ಕನ್ನಡಪ್ರಭ ವಾರ್ತೆ ಯಾದಗಿರಿ
ಈ ವೇಳೆ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಧೀಶ ರವೀಂದ್ರ ಹೊನೋಲೆ ಅವರು, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಪ್ರಚಾರ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರನಗೌಡ ಪಾಟೀಲ್ ಮಾತನಾಡಿ, ತಾಲೂಕು ಮಟ್ಟದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಹಾಗೂ ಮೇಲ್ವೀಚಾರಕಿಯರು ಕ್ಲಸ್ಟರ್ ಮಟ್ಟದಲ್ಲಿ ಮಕ್ಕಳ ಸಾಗಾಣಿಕೆ ಬಗ್ಗೆ ಕ್ರಮವಹಿಸಬೇಕೆಂದು ಹೇಳಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರೇಮಮೂರ್ತಿ, ತಾಲೂಕಿನ ತಹಸೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು, ಇಲಾಖೆಯ ಸಿಬ್ಬಂದಿಗಳಾದ ಪ್ರಭುಲಿಂಗ ಪ್ಯಾಟಿ, ಅನೀಲಕುಮಾರ, ಜಿಲ್ಲಾ ಸಂಯೋಜಕರಾದ ಯಲ್ಲಪ್ಪ ಪ್ರಶಾಂತಕುಮಾರ ಇತರರಿದ್ದರು.