ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ಭವನ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭವನವನ್ನು 17.83 ಕೋಟಿ ವೆಚ್ಚದಲ್ಲಿ ಕರ್ನಾಟಕ ಗೃಹಮಂಡಳಿ ವತಿಯಿಂದ ನಿರ್ಮಾಣ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ವಿವರಮೇ 27 ರಂದು ಬೆಳಿಗ್ಗೆ 8.30 ಕ್ಕೆ ಕನ್ನಡ ಭವನ ಮುಂಭಾಗದಲ್ಲಿ ರಾಷ್ಟ್ರಧ್ವಜ, ನಾಡ ಧ್ವಜ, ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ಮಾಡಲು ತೀರ್ಮಾನಿಸಲಾಗಿದೆ. ರಾಷ್ಟ್ರಧ್ವಜವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಧ್ವಜಾರೋಹಣ ಮಾಡಲಿದ್ದಾರೆ, ನಾಡ ಧ್ವಜವನ್ನು ಶಾಸಕ ಪ್ರದೀಪ್ ಈಶ್ವರ್, ಪರಿಷತ್ತಿನ ಧ್ವಜವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಕೋಡಿರಂಗಪ್ಪ ನೆರವೇರಿಸುತ್ತಾರೆ.
14 ಸಮಿತಿಗಳ ರಚನೆ
ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು 14 ಸಮಿತಿಗಳನ್ನು ರಚಿಸಿ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಕಾರ್ಯ ಹಂಚಿಕೆ ಮಾಡಲಾಗಿದೆ. ಈ ಸಮಿತಿಗಳ ಸದಸ್ಯ ಅಧಿಕಾರಿಗಳು ಎಲ್ಲರ ಸಮನ್ವಯತೆಯನ್ನು ಸಾಧಿಸಿಕೊಂಡು ತಮಗೆ ನೀಡಿರುವ ಕೆಲಸವನ್ನು ಜವಾಬ್ದಾರಿಯುತ್ತಾವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ತಹಶೀಲ್ದಾರ ಅನಿಲ್, ಕನ್ನಡ ಮತ್ತು ಸಂಸ್ಕೃತಿಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕಸಾಪ ಜಿಲ್ಲಾ ಅಧ್ಯಕ್ಷ ಡಾ.ಕೊಡಿರಂಗಪ್ಪ, ತಾಲೂಕು ಅಧ್ಯಕ್ಷ ಯಲುವಳ್ಳಿ ಸೊಣ್ಣೇಗೌಡ, ಜಿಲ್ಲಾ ಜಂಟಿ ಕಾರ್ಯದರ್ಶಿ ಮಂಚನಬೆಲೆ ಶ್ರೀನಿವಾಸ್, ಕಾಸಾಪ ಸದಸ್ಯರು, ಪದಾಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಮುಖಂಡರು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.