ಚಿಕ್ಕಮಗಳೂರು ತಾಲೂಕಿನ ಹರಿಹರದಹಳ್ಳಿ, ಮರ್ಲೆ, ಮುಗುಳುವಳ್ಳಿ ಗ್ರಾಮಗಳಲ್ಲಿ ಲೋಕಸಭಾ ಚುನಾವಣಾ ಪ್ರಚಾರ
ಅಭಿವೃದ್ಧಿ ಮೊಟಕುಗೊಳಿಸಿ ಟೀಕಾಪ್ರಹಾರಕ್ಕೆ ಮಾತ್ರ ಹಾಲಿ ಸಂಸದರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ದ್ವೇಷಭರಿತ ಮಾತುಗಳನ್ನಾಡಿರುವ ಪರಿಣಾಮ ಕ್ಷೇತ್ರ ಹಲವಾರು ಸಮಸ್ಯೆಗಳಿಗೆ ಸಿಲುಕಿಕೊಂಡಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಆರೋಪಿಸಿದರು.
ತಾಲೂಕಿನ ಹರಿಹರದಹಳ್ಳಿ, ಮರ್ಲೆ ಹಾಗೂ ಮುಗುಳುವಳ್ಳಿ ಗ್ರಾಮಗಳಲ್ಲಿ ಲೋಕಸಭಾ ಚುನಾವಣಾ ಸಂಬಂಧ ಅವರು ಶನಿವಾರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತರು, ಬೆಳೆಗಾರರಿಗೆ ಪರಿಹಾರ ಹಾಗೂ ಬಡಜನತೆಯ ಸಮಸ್ಯೆಗಳಿಗೆ ಸ್ಪಂದಿಸದೇ ಪ್ರಚೋದನಕಾರಿ ಹೇಳಿಕೆ ನೀಡುವುದೇ ಹಾಲಿ ಸಂಸದರ ಕಾಯಕವಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಿಲ್ಲ. ಕ್ಷೇತ್ರದಲ್ಲಿ ಇಲ್ಲಸಲ್ಲದ ಘಟನೆಗಳಿಗೆ ಉತ್ತರಿಸಲೆಂದೇ ಆಗಮಿಸುವ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ತಲೆಕೆಡಿಸಿಕೊಳ್ಳುವರೇ ಎಂದು ಪ್ರಶ್ನಿಸಿದರು.ದಶಕಗಳಿಂದ ಬಿಜೆಪಿ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದರೂ ಈ ಭಾಗಕ್ಕೆ ಸಂಸದರ ನಿಧಿಯಿಂದ ಹಣ ಬಿಡುಗಡೆ ಗೊಳಿಸಿಲ್ಲ. ಚುನಾವಣೆ ಸಮೀಪಿಸುವ ವೇಳೆ ಮಾತ್ರ ನಾಯಕರ ಹೆಸರಿನಲ್ಲಿ ಮತಗಳಿಸುವ ಬಿಜೆಪಿ ಮುಖಂಡರು ಬಳಿಕ ಕೆಲಸ ಮಾಡಬೇಕೆನ್ನುವ ಸೋಮಾರಿತನದ ಮನಸ್ಥಿತಿ ಅವರಲ್ಲಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಪ್ರತಿನಿತ್ಯ 37 ಲಕ್ಷ ಮಂದಿ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಬಸ್ನಲ್ಲಿ ಸಂಚರಿಸುತ್ತಿದ್ದಾರೆ. ಇಂಥ ಜನೋಪಯೋಗಿ ಯೋಜನೆ ಜಾರಿಗೊಳಿಸುವ ಬದಲು ಕೇಂದ್ರ ಸರ್ಕಾರ ಸಾರ್ವಜನಿಕ ತೆರಿಗೆ ಹಣದಿಂದ ಉದ್ಯಮಿಗಳ ಸಾಲಮನ್ನಾ ಮಾಡುತ್ತಿದೆ ಎಂದು ಆರೋಪಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಜಿಪಂ ಮಾಜಿ ಸದಸ್ಯ ಕೆ.ವಿ. ಮಂಜುನಾಥ್, ಗ್ರಾಪಂ ಸದಸ್ಯ ಮುಳ್ಳೇಗೌಡ, ಮುಖಂಡರಾದ ಕೆ.ಎಸ್.ಶಾಂತೇಗೌಡ, ಕೆಂಚೇಗೌಡ, ಕುಮಾರ್, ಜಯಮ್ಮ ಕೆಂಚೇಗೌಡ, ವೇಣುಗೋಪಾಲ್, ಬಸವರಾಜ್, ಚಂದ್ರಪ್ಪ, ಲಕ್ಷ್ಮಣಗೌಡ, ಮರಿಯಪ್ಪ, ಲಲಿತಮ್ಮ, ರುದ್ರಯ್ಯ, ನಾಗರಾಜ್ ಹಾಜರಿದ್ದರು.
ಬಿಜೆಪಿ ಶಾಶ್ವತ ಕಾಮಗಾರಿ ನಡೆಸಿಲ್ಲ: ನಯನಾ
20 ಕೆಸಿಕೆಎಂ 7ಚಿಕ್ಕಮಗಳೂರು ತಾಲೂಕಿನ ಹರಿಹರದಹಳ್ಳಿ, ಮರ್ಲೆ ಹಾಗೂ ಮುಗುಳುವಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಶನಿವಾರ ಚುನಾವಣಾ ಪ್ರಚಾರ ನಡೆಸಿದರು. ಶಾಸಕಿ ನಯನಾ ಮೋಟಮ್ಮ, ಗಾಯತ್ರಿ ಶಾಂತೇಗೌಡ ಹಾಗೂ ಕಾಂಗ್ರೆಸ್ ಮುಖಂಡರು ಇದ್ದರು.