ಬಸವರಾಜ ಹೊರಟ್ಟಿ ರಾಜೀನಾಮೆಗೆ ಒತ್ತಡ: ಟೆಂಗಿನಕಾಯಿ

KannadaprabhaNewsNetwork |  
Published : Aug 11, 2026, 02:00 AM IST
ಪೊಟೋ೧೦ಸಿಪಿಟಿ೨: ತಾಲೂಕಿನ ಜೆ. ಬ್ಯಾಡರಹಳ್ಳಿ ಗ್ರಾಮದಲ್ಲಿ ಸಚಿವ ಬಾಲಕೃಷ್ಣ ಬರ ಪರಿಸ್ಥಿತಿ ಅಧ್ಯಯನ ನಡೆಸಿದರು. | Kannada Prabha

ಸಾರಾಂಶ

ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ 20-25 ಜನರು ಬಸವರಾಜ ಹೊರಟ್ಟಿ ಅವರ ಕೊಠಡಿಯಲ್ಲಿ ಕುಳಿತು ರಾಜೀನಾಮೆ ಪತ್ರ ಸಿದ್ಧಪಡಿಸಿ ಸಹಿ ಮಾಡಿಸಿಕೊಂಡಿರುವುದು ವಿಷಾದಕರ.

ಹುಬ್ಬಳ್ಳಿ:

ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡುವುದಾಗಿ ತಿಳಿಸಿದ್ದರೂ, ಕಾಂಗ್ರೆಸ್ ನಾಯಕರು ಅವರ ಮೇಲೆ ಒತ್ತಡ ಹೇರಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ 20-25 ಜನರು ಹೊರಟ್ಟಿ ಅವರ ಕೊಠಡಿಯಲ್ಲಿ ಕುಳಿತು ರಾಜೀನಾಮೆ ಪತ್ರ ಸಿದ್ಧಪಡಿಸಿ ಸಹಿ ಮಾಡಿಸಿಕೊಂಡಿರುವುದು ವಿಷಾದಕರ. ಹಿರಿಯ ಮುತ್ಸದ್ಧಿ ರಾಜಕಾರಣಿಯೊಂದಿಗೆ ಈ ರೀತಿ ನಡೆದುಕೊಂಡಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಹೊರಟ್ಟಿ ಅವರ ಮೇಲೆ ಒತ್ತಡ ಹೇರಿರುವ ಕುರಿತು ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ ಎಂದರು.

ಗ್ಯಾರಂಟಿ ಯೋಜನೆಗಳ ಹಗರಣ ಮುಚ್ಚಿ ಹಾಕಲು ಪರಿಷ್ಕರಣೆ ಮಾಡಲಾಗುತ್ತಿದೆ. ಕಳೆದ ಅವಧಿಯ ಗೃಹಲಕ್ಷ್ಮಿ ಹಗರಣದ ಬಗ್ಗೆ ಸರ್ಕಾರ ಚಕಾರ ಎತ್ತುತ್ತಿಲ್ಲ. ಆ. 13ರಿಂದ ನಡೆಯಲಿರುವ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆಯ ₹5,000 ಕೋಟಿ ಲೆಕ್ಕ, ಅನ್ನಭಾಗ್ಯದ ₹627 ಕೋಟಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದರು.

ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಧಾರವಾಡದ ಎಫ್‌ಎಂಸಿಜಿ ಕ್ಲಸ್ಟರ್ ಉಳಿಸಲು 2028ರೊಳಗೆ ಕ್ರಮ ಕೈಗೊಂಡು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಹುಬ್ಬಳ್ಳಿ-ಧಾರವಾಡವನ್ನು ಪ್ರತ್ಯೇಕ ಪಾಲಿಕೆಗಳಾಗಿ ವಿಭಜಿಸುವ ಬದಲು ಒಂದೇ ಮಹಾನಗರ ಪಾಲಿಕೆ ಮುಂದುವರಿಯಬೇಕು. ಎರಡಾಗಿ ವಿಭಜಿಸಿದರೆ ಅನುದಾನ ಹಾಗೂ ಹಣಕಾಸಿನ ಸಮಸ್ಯೆ ಎದುರಾಗಬಹುದು ಎಂದು ಟೆಂಗಿನಕಾಯಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೀರ್ಘ ಹೋರಾಟಕ್ಕೆ ಇಲ್ಲ ನ್ಯಾಯ: ಮಂತ್ರಿ, ಶಾಸಕರನ್ನು ನಿಲ್ಲಿಸಿ ಕೇಳೋಣ
ಗುತ್ತಿಗೆ ಕಾರ್ಮಿಕರ ಸೇವೆ ಕಾಯಂ ಮಾಡಿ: ಸಿಐಟಿಯು ಪ್ರತಿಭಟನೆ