ಅಪರಾಧ ತಡೆಗೆ ಮುಂಜಾಗ್ರತೆ ಅವಶ್ಯ: ಸಿಯುಕೆ ಕುಲಪತಿ

KannadaprabhaNewsNetwork |  
Published : Feb 09, 2024, 01:47 AM IST
ಆಳಂದದ ಸಿಯುಕೆಯಲ್ಲಿ ಕಂಪ್ಯೂಟರ್ ನೆಟ್‍ವರ್ಕ್‍ಗಳು ಮತ್ತು ಸೈಬರ್ ಭದ್ರತಾ ಬೆದರಿಕೆಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಮಾತನಾಡಿದರು. | Kannada Prabha

ಸಾರಾಂಶ

ಪರಿಣಾಮಕಾರಿ ಮತ್ತು ವೇಗದ ಸಂವಹನಕ್ಕಾಗಿ ಕಂಪ್ಯೂಟರ್ ನೆಟ್‍ವರ್ಕಿಂಗ್ ಬಹಳ ಮುಖ್ಯ. ಡಿಜಿಟಲ್ ಇಂಡಿಯಾ ಭಾರತದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ: ಸಿಯುಕೆ ಕುಲಪತಿ ಬಟ್ಟು ಸತ್ಯನಾರಾಯಣ

ಕನ್ನಡಪ್ರಭ ವಾರ್ತೆ ಆಳಂದ

ಡಿಜಿಟಲ್ ಯುಗದಲ್ಲಿ ಸೈಬರ್ ಕ್ರೈಂ ತಡೆಗೆ ಮುಂಜಾಗ್ರತೆ ಅಗತ್ಯವಿದೆ. ಸೈಬರ್ ಭದ್ರತೆ ಬಹಳ ಮುಖ್ಯ ಎಂದು ಸಿಯುಕೆ ಕುಲಪತಿ ಬಟ್ಟು ಸತ್ಯನಾರಾಯಣ ಹೇಳಿದರು.

ತಾಲೂಕಿನ ಕಡಗಂಚಿ ಹತ್ತಿರದ ಸಿಯುಕೆಯ ಕಂಪ್ಯೂಟರ್ ಸೈನ್ಸ್ ವಿಭಾಗ (ಎಂಸಿಎ) ಆಯೋಜಿಸಿದ್ದ ಕಂಪ್ಯೂಟರ್ ನೆಟ್‍ವರ್ಕ್‍ಗಳು ಮತ್ತು ಸೈಬರ್ ಭದ್ರತಾ ಬೆದರಿಕೆಗಳ ಕುರಿತು ಮೂರು ದಿನಗಳ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಪರಿಣಾಮಕಾರಿ ಮತ್ತು ವೇಗದ ಸಂವಹನಕ್ಕಾಗಿ ಕಂಪ್ಯೂಟರ್ ನೆಟ್‍ವರ್ಕಿಂಗ್ ಬಹಳ ಮುಖ್ಯ. ಡಿಜಿಟಲ್ ಇಂಡಿಯಾ ಭಾರತದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಬಹಳ ಸಹಕಾರಿಯಾಗಿದೆ. ಡಿಜಿಟಲ್ ಇಂಡಿಯಾದಿಂದಾಗಿ ಗ್ರಾಮೀಣ ಜನರು ಸಹ ನಗರ ಜನರಂತೆ ಮುಂದುವರಿದ ತಂತ್ರಜ್ಞಾನ ಮತ್ತು ಮಾರುಕಟ್ಟೆಗಳ ಸೇವೆಯನ್ನು ಪಡೆಯಲು ಸಾಧ್ಯವಾಗುತ್ತಿದೆ. ಇದು ನಗರ ಮತ್ತು ಗ್ರಾಮೀಣ ಭಾರತದ ನಡುವಿನ ಅಂತರವನ್ನು ಕಡಿಮೆ ಮಾಡುತ್ತಿದೆ ಎಂದು ಹೇಳಿದರು.

ಸಿಯುಕೆ ಕುಲಸಚಿವ ಆರ್.ಆರ್. ಬಿರಾದಾರ್ ಮಾತನಾಡಿ, ಡಿಜಿಟಲೀಕರಣ ಮತ್ತು ನೆಟ್‍ವರ್ಕಿಂಗ್‌ ವ್ಯವಸ್ಥೆಯು ದೇಶವು ಸಂಪನ್ಮೂಲಗಳನ್ನು ಒಬ್ಬರಿಂದ ಇನ್ನೊಬ್ಬರಿಗೆ ಮತ್ತು ಒಂದು ಸ್ಥಳದಿಂದ ಇನ್ನೊಂದಕ್ಕೆ ಸುಲಭವಾಗಿ ಹಂಚಿಕೊಳ್ಳಲು ಸಹಾಯ ಮಾಡಿದೆ. ಇದರಿಂದ ರಾಷ್ಟ್ರದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಗಣಕ ವಿಜ್ಞಾನ ವಿಭಾಗದ ನೂತನ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಲಾಯಿತು.

ಸಂಘಟನಾ ಕಾರ್ಯದರ್ಶಿ ಡಾ.ನಾಗರಾಜ್ ಧಾರವಾಡಕರ ಸಮ್ಮೇಳನದ ವಿಷಯವನ್ನು ಪರಿಚಯಿಸಿ, ಅದರ ಹಿಂದಿನ ಉದ್ದೇಶಗಳನ್ನು ವಿವರಿಸಿದರು. ಶ್ರೀಕಂಠಯ್ಯ ಕೆ.ಸಿ, ಆರ್.ಎಸ್. ಹೆಗಡಿ, ಏರೋವೈರ್ ಬೆಂಗಳೂರಿನ ಮಂಜುನಾಥ್ ಕಶ್ಯಪ್, ವಿಜಯಪುರದ ಬಿಎಲ್ಡಿ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಡಾ. ಅನಿಲ್ ಕೆ.ಕಣ್ಣೂರು, ಡಾ.ಗುರುರಾಜ ಮುಕರಂಬಿ, ಡಾ.ಮಾಧುರಿ ಕಾಗಲೆ, ಡಾ. ಪರಶುರಾಮ ಕಾಂಬಳೆ, ಡಾ.ಸುಕನ್ಯಾ, ಕುಮಾರಿ ಶಿಲ್ಪಾ, ಪೂರ್ಣಿಮಾ, ಪರಶುರಾಮ್ ಮತ್ತು ಬಾಪು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!