ಕೆರೆಗಳ ಸಂರಕ್ಷಣೆ ಎಲ್ಲರ ಕರ್ತವ್ಯ: ಬಸವಂತಪ್ಪ

KannadaprabhaNewsNetwork |  
Published : Apr 20, 2025, 01:57 AM IST
ಕ್ಯಾಪ್ಷನ 15ಕೆಡಿವಿಜಿ35ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಅಣಜಿ ಗ್ರಾಮದಲ್ಲಿ ಆಯೋಜಿಸಿದ್ದ ಕುರುಡಿ-ಕಿತ್ತೂರು ರಸ್ತೆಯಲ್ಲಿರುವ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಭೂಮಿಪೂಜೆನೆರವೇರಿಸಿದರು. | Kannada Prabha

ಸಾರಾಂಶ

ಕೆರೆಗಳು ರೈತರ ಜೀವನಾಡಿಯಾಗಿವೆ. ಜನ- ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದ್ದಾರೆ.

- ಅಣಜಿ ಗ್ರಾಮದಲ್ಲಿ ‘ಚಿಕ್ಕಕೆರೆ’ ಕೆರೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕೆರೆಗಳು ರೈತರ ಜೀವನಾಡಿಯಾಗಿವೆ. ಜನ- ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಅಣಜಿ ಗ್ರಾಮದಲ್ಲಿ ಮಂಗಳವಾರ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾಗಿರುವ ₹1 ಕೋಟಿ ವೆಚ್ಚದ ಕುರುಡಿ-ಕಿತ್ತೂರು ರಸ್ತೆಯಲ್ಲಿರುವ ‘ಚಿಕ್ಕಕೆರೆ’ ಕೆರೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬೇಸಿಗೆ ಕಾಲದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಅಷ್ಟೇ ಅಲ್ಲದೇ, ಅಂತರ್ಜಲಮಟ್ಟ ಕುಸಿತದಿಂದ ರೈತರ ಜಮೀನುಗಳಿಗೂ ತೊಂದರೆ ಆಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ಊರಿನ ಕೆರೆಗಳನ್ನು ಸಂರಕ್ಷಣೆ ಮಾಡಿದರೆ, ಅಂತರ್ಜಲಮಟ್ಟ ಹೆಚ್ಚಿಸುವ ಜೊತೆಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಬಹುದು ಎಂದರು.

ಈ ಸಂದರ್ಭ ಎಪಿಎಂಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಎಸ್.ಕೆ.ಚಂದ್ರಣ್ಣ, ಮುಖಂಡರಾದ ರಾಜಣ್ಣ, ಬಸವಲಿಂಗಪ್ಪ, ದೇವೇಂದ್ರಪ್ಪ, ಪರಮೇಶ್ವರಪ್ಪ, ಲೋಕೇಶ್, ಜಯಪ್ಪ, ಹಾಲೇಶ್, ಮಲ್ಲಣ್ಣ, ಅಣ್ಣೇಶ್, ಗ್ರಾಮಸ್ಥರು ಇದ್ದರು.

ರಸ್ತೆ ಕಾಮಗಾರಿಗೆ ಚಾಲನೆ:

ಕ್ಷೇತ್ರದ ವ್ಯಾಪ್ತಿಯ ಅಣಬೇರು ಗ್ರಾಮದಲ್ಲಿ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಮಂಜೂರಾಗಿರುವ ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಕೆ.ಎಸ್.ಬಸವಂತಪ್ಪ ಚಾಲನೆ ನೀಡಿದರು. ಈ ಸಂದರ್ಭ ಕೆಆರ್‌ಐಡಿಎಲ್ ಎಇಇ ನಿತಿನ್ ಜಾಧವ್, ಅಣಬೇರು ಗ್ರಾಮ ಪಂಚಾಯಿತಿ ಪಿಡಿಒ ವಿದ್ಯಾ, ಮುಖಂಡರಾದ ಬುಡೆನ್ ಸಾಬ್, ರಾಜಣ್ಣ, ಶಿವಜ್ಜ, ರುದ್ರಣ್ಣ, ಜಾಫರ್, ಶೌಕತ್, ಅನಿಲ್, ಓಂಕಾರಪ್ಪ, ನಾಗೇಂದ್ರಪ್ಪ, ಜಕ್ರಿಲ್, ವಾಗೇಶಪ್ಪ ಹಾಗೂ ಗ್ರಾಮಸ್ಥರು ಇದ್ದರು.

- - -

-15ಕೆಡಿವಿಜಿ35:

ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಅಣಜಿ ಗ್ರಾಮದಲ್ಲಿ ಆಯೋಜಿಸಿದ್ದ ಕುರುಡಿ-ಕಿತ್ತೂರು ರಸ್ತೆಯ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ