ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಪೂರಕ ಯೋಜನಾ ವರದಿ ಸಿದ್ಧಪಡಿಸಿ: ಚಲುವರಾಯಸ್ವಾಮಿ

KannadaprabhaNewsNetwork |  
Published : Aug 31, 2025, 01:08 AM IST
30ಕೆಎಂಎನ್‌ಡಿ-3ಮಂಡ್ಯದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಯೋಜನಾ ವರದಿ ಸಿದ್ಧಪಡಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ಅವರು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. | Kannada Prabha

ಸಾರಾಂಶ

ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ. ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯ ಅಭಿವೃದ್ಧಿಗೆ ಅಡಚಣೆಯಾಗಿರುವ ಕ್ಷೇತ್ರಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸುವುದರೊಂದಿಗೆ ಪ್ರಗತಿದಾಯಕವಾಗಿ ಮುನ್ನಡೆಸಲು ಅನುಕೂಲವಾಗುವಂತ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಂತೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಜಿಲ್ಲಾ ಯೋಜನಾ ವರದಿ ಸಿದ್ಧಪಡಿಸಲು ಮುಖ್ಯವಾಗಿ ಕೃಷಿ, ಆರೋಗ್ಯ, ಶಿಕ್ಷಣ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಯವರಿಗೆ ಮೂಲದಲ್ಲಿ ಇರುವ ಸಮಸ್ಯೆಗಳು ಹಾಗೂ ಅದನ್ನು ಪರಿಹರಿಸಲು ಕ್ರಮಗಳ ಕುರಿತು ವರದಿ ನೀಡುವಂತೆ ತಿಳಿಸಲಾಗಿದೆ. ಮಂಡ್ಯ ನಗರಸಭೆಗೆ ಹೊಂದಿಕೊಂಡಿರುವ ಗ್ರಾಮ ಪಂಚಾಯ್ತಿಗಳನ್ನು ನಗರಸಭೆಯ ವ್ಯಾಪ್ತಿಗೆ ತಂದು ಅಭಿವೃದ್ಧಿಪಡಿಸಬೇಕಿದೆ. ಈ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚಿಸುವುದಾಗಿ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ 24x7 ಪ್ರತಿ ದಿನ ಕುಡಿಯುವ ನೀರು ಒದಗಿಸುವ ಬಗ್ಗೆ ಯೋಜನೆ ರೂಪಿಸಿ. ಇದಲ್ಲದೇ, ಮಂಡ್ಯ ನಗರದ ಹೊರವಲಯದಲ್ಲಿ ರಿಂಗ್ ರೋಡ್ ರೂಪಿಸುವ ಬಗ್ಗೆ ಚಿಂತಿಸಬೇಕು ಎಂದು ಸಲಹೆ ನೀಡಿದರು.

ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಖಾಸಗಿ ಲೇಔಟ್‌ಗಳಿಗೆ ಅನುಮತಿ ನೀಡುವ ಮೊದಲು ನಗರ ಯೋಜನಾಧಿಕಾರಿಗಳು ರಸ್ತೆ, ಚರಂಡಿ ಇನ್ನಿತರ ಮೂಲಭೂತ ವ್ಯವಸ್ಥೆಗಳಿಗೆ ಸ್ಥಳಾವಕಾಶ ಮಾಡಿಕೊಂಡಿರುವುದನ್ನು ಪರಿಶೀಲಿಸಬೇಕು ಎಂದರು.

ನಗರಸಭೆ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಕೆಲವು ಮುಡಾ ಲೇಔಟ್‌ಗಳನ್ನು ನಗರಸಭೆ ವ್ಯಾಪ್ತಿಗೆ ತರಬೇಕಿದೆ. ರಾಜಾಕಾಲುವೆಗಳನ್ನು ಉಳಿಸಿಕೊಂಡು ಅಭಿವೃದ್ಧಿ ಪಡಿಸಬೇಕಿದೆ. ನಗರದ ಸುಂದರೀಕರಣಕ್ಕೆ ಹೊಸ ಯೋಜನೆಗಳನ್ನು ರೂಪಿಸಬೇಕಿದೆ ಎಂದು ನುಡಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಮಾನವ ಅಭಿವೃದ್ಧಿ ವರದಿಯನ್ನು ಅಧ್ಯಯನ ಮಾಡಿ ಸಿದ್ಧಪಡಿಸಲು ಮೈಸೂರು ವಿಶ್ವವಿದ್ಯಾನಿಲಯದೊಂದಿಗೆ ಎಂಒಯು ಮಾಡಿಕೊಳ್ಳಬೇಕಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : 3 ಜಿಲ್ಲೆಗಳಿಗೆ 3 ದಿನ ಯೆಲ್ಲೋ, 2 ದಿನ ಆರೆಂಜ್‌ ಅಲರ್ಟ್‌
ಅಲೆಮಾರಿಗಳಿಗೆ 6 ನಿರ್ಣಯ ಜಾರಿ ಮಾಡಿ ವಿಶೇಷ ಪ್ಯಾಕೇಜ್‌ಗೆ ಸಮಾಜ ಆಗ್ರಹ