ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ವೆಂಟಿಗೋಡಿ ಭೇಟಿ , ಸಂವಾದಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಸರ್ಕಾರಿ ಕಲಾ ಕಾಲೇಜು ಹಿಂಭಾಗದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಅವರು, ನಿಲಯದಲ್ಲಿನ ವ್ಯವಸ್ಥೆಯ ಬಗ್ಗೆ ಹಾಗೂ ಉಟೋಪಚಾರದ ಬಗ್ಗೆ ಮಾಹಿತಿ ಪಡೆದು, ಸರ್ಕಾರ ನೀಡುತ್ತಿರುವ ಅವಕಾಶಗಳನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ನಿಲಯಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಜಾಗೃತಿ ಮೂಡಿಸುವಂತೆ ಹಾಗೂನಿಲಯದ ಸ್ವಚ್ಛತೆ, ವಿದ್ಯಾರ್ಥಿಗಳ ವ್ಯಾಸಂಗ, ಆರೋಗ್ಯ, ನಿಲಯದ ಸುತ್ತಮುತ್ತಲಿನ ವಾತಾವರಣ ಸ್ವಚ್ಚವಾಗಿಟ್ಟುಕೊಳ್ಳಲು ಸೂಚಿಸಿದರು. ನಂತರ ಸಮಾಜಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿ, ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ತಿಳಿಸಿದರು.
ಈ ವೇಳೆ ತಹಸೀಲ್ದಾರ್ ಡಾ.ಕೆ.ನಾಗವೇಣಿ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪುಷ್ಪಲತಾ ಭಾವಿಮಠ, ತಾಲೂಕು ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಇದ್ದರು.