ಭೂ ದಾಖಲೆಗಳ ಗಣಕೀಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಚಾಲನೆಕನ್ನಡಪ್ರಭ ವಾರ್ತೆ ಕೊಪ್ಪಳ
ಬುಧವಾರ ಬೆಂಗಳೂರಿನ ತಮ್ಮ ಕಚೇರಿಯಿಂದ ಗೂಗಲ್ ಮೀಟ್ ಮೂಲಕ ಭೂ ಸುರಕ್ಷಾ ಯೋಜನೆ ಅಡಿ ಜಿಲ್ಲೆಯ ಎಲ್ಲಾ ತಾಲೂಕಿನ ಭೂ ದಾಖಲೆಗಳ ಗಣಕೀಕರಣ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಭೂ ದಾಖಲೆಗಳ ಗಣಕೀಕರಣ ಕಾರ್ಯ ಕೊಪ್ಪಳ ಜಿಲ್ಲೆಯಲ್ಲಿ ಸರಿಯಾಗಿ ಮಾಡಬೇಕು. ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಭೂ ದಾಖಲೆಗಳ ಗಣಕೀಕರಣ ಸರಿಯಾಗಿ ನಡೆಯಬೇಕು. ವಿಶೇಷವಾಗಿ ನೀರಾವರಿ ಭಾಗದಲ್ಲಿ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತವೆ. ತಾಲೂಕು ಕಚೇರಿ, ಸರ್ವೇ ಮತ್ತು ನೊಂದಣಿ ಇಲಾಖೆಗಳ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣದಿಂದ ಹಳೆಯ ದಾಖಲಾತಿಗಳ ಸಂರಕ್ಷಣೆ ಮಾಡಲು ಅನುಕೂಲವಾಗುತ್ತದೆ ಎಂದರು.ಹಳೆಯ ದಾಖಲೆಗಳ ಸಂರಕ್ಷಣೆ ಹಾಗೂ ಕಳುವಾಗಲು, ತಿದ್ದಲು ಅಸಾಧ್ಯ. ನೇರವಾಗಿ ಡಿಜಿಟಲ್ ಮಾಧ್ಯಮ ಮೂಲಕ ಭೂ ದಾಖಲೆ ಪಡೆದುಕೊಳ್ಳುವ ಸೌಲಭ್ಯ ಜನರಿಗೆ ಇರಲಿದೆ. ವಿಳಂಬ, ಅಡೆ ತಡೆಗಳನ್ನು ಆಲಿಸಿ, ತ್ವರಿತ ಆಡಳಿತ ಸೇವೆಯನ್ನು ಜನರಿಗೆ ಒದಗಿಸುವುದು ಉದ್ದೇಶವಾಗಿದೆ. ಜಿಲ್ಲೆಯ ಕಾರಟಗಿಯಲ್ಲಿ ಮೊದಲಿಗೆ ಪಾಯಲೇಟ ಬೇಸ್ ಮಾಡಿರುವುದು ಯಶಸ್ವಿಯಾಗಿದೆ. ಅಲ್ಲಿ ಚೆನ್ನಾಗಿ ಮಾಡುತ್ತಿದ್ದಾರೆ. ಅದರಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಈ ಕೆಲಸ ನಡೆಯಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿ ಭೂ ದಾಖಲೆಗಳ ಗಣಕೀಕರಣ ನಡೆಯುತ್ತಿದೆ. 3 ಲಕ್ಷಕಿಂತ ಹೆಚ್ಚಿನ ಫೈಲುಗಳು ಆಗುತ್ತವೆ. ಆನಲೈನ್ ಮೂಲಕ ಭೂ ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭೂ ದಾಖಲೆಗಳ ಗಣಕೀಕರಣಕ್ಕೆ ಸಮಸ್ಯೆಗಳಾಗದಂತೆ ಪ್ರತಿ ತಾಲೂಕಿನಲ್ಲಿ 6 ಜನ ಆಪರೇಟರ್, 3 ಸ್ಕ್ಯಾನರ್, ಯುಪಿಎಸ್ ಸೇರಿದಂತೆ ಇತರೆ ಗಣಕೀಕರಣಕ್ಕೆ ಬೇಕಾಗುವ ಎಲ್ಲಾ ಉಪಕರಣ ನೀಡಲಾಗಿದೆ. ಈ ಕಾರ್ಯ ರಾಜ್ಯದ ಎಲ್ಲಾ ಕಡೆಯು ನಡೆಯುತ್ತಿದೆ ಎಂದರು.