ಬದಲಾದ ಪತ್ರಿಕೋದ್ಯಮಕ್ಕೆ ವಿದ್ಯಾರ್ಥಿಗಳು ಸಿದ್ಧರಾಗಲಿ: ಚನ್ನು ಮೂಲಿಮನಿ

KannadaprabhaNewsNetwork |  
Published : Dec 19, 2024, 12:30 AM IST
18ಡಿಡಬ್ಲೂಡಿ9ಕರ್ನಾಟಕ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಆಯೋಜಿಸಿದ ಕಾರ್ಯಕ್ರಮವನ್ನು ಪತ್ರಕರ್ತ ಚನ್ನು ಮೂಲಿಮನಿ ಉದ್ಘಾಟಿಸಿದರು.  | Kannada Prabha

ಸಾರಾಂಶ

ಕರ್ನಾಟಕ ಕಲಾ ಕಾಲೇಜುನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಕಾಲೇಜಿನಲ್ಲಿ 2024-25ನೇ ಸಾಲಿನ ‌ಶೈಕ್ಷಣಿಕ ಚಟುವಟಿಕೆ ಉದ್ಘಾಟಿಸಲಾಯಿತು.

ಧಾರವಾಡ: ಬದಲಾಗುತ್ತಿರುವ ಪತ್ರಿಕೋದ್ಯಮಕ್ಕೆ ತಂತ್ರಜ್ಞಾನ ಸೇರಿದಂತೆ ಭಾಷಾ ಪ್ರಭುತ್ವ, ಅನುವಾದ ಕಲೆಯ ಕೌಶಲ್ಯಗಳನ್ನು ಅಳವಡಿಸಿಕೊಂಡು ಸಿದ್ದರಾಗಬೇಕಾಗಿದೆ ಎಂದು ಪತ್ರಕರ್ತ ಚನ್ನು ಮೂಲಿಮನಿ ಹೇಳಿದರು.

ಕರ್ನಾಟಕ ಕಲಾ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಕಾಲೇಜಿನಲ್ಲಿ 2024-25ನೇ ಸಾಲಿನ ‌ಶೈಕ್ಷಣಿಕ ಚಟುವಟಿಕೆ ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ಪತ್ರಿಕೋದ್ಯಮ ಕ್ಷೇತ್ರ ಬದಲಾಗುತ್ತಿದೆ, ಪ್ರಸ್ತುತ ಡಿಜಿಟಲ್ ಮಾಧ್ಯಮ ಮುನ್ನೆಲೆಗೆ ಬರುತ್ತಿದ್ದು, ಪತ್ರಿಕೆಗಳು ತಮ್ಮದೇ ಆದ ವಿಶ್ವಾಸಾರ್ಹತೆ ಉಳಿಸಿಕೊಂಡಿವೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಬರುವ ವಿದ್ಯಾರ್ಥಿ ಭಾಷಾ ಕೌಶಲ್ಯ, ಸೃಜನಶೀಲತೆ ಬೆಳೆಸಿಕೊಳ್ಳಬೇಕು, ಬಹು ಕೌಶಲ್ಯದ ಜೊತೆಗೆ ಮಾಧ್ಯಮದಲ್ಲಿ ಬಳಸುವ ತಂತ್ರಜ್ಞಾನವನ್ನು ಕಲಿಯಬೇಕು, ಹೊಸದನ್ನು ಕಲಿಯಬೇಕು ಎಂಬ ತುಡಿತ ಪತ್ರಿಕೋದ್ಯಮ ವಿದ್ಯಾರ್ಥಿಗಳಲ್ಲಿ ಇರಬೇಕು. ಇಂದಿನ ಪತ್ರಿಕೋದ್ಯಮಕ್ಕೆ ವೇಗ, ತಂತ್ರಜ್ಞಾನ, ಭಾಷೆಯ ಮೇಲೆ ಪ್ರಭುತ್ವವನ್ನು ಹೊಂದಿದಾಗ ಮಾತ್ರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಲು ಸಾಧ್ಯವಿದೆ ಎಂದರು.

ಪ್ರಸ್ತುತ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ಮಾನವ ಸಂಪನ್ಮೂಲಕ್ಕೆ ಹೆಚ್ಚು ಮನ್ನಣೆ ಇದೆ. ಪತ್ರಿಕೋದ್ಯಮ ವೇಗವಾಗಿ ತನ್ನ ಗತಿಯನ್ನು ಬದಲಿಸಿಕೊಳ್ಖುತ್ತಿದೆ. ಹಾಗಾಗಿ, ಎಲ್ಲ ರೀತಿಯಲ್ಲಿ ಮಾಧ್ಯಮ ಕ್ಷೇತ್ರಕ್ಕೆ ಸಿದ್ದರಾಗಿ ಬನ್ನಿ ಎಂದ ಅವರು, ಪತ್ರಿಕೋದ್ಯಮ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದೆ. ಪ್ರಸ್ತುತ ಅನುವಾದ ಕ್ಷೇತ್ರ ಅಗಾಧವಾಗಿ ಬೆಳೆದಿದೆ. ಹಾಗಾಗಿ, ಇಂದಿನ ವಿದ್ಯಾರ್ಥಿಗಳು ಅನುವಾದದ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಜೊತೆಗೆ ಕನಿಷ್ಠ ಮೂರು ಭಾಷೆಯಲ್ಲಿ ಪ್ರಾವೀಣ್ಯತೆ ಪಡೆಯಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಕಲಾ ಕಾಲೇಜಿನ ಜಿಮಖಾನದ ಉಪಾಧ್ಯಕ್ಷ ಡಾ. ಐ.ಸಿ. ಮುಳಗುಂದ ಮಾತನಾಡಿ, ಪ್ರಸ್ತುತ ‌ಮಾಧ್ಯಮ ಕ್ಷೇತ್ರ ತಂತ್ರಜ್ಞಾನದ ಪ್ರಭಾವದಿಂದಾಗಿ ಬದಲಾವಣೆ ಹೊಂದುತ್ತಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚು ಕೇಂದ್ರೀಕೃತವಾಗಿ ಅಧ್ಯಯನ ಶೀಲರಾಗಬೇಕು. ತಂತ್ರಜ್ಞಾನದ ಪ್ರಭಾವದಿಂದಾಗಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳು ಇವೆ ಎಂದರು.

ಕರ್ನಾಟಕ ಕಲಾ ಕಾಲೇಜಿನ ಪ್ರಾಚಾರ್ಯ ಡಾ‌. ಡಿ.ಬಿ. ಕರಡೋಣಿ ಮಾತನಾಡಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಡಾ. ಪ್ರಭಾಕರ ಕಾಂಬಳೆ, ಡಾ. ಮುಕುಂದ ಲಮಾಣಿ, ಡಾ.ರವೀಂದ್ರ ಜಲರಡ್ಡಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ