ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕನ್ನಡಪರ ಸಂಘಟನೆಗಳು, ಮುಖಂಡರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಆರ್ಟಿಒ, ಗಣಿ ಮತ್ತು ಭೂ ವಿಜ್ಞಾನ, ಪೊಲೀಸ್ ಇಲಾಖೆ, ತಾಲೂಕು ಆಡಳಿತದ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಪ್ರಜಾಸೌಧದ ಮುಂಧೆ ಧರಣಿ ನಡೆಸಿ ಮಂಗಳವಾರ ಟಿಪ್ಪರ್ ಹರಿದು ಮೂವರು ಸಾವನ್ನಪ್ಪಿದ್ದಾರೆ. ಇದು ತಾಲೂಕು ಆಡಳಿತದ ವೈಫಲ್ಯ ಎಂದು ಪ್ರತಿಭಟನಾಕಾರರು ದೂರಿದರು.
ತಾಲೂಕಿನಲ್ಲಿ ಅನುಮತಿ ನೆಪದಲ್ಲಿ ಅಕ್ರಮ ಗಣಿಗಾರಿಕೆ ಮಿತಿ ಮೀರಿ ನಡೆಯುತ್ತಿದೆ. ಒಂದು ಟ್ರಿಪ್ ಪರ್ಮಿಟ್/ರಾಯಲ್ಟಿ ಹಾಕಿ ಹತ್ತಾರು ಟ್ರಿಪ್ ಕಲ್ಲು ಅಥವಾ ಕ್ರಸರ್ ಉತ್ಪನ್ನ ಅಕ್ರಮವಾಗಿ ಸಾಗಿಸುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕಾದ ಜಿಲ್ಲಾಡಳಿತ ಜಾಣ ಮೌನ ವಹಿಸಿದೆ ಎಂದು ಆರೋಪಿಸಿದರು.ಓವರ್ ಲೋಡ್ ತುಂಬಿದ ಟಿಪ್ಪರ್ಗಳ ಓಡಾಟದ ಜೊತೆಗೆ ಅತೀ ವೇಗವಾಗಿ ಸಂಚರಿಸುತ್ತಿವೆ. ಓವರ್ ಸಂಚಾರದಿಂದ ರಸ್ತೆಗಳು ಹಾಳಾಗುತ್ತಿದ್ದರೂ ಸಂಬಂಧ ಪಟ್ಟ ಇಲಾಖೆಗಳು ಕಣ್ಣು ಮುಚ್ಚಿ ಕುಳಿತಿವೆ ಎಂದು ದೂರಿದ್ದಾರೆ. ಟಿಪ್ಪರ್ಗಳ ಚಾಲಕರಲ್ಲಿ ಬಹುತೇಕರು ಮದ್ಯ ಕುಡಿದು ಟಿಪ್ಪರ್ ಓಡಿಸುತ್ತಿದ್ದಾರೆ ಅಲ್ಲದೆ ಮೊಬೈಲ್ ಜೊತೆ ಮಾತನಾಡಿಕೊಂಡು ಹೋಗುತ್ತಿದ್ದಾರೆ. ಇದಕ್ಕೆ ದಂಡ ಹಾಕಬೇಕಾದ ಪೊಲೀಸರು ಕೈ ಚೆಲ್ಲಿ ಕುಳಿತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.