ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಲೇರಿಯಾ ನಿಂತ್ರಣಾಧಿಕಾರಿ ಡಾ.ಕಾಂತರಾಜು ಮಾತನಾಡಿ, ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚಾಗಿದೆ. ಇದರ ನಿಯಂತ್ರಣದ ಮೂಲಕ ರಾಜ್ಯಾದ್ಯಂತ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಚಾಲನೆ ನೀಡಲಾಗಿದೆ ಎಂದರು.
ಸೊಳ್ಳೆಗಳ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮನೆ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕಡೆ ಪ್ರತಿಯೊಬ್ಬರೂ ಗಮನ ಹರಿಸಬೇಕು. ಗ್ರಾಮೀಣ ಭಾಗದಲ್ಲಿ ಸ್ವಚ್ಛತೆಗೆ ಹೆಚ್ಚು ಒತ್ತು ಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮೂಲಕ ಆರೋಗ್ಯ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಮನವಿ ಮಾಡಿದರು.ನಗರದ ಪ್ರಮುಖ ಬೀದಿಗಳಲ್ಲಿ ಡೆಂಘೀ ಮತ್ತು ಚಿಕೂನ್ ಗುನ್ಯ ತಡೆಗೆ ಅಗತ್ಯ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಹಾಗೂ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ರಕ್ತದಾನದಿಂದ ಹಲವು ಆರೋಗ್ಯ ಸಮಸ್ಯೆಗಳು ದೂರ: ವಿನೋದ್
ಪಟ್ಟಣದಲ್ಲಿ ಸುಬ್ರಹ್ಮಣ್ಯ ಸೇವಾ ಟ್ರಸ್ಟ್ ಹಾಗೂ ಅಭಿಮಾನಿ ಬಳಗದವರು ನಾಡಪ್ರಭು ಕೆಂಪೇಗೌಡ ಜಯಂತಿ ಸ್ಮರಣಾರ್ಥವಾಗಿ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಆರೋಗ್ಯವಂತರು ರಕ್ತದಾನವನ್ನು ಯಾವುದೇ ಭಯವಿಲ್ಲದೆ ನೀಡಬಹುದು ಎಂದರು.ರಕ್ತದಾನ ಮಾಡಿದಷ್ಟು ಹೊಸದಾಗಿ ರಕ್ತ ಶೇಖರಣೆಯಾಗಲಿದೆ. ಬಡವ, ಶ್ರೀಮಂತ ಎಂಬ ಬೇಧವಿಲ್ಲದೆ ಎಲ್ಲ ಆರೋಗ್ಯವಂತರು ರಕ್ತದಾನ ಮಾಡುವುದರಿಂದ ಕೊಬ್ಬು ನಿವಾರಣೆ, ಜ್ಞಾಪಕ ಶಕ್ತಿ ವೃದ್ಧಿ, ಹೃದಯ ಸಂಬಂಧಿ ಸಮಸ್ಯೆ ದೂರವಾಗಲಿದೆ. ಅಪಘಾತ, ಡೆಂಘೀ, ಶಸ್ತ್ರಚಿಕಿತ್ಸೆಯಂತಹ ತುರ್ತು ಸಮಯದಲ್ಲಿ ರಕ್ತದ ಅವಶ್ಯಕತೆ ಇದೆ ಎಂದರು.