ಗಣ್ಯರಿಗೆ ಅನಿಕೇತನ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Dec 01, 2024, 01:32 AM IST
29ಕೆಆರ್ ಎಂಎನ್ 6.ಜೆಪಿಜಿರಾಮನಗರದ ಕಾಮಣ್ಣನಗುಡಿ ವೃತ್ತದಲ್ಲಿ ನುಡಿ ನಮನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಅನಿಕೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ರಾಮನಗರ: ಸಾಹಿತ್ಯ , ಸಾಂಸ್ಕೃತಿಕ ಹಾಗೂ ರಾಜ್ಯೋತ್ಸವದಂತಹ ಮೌಲ್ಯಯುತ ಕಾರ್ಯಕ್ರಮಗಳ ಮೂಲಕ ಕನ್ನಡ ನಾಡು ನುಡಿಯ ಘನತೆ ಮತ್ತಷ್ಟು ಹೆಚ್ಚಿಸಲು ಸಾಧ್ಯ ಎಂದು ಎಂಇಐ ಮಾಜಿ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯ ಕೆ.ಶೇಷಾದ್ರಿ ಹೇಳಿದರು.

ರಾಮನಗರ: ಸಾಹಿತ್ಯ , ಸಾಂಸ್ಕೃತಿಕ ಹಾಗೂ ರಾಜ್ಯೋತ್ಸವದಂತಹ ಮೌಲ್ಯಯುತ ಕಾರ್ಯಕ್ರಮಗಳ ಮೂಲಕ ಕನ್ನಡ ನಾಡು ನುಡಿಯ ಘನತೆ ಮತ್ತಷ್ಟು ಹೆಚ್ಚಿಸಲು ಸಾಧ್ಯ ಎಂದು ಎಂಇಐ ಮಾಜಿ ಅಧ್ಯಕ್ಷರು ಹಾಗೂ ನಗರಸಭೆ ಸದಸ್ಯ ಕೆ.ಶೇಷಾದ್ರಿ ಹೇಳಿದರು.

ನಗರದ ಕಾಮಣ್ಣನಗುಡಿ ವೃತ್ತದಲ್ಲಿ ಕದಂಬ ಕನ್ನಡಿಗರ ಕೂಟ, ರಾಮನಗರ ಜಿಲ್ಲಾ ಘಟಕ ಆಯೋಜಿಸಿದ್ದ ನುಡಿ ನಮನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಅನಿಕೇತನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಪ್ರಾಂಶುಪಾಲರ ಸಂಘದ ಜಿಲ್ಲಾಧ್ಯಕ್ಷ ಜಿ.ಶಿವಣ್ಣ ಮಾತನಾಡಿ, ಕನ್ನಡ ಭಾಷೆ ನಮ್ಮ ತಾಯಿ ಬೇರಾಗಿದೆ. ಪಂಪನ ಅಮೃತವಾಣಿಯಿಂದ ಕುವೆಂಪುವರೆಗಿನ ನಮ್ಮ ನಾಡಿನ ಕವಿಗಳು ಕನ್ನಡಿಗರ ಗುಣ ಧರ್ಮವನ್ನು ಎತ್ತಿ ಹಿಡಿದಿರುವುದು ಕಂಡು ಬರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶ್ರೀ ರೇವಣಸಿದ್ದೇಶ್ವರಸ್ವಾಮಿ ದಾಸೋಹ ಮಠದ ಶ್ರೀ ರಾಜಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ವಿ.ಸೂರ್ಯಪ್ರಕಾಶ್, ಉಪನ್ಯಾಸಕ ಜಿ.ಶಿವಣ್ಣ, ಗಾಯಕ ರಾ.ಬಿ. ನಾಗರಾಜು, ಸುಮಾ, ಶಿವಕುಮಾರ್, ಕಮಲಾ ನಾಗರಾಜು, ನಾರಾಯಣ ಅವರಿಗೆ ಅನಿಕೇತನ ಪ್ರಶಸ್ತಿ ಪ್ರಧಾನ ಹಾಗೂ ಪೌರಾಯುಕ್ತರಾದ ಮಾರಪ್ಪ, ದೇವೇಂದ್ರ, ನಾರಾಯಣ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್, ಎಸ್.ಶಿವರಾಜ್ ಭರಣಿ, ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆಶಿವಲಿಂಗಯ್ಯ, ನಾಟಕ ಅಕಾಡೆಮಿ ಸದಸ್ಯ ಬಾಬು, ಮುಖಂಡರಾದ ರಮೇಶ್ ಬಾಬು, ನಾಗರಾಜು, ಆಶಾಲತಾ, ಕಮಲಾ, ಶಿವಲಿಂಗಯ್ಯ, ಮಂಜಣ್ಣ, ಸುರೇಶ್, ಪಾಪಣ್ಣ, ಉಮೇಶ್, ಯಶ್ವಂತ್, ಅಶೋಕ್, ಶ್ರೀನಿವಾಸ್, ಹರೀಶ್, ವಿಜಿ ಉಪಸ್ಥಿತರಿದ್ದರು.

29ಕೆಆರ್ ಎಂಎನ್ 6.ಜೆಪಿಜಿ

ರಾಮನಗರದಲ್ಲಿ ನುಡಿ ನಮನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಅನಿಕೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!