ಶಾಲಾ ಹಂತದಿಂದಲೇ ಸ್ಪರ್ಧಾತ್ಮಕತೆಗೆ ಸಜ್ಜಾಗಿ

KannadaprabhaNewsNetwork |  
Published : Feb 09, 2026, 02:15 AM IST
ಗುಬ್ಬಿತಾಲ್ಲೂಕಿನ ಕಸಬ ಹೋಬಳಿ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಾರ್ಷಿಕೋತ್ಸವದ  ಕಾರ್ಯಕ್ರಮದ ಉದ್ಘಾಟನೆಯನ್ನು ಬಿಇಒ ಎಂ ಎಸ್.ನಟರಾಜು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳ ಬೇಕು. ಇದರಿಂದ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಬಿಇಒ ಎಂ ಎಸ್.ನಟರಾಜು ತಿಳಿಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳ ಬೇಕು. ಇದರಿಂದ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಬಿಇಒ ಎಂ ಎಸ್.ನಟರಾಜು ತಿಳಿಸಿದರು.ತಾಲ್ಲೂಕಿನ ಕಸಬ ಹೋಬಳಿ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಸಂಸ್ಕಾರಯುತ ಶಿಕ್ಷಣವನ್ನು ಕಲಿಸಬೇಕು. ಉತ್ತಮ ಜೀವನ ರೂಪಿಸಿಕೊಳ್ಳುವುದರ ಕಡೆ ಗಮನಹರಿಸಿ ಭೋದನಾ ಗುಣಮಟ್ಟವನ್ನು ವೃದ್ದಿಸಿಕೊಳ್ಳಬೇಕು. ಶೈಕ್ಷಣಿಕ ಹಂತದಲ್ಲಿಯೇ ಶಿಸ್ತು, ಸಂಸ್ಕಾರ, ಸಂಸ್ಕೃತಿ, ಭಾಷಾಭಿಮಾನ ಮತ್ತು ಸಮಾಜ ಪರಿವರ್ತನೆಯಂತಹ ಗುಣಗಳನ್ನು ಅಳವಡಿಸಿಕೊಂಡಲ್ಲಿ ದೇಶದ ಸತ್ಪ್ರಜೆಗಳಾಗಿ ರೂಪುಗೊಳ್ಳಲು ಸಹಕಾರಿಯಾಗಲಿದೆ ಎಂದರರು. ಗ್ರಾಮ ಪಂಚಾಯತಿ ಅಧ್ಯಕ್ಷ ನಾರಾಯಣಸ್ವಾಮಿ ಮಾತನಾಡಿ, ಶಾಲೆಯಲ್ಲಿ ಉತ್ತಮ ಶಿಕ್ಷಕರು ಇರುವುದರಿಂದ ಮಕ್ಕಳ‌ಕಲಿಕೆಯು ಉತ್ತಮವಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಶಾಲೆಯ ಅಭಿವೃದ್ದಿಗೆ ಗಮನಕೊಟ್ಟು ಯಾವುದೇ ಖಾಸಗಿ ಶಾಲೆಗೂ ಪ್ರಗತಿಯಲ್ಲಿ ಕಡಿಮೆ ಇಲ್ಲದಂತೆ ನಮ್ಮೂರಿನ ಶಾಲೆಯಾವಗಬೇಕೆಂದು ಹೇಳಿದರು.

ವರ್ಗಾವಣೆಗೊಂಡ ಶಿಕ್ಷಕಿ ಶಿವಮ್ಮ ಮಾತನಾಡಿ, ಪೋಷಕರು ಮಕ್ಕಳ ಜೊತೆ ಹೆಚ್ಚು ಸಮಯ ಕಳೆಯಬೇಕು. ಮಕ್ಕಳ ಜೊತೆಯಲ್ಲಿ ನಕಾರಾತ್ಮಕ ಬದಲಾವಣೆ ಅವಕಾಶ ಕೊಡಬಾರದು ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಹೇಳಿಕೊಡಬೇಕು.

ಸಂಸ್ಕಾರಯುತ ಶಿಕ್ಷಣವನ್ನು ಮಕ್ಕಳು ಪಡೆದುಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಬೇಕು.ಮಕ್ಕಳಿಗೆ ಸರ್ಕಾರದಿಂದ ಉತ್ತಮ ಸೌಲಭ್ಯಗಳು ಬರುತ್ತಿದ್ದು ಅವುಗಳನ್ನು ಈ ಶಾಲೆಯಲ್ಲಿ ಸಮರ್ಪಕವಾಗಿ ಬಳಕೆಯಾಗಿದೆ ಎಂದು ತಿಳಿಸಿದರು.ಶಿಕ್ಷಣ ಪ್ರೇಮಿ ಚನ್ನರಾಯಪಟ್ಟಣ ತಾಲೂಕಿನ ಕ್ಷೇತ್ರ ಸಮನ್ವಯ ಅಧಿಕಾರಿ ಅನಿಲ್ ವಿದ್ಯಾರ್ಥಿಗಳಿಗೆ ಮೌಲ್ಯ ಶಿಕ್ಷಣದ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ನಿಜಾನಂದಮೂರ್ತಿ, ಲೋಕೇಶ್, ಸಿ ಆರ್.ಪಿಗಳಾದ ಎಸ್.ಪಿ.ಲೋಕೇಶ, ಟಿ.ಎಂ.ಧರಣೇಶ್, ಬಿ.ಎಸ್.ರುದ್ರೇಶ್, ಕಾಂತರಾಜು, ಇಸ್ಮಾಯಿಲ್ ಖಾನ್, ಮುಖ್ಯ ಶಿಕ್ಷಕಿ ಕಮಲಮ್ಮ, ಶಿಕ್ಷಕರಾದ ಎ.ಎಸ್. ವಿಜಯಕುಮಾರ್, ಕೆ.ವಿ.ವಿವೇಕ, ಭಾಗ್ಯಮ್ಮ, ಕೆ.ಶಿವಮ್ಮ, ನಾಗೇಂದ್ರಪ್ಪ, ಎಸ್ ಡಿ ಎಂ ಸಿ ಮಂಜುನಾಥ್, ಸಾವಿತ್ರಿ ಬಾಯಿ ಪುಲೆ ಸಂಘದ ಕಾರ್ಯದರ್ಶಿ ಜಿ.ಎಸ್. ಮಂಜಮ್ಮ, ಗುಬ್ಬಿ ಗ್ರಾಮಸ್ಥರಾದ ಮಹೇಶ್, ಕೃಷ್ಣಪ್ಪ, ಅನಂದ್, ದೇವರಾಜ್,ಮಹದೇವಮ್ಮ, ದೇವಿರಮ್ಮ, ಜಯಲಕ್ಷ್ಮಿ, ಅಂಬಿಕಾ, ಪುಷ್ಪಲತ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್ ಡಿ ಎಮ್ ಸಿ ಸಮಿತಿ ಸದಸ್ಯರುಗಳು, ಗ್ರಾಮ ಪಂಚಾಯತಿ ಸದಸ್ಯರುಗಳು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಐಕ್ಯತೆಯಿಂದಲೇ ಸಶಕ್ತ ಸಮಾಜ ನಿರ್ಮಾಣ: ಈಶ್ವರ ಪಂಡಿತಾರಾಧ್ಯ ಶಿವಾಚಾರ್ಯರು
ಶಿರಾ ನಂದಿನಿ ಕ್ಷೀರ ಭವನದಲ್ಲಿ ಯಶಸ್ವಿನಿ ನೋಂದಣಿ ಕಾರ್ಯಗಾರ