28ಕ್ಕೆ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Jul 26, 2026, 01:15 AM IST
25ಕೆಪಿಆರ್‌ಸಿಆರ್‌ 02:  | Kannada Prabha

ಸಾರಾಂಶ

Press Day celebration, annual awards ceremony on the 28th

* ಸಾಧಕರಿಗೆ ಗೌರವ

- ಸಂಘದ ಜಿಲ್ಲಾಧ್ಯಕ್ಷ ಆರ್‌.ಗುರುನಾಥ ಮಾಹಿತಿ । ಜೀವಮಾನ ಸಾಧನೆಗಾಗಿ ವಿಶೇಷ ಪ್ರಶಸ್ತಿ

ಕನ್ನಡಪ್ರಭ ವಾರ್ತೆ ರಾಯಚೂರು

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಸಮಿತಿ, ರಾಯಚೂರು ರಿಪೋರ್ಟರ್ಸ್‌ ಗಿಲ್ಡ್ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಭಾಗೀತ್ವದಲ್ಲಿ ಇದೇ ಜು.28 ಮಂಗಳವಾರ ಬೆಳಗ್ಗೆ 10:30 ಕ್ಕೆ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಆರ್‌.ಗುರುನಾಥ ತಿಳಿಸಿದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದು, ಮಾಜಿ ಸಚಿವ ಎನ್.ಎಸ್.ಬೋಸರಾಜು ಅವರ ವಾರ್ಷಿಕ ಪ್ರಶಸ್ತಿ ಗಳನ್ನು ಪ್ರದಾನ ಮಾಡಲಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಯನ್ನಾಡಲಿದ್ದಾರೆ. ಜಿಲ್ಲೆಯ ಸಂಸದರು,ಶಾಸಕರು,ಎಂಎಲ್ಸಿ, ಡಿಸಿ,ಜಿಪಂ ಸಿಇಒ, ಎಸ್ಪಿ, ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರು, ಸಂಘದ ರಾಜ್ಯ ಸಮಿತಿಯ ಪ್ರಮುಖರು ಸೇರಿ ಅನೇಕರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಇದೇ ವೇಳೆ ಕಲಬುರಗಿ ಪೀಠದ ಮಾಹಿತಿ ಹಕ್ಕು ಆಯೋಗದ ಆಯುಕ್ತ ಬಿ.ವೆಂಕಟಸಿಂಗ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದರು.

ಪ್ರಶಸ್ತಿ ಪುರಸ್ಕೃತರು: ಪ್ರತಿ ವರ್ಷ ಸಂಘದಿಂದ ಜೀವಮಾನ ಸಾಧನೆ ವಿಶೇಷ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದ ಅವರು, ವಿವಿಧ ಪ್ರಾಯೋಜಿತ ಜೀವಮಾನ ಪ್ರಶಸ್ತಿಗಳಿಗೆ ಹಿರಿಯ ಪತ್ರಕರ್ತರಾದ ರಂಗನಾಥ ಚಕ್ರವರ್ತಿ, ಶಿವಮೂರ್ತಿ ಹಿರೇಮಠ, ವೀರೇಶ ಸೌದ್ರಿ ಅವರನ್ನು ಅದೇ ರೀತಿ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ರಾಮಕೃಷ್ಣ ದಾಸರಿ, ಚಂದ್ರಪ್ಪ ದೋರನಹಳ್ಲಿ, ಸುರೇಶಗೌಡ, ಹನುಮಂತ ಕನ್ನಾಳ, ರಾಜಶೇಖರ, ಆದೇಶ ನಗನೂರು, ಈಶಪ್ಪ ಬೈಲ ಮರ್ಚೆಡ್, ಬದ್ರಿನಾಥ , ಕ್ಯಾಮರಾಮನ್ ಶಿವುಕುಮಾರ, ಮಂಜುನಾಥ ಎತ್ತಿನಮಾಳಗಿ ಅವರು ಆಯ್ಕೆ ಮಾಡಲಾಗಿದೆ ಎಂದು ವಿವರಿಸಿದರು.

ಗಿಲ್ಡ್‌ ಅಧ್ಯಕ್ಷ ವಿಜಯ ಕುಮಾರ ಜಾಗಟಗಲ್ ಮಾತನಾಡಿ, ಗಿಲ್ಡ್‌ ನಿಂದ ವಿತರಿಸುತ್ತಿರುವ ಏಳು ಪ್ರಶಸ್ತಿಗಳಿಗೆ ಮಂಜುನಾಥ ಸಾಲಿ, ವಾಗೀಶ ಪಂಡಿತಾರಾಧ್ಯ .ವಿ.ಪಾಟೀಲ್, ಗೌಡಪ್ಪಗೌಡ, ಶಶಿಧರ ಅಂಗಡಿ, ಖ್ವಾಜಾಹುಸೇನ್, ಕ್ಯಾಮರಾಮನ್ ವಾಸುದೇವ.ಎಸ್. ಅವರನ್ನ ಆಯ್ಕೆ ಮಾಡಲಾಗಿದೆ ಎಂದರು.

ಜಂಟಿ ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕನೂರು, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ, ಉಪಾಧ್ಯಕ್ಷ ಮಹಾನಂದ ನಾಯಕ, ಖಜಾಂಚಿ ಮಲ್ಲಿಕಾರ್ಜುನ ಸ್ವಾಮಿ, ಗಿಲ್ಡ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಸೇರಿ ಇದ್ದರು.

-----------------------

25ಕೆಪಿಆರ್‌ಸಿಆರ್‌ 02: ಜಂಟಿ ಸುದ್ದಿಗೋಷ್ಠಿಯಲ್ಲಿ ಆರ್‌.ಗುರುನಾಥ ಮತ್ತು ವಿಜಯ ಜಾಗಟಗಲ್ ಮಾತನಾಡಿದರು,

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಪುಟ ವಿಸ್ತರಣೆ ಮುನ್ನೆಲೆಗೆ: ಬರ ಪರಿಸ್ಥಿತಿ ಗಾಳಿಗೆ
ಎಸ್ಐಆರ್: ಬೆಂ.ಗ್ರಾದಲ್ಲಿ 7,49,582 ಗಣತಿ ನಮೂನೆ ಗಣಕೀಕರಣ