ದಿನ ಬಳಕೆ ವಸ್ತುಗಳ ಬೆಲೆ ಏರಿಕೆ: ರಸ್ತೆ ತಡೆದು ಪ್ರತಿಭಟನೆ

KannadaprabhaNewsNetwork |  
Published : Apr 10, 2025, 01:16 AM IST
9ಎಚ್.ಎಲ್.ವೈ-1: ಅಗತ್ಯ ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಸಿದ ರಾಜ್ಯ ಸರ್ಕಾರದ  ಕ್ರಮವನ್ನು ಖಂಡಿಸಿ ತಾಲೂಕ ಬಿಜೆಪಿ ಘಟಕದ ವತಿಯಿಂದ ಬುಧವಾರ ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಶಿವಾಜಿ ವೃತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆ ನಡೆಸಿದರು. | Kannada Prabha

ಸಾರಾಂಶ

ಅಗತ್ಯ ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಬುಧವಾರ ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಹಳಿಯಾಳ: ಅಗತ್ಯ ದಿನಬಳಕೆ ವಸ್ತುಗಳ ಬೆಲೆಯನ್ನು ಏರಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಘಟಕದಿಂದ ಬುಧವಾರ ಹಳಿಯಾಳ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಗಣೇಶ ಕಲ್ಯಾಣ ಮಂಟಪದಿಂದ ವನಶ್ರೀ ವೃತ್ತ ಹಾಗೂ ಶಿವಾಜಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ಹಾಗೂ ಕಾರ್ಯಕರ್ತರು ಶಿವಾಜಿ ವೃತ್ತಕ್ಕೆ ತಲುಪಿ ಅಲ್ಲಿಂದ ಹಾದು ಹೋಗುವ ಖಾನಾಪುರ-ತಾಳಗುಪ್ಪ ಮತ್ತು ಧಾರವಾಡ-ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು. ಅರ್ಧ ಗಂಟೆಗೂ ಹೆಚ್ಚು ಸಮಯ ರಸ್ತೆ ತಡೆ ನಡೆಸಿ ಪ್ರತಿಭಟನಾ ಸಭೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.

ಮುಖಂಡ ಮಂಗೇಶ ದೇಶಪಾಂಡೆ ಮಾತನಾಡಿ, ಗ್ಯಾರಂಟಿ ಯೋಜನೆಗಳು ಹಾಗೂ ಭಾಗ್ಯಗಳ ಮೂಲಕ ಮತದಾರರಿಗೆ ಮರಳು ಮಾಡಿರುವ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುವ ಮೂಲಕ ಜನಸಾಮಾನ್ಯರ ಬದುಕಿಗೆ ಬರೆ ಇಡಲಾರಂಭಿಸಿದೆ. ಬೆಲೆ ಏರಿಕೆಯ ಜೊತೆಯಲ್ಲಿ ತೆರಿಗೆಯನ್ನು ದುಪ್ಪಟ್ಟು ಮಾಡಿರುವ ಈ ರಾಜ್ಯ ಸರ್ಕಾರ ಮೊದಲು ಅಧಿಕಾರದಿಂದ ಇಳಿಯಬೇಕು ಎಂದು ಆಗ್ರಹಿಸಿದರು.

ಮಾಜಿ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ದಿಸೆಯಲ್ಲಿ ಸರ್ಕಾರ ಸಂಪೂರ್ಣ ಖಜಾನೆ ಖಾಲಿ ಮಾಡಿದೆ. ಈ ಸರ್ಕಾರದಲ್ಲಿ ಅಲ್ಕೋಹಾಲ್ ಮತ್ತು ಹಾಲಿನ ದರವು ಹೆಚ್ಚಾಗಿದೆ. ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಮಾಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರದ ಬಳಿ ಹಣವಿಲ್ಲವಾಗಿದೆ ಎಂದರು.

ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸಿ ಜನಸಾಮಾನ್ಯರ ಬೆನ್ನೆಲುಬು ಮುರಿಯುವ ಕಾರ್ಯವನ್ನು ಮಾಡುತ್ತಿದೆ. ಈ ಸರ್ಕಾರ ಕಣ್ಣು, ಕಿವಿ ಇಲ್ಲದ ಹಾಗೇ ವರ್ತಿಸುತ್ತಿದೆ. ಹಳಿಯಾಳ ತಾಲೂಕಿನ ಗ್ರಾಮಾಂತರ ಭಾಗ ಮತ್ತು ಪಟ್ಟಣದಲ್ಲಿ ಜೀವಜಲದ ಸಮಸ್ಯೆ ಎದುರಾಗಿದೆ. ಅತ್ತ ದಶಕಗಳು ಕಳೆದರೂ ಕಾಳಿನದಿ ನೀರಾವರಿ ಯೋಜನೆಯೂ ಮುಕ್ತಾಯದ ಲಕ್ಷಣಗಳು ಕಂಡು ಬರುತ್ತಿಲ್ಲ. ಸ್ಥಳೀಯ ಶಾಸಕರು ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಬಗ್ಗೆ ಯಾವ ಚಕಾರ ಎತ್ತುತ್ತಿಲ್ಲ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾಜಿ ನರಸಾನಿ, ಮಂಡಲ ಅಧ್ಯಕ್ಷ ವಿಠ್ಠಲ ಸಿದ್ಧನ್ನವರ, ಪ್ರಮುಖರಾದ ಸಂತೋಷ ಘಟಕಾಂಬ್ಳೆ, ವಿ.ಎಂ. ಪಾಟೀಲ, ತಾನಾಜಿ ಪಟ್ಟೇಕಾರ, ಶ್ರೀನಿವಾಸ ಘೋಟ್ನೇಕರ, ಆಕಾಶ ಉಪ್ಪೀನ, ಸೋನಪ್ಪ ಸುಣಕಾರ, ಮೋಹನ ಬೆಳಗಾಂವಕರ, ಪಾಂಡು ಪಾಟೀಲ, ಯಲ್ಲಪ್ಪ ಹೊನ್ನೋಜಿ, ಉದಯ ಜಾಧವ, ಪ್ರದೀಪ ಹಿರೇಕರ, ತುಕಾರಾಮ್ ಗೌಡಾ, ವಿಜಯ ಬೊಬಾಟೆ, ಜಯಲಕ್ಷ್ಮಿ ಚವ್ಹಾನ, ರೂಪಾ ಗಿರಿ, ಸಂಗೀತಾ ಜಾಧವ, ರಂಜನಾ ನಡಹಟ್ಟಿ, ಚಂದ್ರಕಾಂತ ಕಮ್ಮಾರ ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...