ಕನ್ನಡಪ್ರಭ ವಾರ್ತೆ ಹನೂರು
ಶಾಸಕರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಸ್ಥಳೀಯರು ವಾದ್ಯಮೇಳದೊಂದಿಗೆ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.
ನೂತನ ಆರೋಗ್ಯ ಕೇಂದ್ರದ ಕಟ್ಟಡದಲ್ಲಿ ವಿಚಾರಣೆ ಮತ್ತು ಕಚೇರಿ, ಸಭಾಂಗಣ, ವೈದ್ಯರ ಕೊಠಡಿ, ಹೊರರೋಗಿ ವಿಭಾಗ, ಚುಚ್ಚುಮದ್ದು ಕೊಠಡಿ, ಪ್ರಯೋಗಾಲಯ, ಔಷಧಾಲಯ, ಉಗ್ರಾಣ, ಮಹಿಳಾ ಮತ್ತು ಪುರುಷರ ವಾರ್ಡ್, ಪ್ರಿಪರೇಷನ್ ಕೊಠಡಿ, ಮೈನರ್ ಓಟಿ, ಹೆರಿಗೆ ಕೊಠಡಿ ಸೇರಿದಂತೆ ಒಟ್ಟು 21ಕ್ಕೂ ಹೆಚ್ಚು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಇದರ ಜೊತೆಗೆ ಬೋರ್ವೆಲ್, 5 ಕೆವಿಎ ಜನರೇಟರ್, ಯುಪಿಎಸ್, ಸೋಲಾರ್ ವ್ಯವಸ್ಥೆ, ಸಂಪ್, ಸೆಪ್ಟಿಕ್ ಟ್ಯಾಂಕ್ ಹಾಗೂ ಮೇಲ್ಛಾವಣಿಯಲ್ಲಿ ಓವರ್ಹೆಡ್ ಟ್ಯಾಂಕ್ ವ್ಯವಸ್ಥೆಯೂ ಇರಲಿದೆ ಎಂದರು.ಈ ಆರೋಗ್ಯ ಕೇಂದ್ರದಿಂದ ಗೋಪಿನಾಥಂ ಸುತ್ತಮುತ್ತಲಿನ 15ಕ್ಕೂ ಹೆಚ್ಚು ಕಾಡಂಚಿನ ಗ್ರಾಮಗಳ ಜನರಿಗೆ ಸ್ಥಳೀಯವಾಗಿಯೇ ಗುಣಮಟ್ಟದ ಆರೋಗ್ಯ ಸೇವೆ ದೊರೆಯಲಿದೆ. ವಿಶೇಷವಾಗಿ ಗರ್ಭಿಣಿಯರು, ವೃದ್ಧರು ಹಾಗೂ ತುರ್ತು ಆರೋಗ್ಯ ಸೇವೆ ಅಗತ್ಯವಿರುವವರು ಹನೂರು ಮತ್ತು ಕೊಳ್ಳೇಗಾಲಕ್ಕೆ ತೆರಳಬೇಕಾದ ಅನಿವಾರ್ಯತೆ ಕಡಿಮೆಯಾಗಲಿದೆ ಎಂದು ಹೇಳಿದರು.
ಇದಕ್ಕೆ ಸ್ಪಂದಿಸಿದ ಶಾಸಕ ಎಂ.ಆರ್.ಮಂಜುನಾಥ್ ಅವರು, ಗೋಪಿನಾಥಂ ಕಾಡಂಚಿನ ಪ್ರದೇಶವಾಗಿದ್ದು, ಇಲ್ಲಿನ ಜನರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಆ ಬೇಡಿಕೆ ಈಡೇರಿದೆ. ನಿಮ್ಮ ಗ್ರಾಮದಲ್ಲಿ ಅಥವಾ ಸುತ್ತಮುತ್ತಲಿನ ಪ್ರದೇಶದಲ್ಲಿ ವೈದ್ಯರು ಇದ್ದರೆ ಅವರ ಬಗ್ಗೆ ಮಾಹಿತಿ ನೀಡಿ. ಅಂತಹ ವೈದ್ಯರನ್ನು ಇಲ್ಲಿಗೆ ನೇಮಕ ಮಾಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.