ಕನ್ನಡಪ್ರಭ ವಾರ್ತೆ ಮೈಸೂರು
ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ಮತ್ತು ವೈದ್ಯ ವಾರ್ತಾ ಪ್ರಕಾಶನವು ಜೆಎಲ್ಬಿ ರಸ್ತೆಯ ಎಂಜಿನಿಯರುಗಳ ಸಂಸ್ಥೆಯಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ.ಅರಕಲಗೂಡು ನೀಲಕಂಠಮೂರ್ತಿ ಅವರ ''''ಸಮಯದ ನೀರು ಮತ್ತೆ ಹರಿಯುವ ಹೊತ್ತು'''', ''''ಹೆಣ್ಣೊಬ್ಬಳು ಗರ್ಭಕೋಶಗಳೆರಡು'''', ''''ಮುಖದಿಂದೆದ್ದು ಎತ್ತಲೋ ನಡೆದ ಕಣ್ಣು'''' ಕೃತಿಗಳನ್ನು ಕುರಿತು ಮಾತನಾಡಿದರು.
ದ್ವಿಗರ್ಭಾಶಯ ಕೇವಲ ಶೇ.0.3 ಪ್ರತಿಶತ ಮಹಿಳೆಯರಲ್ಲಿ ಕಂಡುಬರುವ ಜನ್ಮಜಾತ ವೈಕಲ್ಯ. ಇದರ ಲಕ್ಷಣ ಮತ್ತು ಕಾರಣಗಳನ್ನು, ರೋಗ ಪರೀಕ್ಷೆ ಮತ್ತು ಚಿಕಿತ್ಸಾ ವಿಧಾನಗಳನ್ನು ಅತ್ಯಂತ ಕುತೂಹಲಕಾರಿಯಾಗಿಯೂ ಬರೆದಿದ್ದಾರೆ. ಇದು ವೈದ್ಯರ ಹಾಗೂ ಓದಿದವರ ಜ್ಞಾನವನ್ನು ಕೂಡ ಹೆಚ್ಚಿಸುತ್ತದೆ ಎಂದರು.ಇದಲ್ಲದೇ ಕೊಬ್ಬಿನ ಕಥೆ, ಅತಿಕ್ರಿಯಾಶೀಲ ಮೂತ್ರಕೋಶ, ಬೆಲ್ಸ್ ಪಾಲ್ಸಿ, ಬೆವರು, ಗುದರೋಗಗಳು, ಮೂತ್ರಪಿಂಡದ ಕಲ್ಲುಗಳು, ಅತಿನಿದ್ರಾರೋಗ, ನಿದ್ರಾಭಂಗ ಶ್ವಾಸಸ್ತಂಭನ, ಸಿಕಲ್ಸೆಲ್ ಅನೀಮಿಯ ಕುರಿತು ಕೂಡ ಅರ್ಥವೂರ್ಣವಾಗಿ ಬರೆದಿದ್ದಾರೆ ಎಂದು ಅವರು ಶ್ಲಾಘಿಸಿದರು.
ಎಪ್ಪತ್ತರ ದಶಕದಲ್ಲಿ ಸತತ 13 ವರ್ಷಗಳ ಕಾಲ ಸೋಮಲಿಯಾ ದೇಶದಲ್ಲಿ ಸೇವೆ ಸಲ್ಲಿಸಿದ್ದ ಡಾ.ನೀಲಕಂಠಮೂರ್ತಿ ಅವರು `ಕಗ್ಗತ್ತಲ ಖಂಡದಲ್ಲಿ'''' ಎಂಬ ಕೃತಿಯಲ್ಲಿ ಅಲ್ಲಿನ ಪರಿಸ್ಥಿತಿಯನ್ನು ತುಂಬಾ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದಾದ ನಂತರ ಈಗ ಎರಡು ಕವನ ಸಂಕಲನಗಳನ್ನು ರಚಿಸಿದ್ದು, ಅವುಗಳು ಕೂಡ ಉತ್ತಮ ವಸ್ತಗಳನ್ನು ಹೊಂದಿವೆ ಎಂದರು.
ಮನುಷ್ಯನ ದೇಹರಚನೆ ನಿಗೂಢ ಪ್ರಕ್ರಿಯೆ. ಅದರಲ್ಲೂ ಮಹಿಳೆಯರು ದೇಹರಚನೆ ಸಂಕೀರ್ಣವಾಗಿರುತ್ತದೆ. ಮಹಿಳೆ ಮಗುವಿಗೆ ಜನ್ಮ ನೀಡಬೇಕಾಗುತ್ತದೆ. ಹೀಗಿರುವಾಗ ಅಪರೂಪದ ಎರಡು ಗರ್ಭಕೋಶಗಳಿರುವ ಪ್ರಕರಣದ ಬಗ್ಗೆ ಬರೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಸಂಶೋಧನೆ ಆಗಬೇಕು ಎಂದರು.
ಮನುಷ್ಯನಿಗೆ ಗಾಳಿ ಮತ್ತು ನೀರು ತುಂಬಾ ಮುಖ್ಯ. ಆದ್ದರಿಂದ ನೀರಿನ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರೂ ಗಮನಹರಿಸಬೇಕು ಎಂದು ಅವರು ಹೇಳಿದರು.
ವೈದ್ಯವಾರ್ತಾ ಪ್ರಕಾಶನದ ನಿರ್ದೇಶಕ ಎಚ್ಎಂಟಿ ಲಿಂಗರಾಜೇ ಅರಸು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥಾಪಕ ಡಾ.ಎಂಜಿಆರ್ ಅರಸು ಕಾರ್ಯಕ್ರಮ ನಿರೂಪಿಸಿದರು. ಎಂ. ನಟರಾಜ್ ಪ್ರಾರ್ಥಿಸಿದರು. ಡಾ.ಕೆ.ಎಸ್. ಉಮಾಶಂಕರ್ ಸ್ವಾಗತಿಸಿದರು. ನಟರಾಜ್ ವಂದಿಸಿದರು.