ಕನ್ನಡಪ್ರಭ ವಾರ್ತೆ ಕಲಬುರಗಿ
ರಂಗಸಂಗಮ ಕಲಾ ವೇದಿಕೆ ರೂವಾರಿ ಡಾ. ಸುಜಾತಾ ಜಂಗಮಶೆಟ್ಟಿ ಉಸ್ತುವಾರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ, ಸೇಡಂ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಅಧ್ಯಕ್ಷ ಸದಾಶಿವ ಮಹಾಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಕರಾಮುವಿ ಕುಲಪತಿ ಡಾ. ಶರಣಪ್ಪ ವಿ. ಹಲಸೆ, ನಾಟಕ ಅಕ್ಯಾಡೆಮಿಯ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ಉಪಸ್ಥಿತರಿರಲಿದ್ದಾರೆ.
ಕಲಾವಿದರಾದ ಬಳ್ಳಾರಿಯ ಪುರುಷೋತ್ತಮ ಹಂದ್ಯಾಳ್ ಅವರಿಗೆ ಎಸ್.ಬಿ. ಜಂಗಮಶೆಟ್ಟಿ ರಂಗ ಪ್ರಶಸ್ತಿ ಹಾಗೂ ಶಿಗ್ಗಾಂವ್ದ ಕಲಾವಿದೆ ಶ್ರೀಮತಿ ರಾಧಿಕಾ ವಿ. ಬೇವಿನಮಟ್ಟಿ ಅವರಿಗೆ ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಪುರಸ್ಕೃತರಿಗೆ ತಲಾ 10 ಸಾವಿರ ರುಪಾಯಿ, ಪ್ರಶಸ್ತಿ ಫಲಕ ನೀಡಿ ಸನ್ಮಾನಿಸಲಾಗುತ್ತಿದೆ.ಚಿಂಚೋಳಿಯ ಹಿರಿಯ ಶ್ರೇಣಿ ನ್ಯಾಯಾಲಯದ ಆದೇಶ ಜಾರಿಕಾರ ಮಹಾದೇವ್ ಎಂ. ಹಂಗರಗಿ ಪ್ರಶಸ್ತಿ ಪುರಸ್ಕೃತರ ಕುರಿತು, ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್. ನಿರಗುಡಿ ಅವರು ಜಂಗಮಶೆಟ್ಟಿ ದಂಪತಿ ಕುರಿತು ಮಾತನಾಡುವರು. ರಂಗಸಂಗಮ ಕಲಾವೇದಿಕೆಯ ಅಧ್ಯಕ್ಷೆ ಶಿವಗೀತಾ ಬಸವಪ್ರಭು ಉಪಸ್ಥಿತರಿರುವರು, ಇದೇ ಸಮಾರಂಭದಲ್ಲಿ ಶ್ರೀಧರ್ ಹೊಸಮನಿ ಹಾಗೂ ಸಂಗಡಿಗರು ಗೀತಗಾಯನ ನೆರವೇರಿಸುವರು.
-------------------
ಪುರುಷೋತ್ತಮ ಬಳ್ಳಾರಿ ಜಿಲ್ಲೆಯ ಹಂದ್ಯಾಳದ ಅಪ್ಪಟ ಗ್ರಾಮೀಣ ಪ್ರತಿಭೆ. ವೃತ್ತಿಯಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿದ್ದರು 33 ವರ್ಷಗಳಿಂದ ರಂಗಭೂಮಿಯಲ್ಲಿ ಸಕ್ರೀಯ, ಶಾಲಾ ದಿನಗಳಲ್ಲಿಯೇ ರಂಗಭೂಮಿ ಪ್ರವೇಶಿಸಿದರು. ಕುರುಕ್ಷೇತ್ರ, ಧನಿಕರ ದೌರ್ಜನ್ಯ, ಕರ್ತವ್ಯದ ಕಾಣಿಕೆ, ಮಹಿಮಾಪುರ, ಕುಂಕುಮ ತಂದ ಕೈಲಾಸ ಮುಂತಾದ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಬಳ್ಳಾರಿಯ ಕಾರಾಗೃಹದ ಖೈದಿಗಳ ಮನಪರಿವರ್ತನೆಗಾಗಿ ಖೈದಿಗಳಿಗಾಗಿ ನಾಟಕ ನಿರ್ದೇಶನ ಮಾಡಿದ್ದಾರೆ. ಕೊರೋನಾ ಸಂಕಷ್ಟ ಕಾಲದಲ್ಲಿ ಜನಜಾಗೃತಿಗಾಗಿ ಕಿರುಚಿತ್ರ ನಿರ್ಮಿಸಿ ಅಭಿನಯಿಸಿದ್ದಾರೆ. ಕನ್ನಡದ 4 ಧಾರವಾಹಿಗಳಲ್ಲಿಯೂ ಪುರುಷೋತ್ತಮ್ ಅಭಿನಯಿಸಿದ್ದಾರೆ.
ಬಸ್ ಕಂಡಕ್ಟರ್ ನಾಟಕದಿಂದ ಬಣ್ಣದ ಬದುಕಿಗೆ ಬಂದ ರಾಧಿಕಾ