿಗ ಸಮಾಜ ಹಾಗೂ ದಲಿತಪರ ಸಂಘಟನೆಯ ಎಲ್ಲಾ ಮುಖಂಡರು ಸಭೆಗೆ ಆಗಮಿಸಿ ಸಲಹೆ - ಸೂಚನೆ ನೀಡುವಂತೆ ಮನವಿ ಮಾಡಿದರು.ಡಿಎಸ್ ಎಸ್ ಯುವ ಮುಖಂಡ ಟಿ.ಎನ್. ಪೇಟೆ ರಮೇಶ್ ಮಾತನಾಡಿ, ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಜಯಂತ್ಯುತ್ಸವಕ್ಕಾಗಿ ಐತಿಹಾಸಿಕ ಸಮಾರಂಭದ ಆಯೋಜನೆಗೆ ಉದ್ದೇಶಿಸಲಾಗಿದ್ದು, ಸಮಾಜದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಹಾಲಿ, ಮಾಜಿ ಜನಪ್ರತಿನಿಧಿಗಳು, ವಿವಿಧ ಕ್ಷೇತ್ರದ ಗಣ್ಯರು, ಸಾಹಿತಿ, ಪ್ರಗತಿಪರ ಹೋರಾಟಗಾರರು ಹಾಗೂ ವಿವಿಧ ಕ್ಷೇತ್ರದ ಮಹಿಳಾ ಸಾಧಕಿಯರು, ಸ್ವಸಹಾಯಕ ಸಂಘದ ಮಹಿಳಾ ಮುಖಂಡರು ಭಾಗವಹಿಸಲಿದ್ದಾರೆ. ಅಂದು ಮಾದಿಗ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ,ವಿವಿಧ ರಂಗದ ಸಾಧಕರಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ಕೈಗೊಳ್ಳಲಾಗಿದೆ. ಈ ಕಾರಣದ ಮೇರೆಗೆ ತಾಲೂಕಿನ ಎಲ್ಲಾ ದಲಿತ ವರ್ಗದ ಹಿರಿಯ ಮುಖಂಡರು ಆಗಮಿಸಿ ಸಲಹೆ ನೀಡುವಂತೆ ಕರೆ ನೀಡಿದರು.