ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಸಿದ್ಧರಾಗಿ

KannadaprabhaNewsNetwork | Published : Feb 14, 2024 2:15 AM

ಸಾರಾಂಶ

ಬೇಸಿಗೆ ಸಂದರ್ಭದಲ್ಲಿ ಜಿಲ್ಲಾದ್ಯಂತ ತೆಲೆದೋರುವ ಸಮಸ್ಯೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ನೀರಿಗೆ ಯಾವುದೇ ಸಮಸ್ಯೆಯಾಗಬಾರದು. ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಂಡು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬೇಸಿಗೆ ಸಂದರ್ಭದಲ್ಲಿ ಜಿಲ್ಲಾದ್ಯಂತ ತೆಲೆದೋರುವ ಸಮಸ್ಯೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ನೀರಿಗೆ ಯಾವುದೇ ಸಮಸ್ಯೆಯಾಗಬಾರದು. ಈಗಿನಿಂದಲೇ ಅಗತ್ಯ ಸಿದ್ಧತೆ ಮಾಡಿಕೊಂಡು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿಯಿಂದ ನೀರು ಪೂರೈಸಲು ಕ್ರಮ ವಹಿಸಬೇಕು. ಅವಶ್ಯವಿದ್ದಲ್ಲಿ ಮಾತ್ರ ಖಾಸಗಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 98 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ನೀರು ಇಳುವರಿಯಿರುವ ಖಾಸಗಿ ಬೋರ್‌ವೆಲ್ ಗಳನ್ನು ಮುಂಜಾಗ್ರತಾ ಕ್ರಮವಾಗಿ ಗುರುತಿಸಿಟ್ಟುಕೊಂಡು ಯಾವುದೇ ಸಮಸ್ಯೆ ಉದ್ಭವಿಸದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಿದರು.

ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಾರದು. ನೀರು ಹಾಗೂ ಜಾನುವಾರುಗಳಿಗೆ ಮೇವಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮೇವನ್ನು ದಾಸ್ತಾನಿಟ್ಟುಕೊಳ್ಳಬೇಕು. ಕಾಲಕಾಲಕ್ಕೆ ಟಾಸ್ಕ್‌ಪೋರ್ಸ್ ಸಮಿತಿ ಸಭೆ ನಡೆಸಬೇಕು. ಗ್ರಾಮಮಟ್ಟದ ಹಾಗೂ ತಾಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿ ಸಭೆ ನಡೆಸಿ, ಸೂಕ್ತ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕು. ಗ್ರಾಮ ಪಂಚಾಯುತಿ, ಪುರಸಭೆ, ಪಟ್ಟಣ ಪಂಚಾಯತಿ, ಸ್ಥಳೀಯ ನಗರ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳು ಎಲ್ಲ ಮಾಹಿತಿಯನ್ನು ಕ್ರೋಢಿಕರಿಸಿಕೊಂಡು ಪೂರ್ವ ಸನ್ನದ್ಧವಾಗಬೇಕು ಎಂದರು.

ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಅಭಿಯಂತರ ಎಚ್.ಎನ್.ಶ್ರೀನಿವಾಸ, ಇಂಡಿ ಉಪವಿಭಾಗಾಧಿಕಾರಿ ಆಬೀದ್‌ ಗದ್ಯಾಳ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೋಣಸಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರ ಕುಂಬಾರ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.ವಿಜಯಪುರ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಸೂಕ್ತ ಎಚ್ಚರಿಕೆ ವಹಿಸಿ. ಭೂತನಾಳ ಕೆರೆ ಪಕ್ಕದ ಮುಖ್ಯ ಕಾಲುವೆಯಿಂದ ಕೆರೆಗೆ ನೀರು ಸಂಗ್ರಹಿಸಲು ತಾತ್ಕಾಲಿಕವಾಗಿ ತೆರೆದ ಕಾಲುವೆ ಮೂಲಕ ನೀರು ಹರಿಸಿ ಕೆರೆ ಭರ್ತಿಗೆ ಕ್ರಮವಹಿಸಬೇಕಿದೆ. ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.

- ಟಿ.ಭೂಬಾಲನ್, ಜಿಲ್ಲಾಧಿಕಾರಿ.

Share this article