ಮಲಬಾರ್ ವಿಶ್ವ ಗೌರವ ಪುರಸ್ಕಾರ ಪ್ರದಾನ

KannadaprabhaNewsNetwork |  
Published : Jul 04, 2026, 02:30 AM IST
ಮಲಬಾರ್ ಗೋಲ್ಡ್ ವತಿಯಿಂದ ವಿಶ್ವ ಗೌರವಗಳನ್ನು ಪ್ರದಾನ ಮಾಡಲಾಯಿತು | Kannada Prabha

ಸಾರಾಂಶ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆ್ಯಂಡ್‌ ಡೈಮಂಡ್ಸ್‌ ಉಡುಪಿ ಶಾಖೆ ಮಳಿಗೆಯಲ್ಲಿ ಬುಧವಾರ ಪ್ರದಾನ ಮಾಡಲಾಯಿತು.

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವತಿಯಿಂದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ವೈದ್ಯರ ದಿನ, ಲೆಕ್ಕ ಪರಿಶೋಧಕರ ದಿನ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಗೌರವ ಪುರಸ್ಕಾರವನ್ನು ಮಲಬಾರ್ ಗೋಲ್ಡ್ ಆ್ಯಂಡ್‌ ಡೈಮಂಡ್ಸ್‌ ಉಡುಪಿ ಶಾಖೆ ಮಳಿಗೆಯಲ್ಲಿ ಬುಧವಾರ ಪ್ರದಾನ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಮಕ್ಕಳು, ಯುವಜನರು ಸಮಾಜಮುಖಿಯಾಗಿ ಪರಿಸರ ಕಾಳಜಿ ಹೊಂದುವುದು ಅಗತ್ಯ ಮತ್ತು ಅನಿವಾರ್ಯ. ಮಕ್ಕಳಿಗೆ ಉಪದೇಶದ ಬದಲು ಹಿರಿಯರು ಉತ್ತಮ ಕೆಲಸವನ್ನು ಮಾಡಿ ತೋರಿಸಿ ಮಾದರಿಯಾಗಬೇಕು ಎಂದು ಹೇಳಿದರು.

ಪಾಂಡೇಶ್ವರ ಗುರುಕುಲದ ಡಾ. ವಿಜಯ ಕುಮಾರ್ ಮಂಜರ್ ಅಧ್ಯಕ್ಷತೆ ವಹಿಸಿ, ದೇಹ, ಮನಸ್ಸಿನ ಆರೋಗ್ಯ ಕಾಪಾಡುವ ವೈದ್ಯ, ಸಮಾಜದ ಆರ್ಥಿಕ ಆರೋಗ್ಯ ಕಾಪಾಡುವ ಲೆಕ್ಕ ಪರಿಶೋಧಕ, ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತರು ಸಮಾಜದಲ್ಲಿ ಸದಾ ಗೌರವಾರ್ಹರು ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠ್ಠಾನದ ಸ್ಥಾಪಕ ಯು. ವಿಶ್ವನಾಥ್ ಶೆಣೈ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್.ಪಿ. ಮಾತನಾಡಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಶಂಕರ್, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ ವ್ಯವಸ್ಥಾಪಕ ವಿಜಯ್ ಕುಮಾರ್ ಡಿ. ಉಪಸ್ಥಿತರಿದ್ದರು. ಮಲಬಾರ್ ವಿಶ್ವ ವೈದ್ಯ ಪುರಸ್ಕಾರವನ್ನು ಡಾ. ಎ. ರಾಮಚಂದ್ರ ಬಾಯರಿ, ಡಾ. ಕೆ. ಸತೀಶ್ ಕಾಮತ್, ಡಾ. ಇಂದಿರಾ ವಿ. ಶಾನುಭೋಗ್, ಮಲಬಾರ್ ವಿಶ್ವ ಲೆಕ್ಕ ಪರಿಶೋಧಕರ ಪುರಸ್ಕಾರವನ್ನು ಸಿಎ ದೇವ ಆನಂದ್, ಸಿಎ ಗಣೇಶ್ ಎರ್ಮಾಳು ಹಾಗೂ ಮಲಬಾರ್ ವಿಶ್ವ ಪತ್ರಿಕಾ ಪುರಸ್ಕಾರವನ್ನು ಶಶಿಧರ್ ಮಾಸ್ತಿಬೈಲು, ಬಾಲಕೃಷ್ಣ ಪೂಜಾರಿ ಉಚ್ಚಿಲ, ರಾಮ್ ಅಜೆಕಾರ್ ಸ್ವೀಕರಿಸಿದರು.

ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ ಕೊಡವೂರು ಸ್ವಾಗತಿಸಿದರು. ವಿಘ್ನೇಶ್ವರ ಅಡಿಗ ಪ್ರಾಸ್ತಾವಿಕ ಮಾತನಾಡಿದರು. ರಾಜೇಶ್ ಪಣಿಯಾಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಐಆರ್: ಇಲಾಖೆ ಸಿಬ್ಬಂದಿಗೆ ಹೆಚ್ಚುವರಿ ಜವಾಬ್ದಾರಿ
ಬೆಳೆ ವಿಮೆ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರಕ್ಕೆ ಕೋಟ ಪತ್ರ