ಕೃಷಿಗೆ ಅನುಕೂಲವಾಗುವ ಮಾದರಿ ತಯಾರಿಸಿ: ಜಗದೀಶಪ್ಪ

KannadaprabhaNewsNetwork |  
Published : Dec 06, 2025, 02:45 AM IST
ಪೋಟೊ5ಕೆಎಸಟಿ1: ಕುಷ್ಟಗಿ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗದಲ್ಲಿ) ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿ ಜಗದೀಶಪ್ಪ ಮೆಣೇದಾಳ ಮಾತನಾಡಿದರು. | Kannada Prabha

ಸಾರಾಂಶ

ಕೃಷಿ ಕ್ಷೇತ್ರಕ್ಕೆ ಅನುಕೂಲಕರವಾಗುಂತಹ ಅನ್ವೇಷಣೆಗಳ ಮಾದರಿ ತಯಾರು ಮಾಡುವಲ್ಲಿ ಮುಂದಾಗಬೇಕು

ಕುಷ್ಟಗಿ: ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವಂತಹ ನೂತನ ಅನ್ವೇಷಣೆ ಮಾದರಿ ತಯಾರಿಸಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಜಗದೀಶಪ್ಪ ಮೆಣೇದಾಳ ಹೇಳಿದರು.ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲೆ ವಿಭಾಗದಲ್ಲಿ) ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದ ಮಾದರಿ ಉದ್ಘಾಟಿಸಿ ಮಾತನಾಡಿದ ಅವರು, ದೇಶವೂ ವಿಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರೆದಿದ್ದರೂ ಸಹಿತ ಕೃಷಿ ಕ್ಷೇತ್ರಕ್ಕೆ ಅನುಕೂಲಕರವಾಗುಂತಹ ಅನ್ವೇಷಣೆಗಳ ಮಾದರಿ ತಯಾರು ಮಾಡುವಲ್ಲಿ ಮುಂದಾಗಬೇಕು ಎಂದು ತಿಳಿಸಿದರು.

ಎಂ.ಎಂ. ಗೊಣ್ಣಾಗರ, ಶಾಕೀರಬಾಬ, ಶ್ರೀಧರ್ ಕುಲಕರ್ಣಿ, ಬಸಪ್ಪ ವಾಲಿಕಾರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯೆ ಶಂಕ್ರಮ್ಮ ಕೋಚಿ ವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಯಟ್ ಉಪನ್ಯಾಸಕ ರಾಜೇಂದ್ರ ಬೆಳ್ಳಿ, ವೆಂಕಟೇಶ ಗೌಡರ, ಸುಕುಮನಿ ಸ್ವಾಮಿ, ರಾಘವೇಂದ್ರ ಗೊಲ್ಲರ ಸೇರಿದಂತೆ ಅನೇಕರು ಇದ್ದರು. ತಾಲೂಕಿನ ಶಾಲೆಗಳಿಂದ 54 ಮಾದರಿಗಳೊಂದಿಗೆ ಶಿಕ್ಷಕರು ಮಕ್ಕಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಯಾರಿಸಿರುವ ಮಾದರಿ ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಕ್ಷಗಾನ ಉಳಿವಿಗೆ ಯುವಜನತೆ ಸಕ್ರಿಯ ಪಾತ್ರ ಅಗತ್ಯ: ಡಾ. ಎಚ್‌.ಎಸ್‌. ಬಲ್ಲಾಳ್‌
ಸನ್ಯಾಸತ್ವಕ್ಕೆ ಪರಮ ವೈರಾಗ್ಯವೇ ಮೂಲ: ಸ್ವಾಮಿ ನಿರ್ಭಯಾನಂದ ಸರಸ್ವತಿ