ಬೆಲೆ ಹೆಚ್ಚಳ ಪರಿಸ್ಥಿತಿ ಪ್ರಧಾನಿ ಪರಿಗಣಿಸಿಲ್ಲ: ಪೊನ್ನಣ್ಣ

KannadaprabhaNewsNetwork |  
Published : May 17, 2026, 02:30 AM IST
 ಆರೋಪ  | Kannada Prabha

ಸಾರಾಂಶ

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಇತರ ವಸ್ತುಗಳ ಬೆಲೆ ಹೆಚ್ಚಳ ಪರಿಸ್ಥಿತಿ ದೇಶಕ್ಕೆ ಬರುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದರು. ಆದರೆ ಪ್ರಧಾನಿ ಮೋದಿ ಅವರು ಅದನ್ನು ಪರಿಗಣಿಸಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ದೇಶದಲ್ಲಿ ಪೆಟ್ರೋಲ್ ಡೀಸೆಲ್ ಮತ್ತು ಇತರ ವಸ್ತುಗಳ ಬೆಲೆ ಹೆಚ್ಚಳ ಪರಿಸ್ಥಿತಿ ದೇಶಕ್ಕೆ ಬರುತ್ತದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು ಹೇಳಿದ್ದರು. ಆದರೆ ಪ್ರಧಾನಿ ಮೋದಿ ಅವರು ಅದನ್ನು ಪರಿಗಣಿಸಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದ ಹಿಂದೆ ಈ ಪರಿಸ್ಥಿತಿ ಬಗ್ಗೆ ಹೇಳಿದ್ದರು. ದೇಶದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಇದರ ಬಗ್ಗೆ ಸರ್ವಪಕ್ಷಗಳ ಸಭೆ ಕರೆಯಿರಿ. ಪರಿಹಾರ ಕಂಡುಕೊಳ್ಳಿ ಎಂದು ಹೇಳಿದ್ದರು. ಆರ್ಥಿಕ ಸಚಿವರು ಅನೇಕ ಆರ್ಥಿಕ ತಜ್ಞರ ಸೇರಿಸಿ ಸಭೆ ನಡೆಸಿ ಅಂತ ಹೇಳಿದ್ದರು. ಆದರೆ ಪ್ರಧಾನಿ ಮೋದಿಯವರು ಯಾವುದನ್ನು ಪರಿಗಣಿಸಲಿಲ್ಲ. ರಾಜಕೀಯಕ್ಕೋಸ್ಕರ ಕೆಲವು ತೀರ್ಮಾನಗಳನ್ನು ತೆಗೆದುಕೊಂಡರು ಎಂದರು.

ಪಂಚರಾಜ್ಯಗಳ ಚುನಾವಣೆ ಬಳಿಕ ಎಲ್ ಪಿ ಜಿ ಬೆಲೆ ಏರಿಕೆ ಮಾಡಿದರು. ಈಗ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಮಾಡಿದರು. ಇಂದು ಕಬ್ಬಿಣ ಜಲ್ಲಿ ಟಾರು ಪ್ರತಿಯೊಂದರ ಬೆಲೆ ನಾಲ್ಕರಷ್ಟು ಹೆಚ್ಚಳವಾಗಿದೆ. ಎಲ್ಲವುಗಳ ಬೆಲೆ ಹೆಚ್ಚಳವಾಗಿದೆ. ಯಾವುದೇ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಡಾಲರ್ ಬೆಲೆ 96 ರೂಪಾಯಿ ಆಗಿದೆ. ಇದು ದೇಶದ ಪರಿಸ್ಥಿತಿ ಆಗಿದೆ. ಅನೇಕ ತಜ್ಞರು ಇದ್ದಾರೆ ಅವರೆಲ್ಲರ ಸಭೆ ಕರೆಯಿರಿ. ಕೆಲವರ ಕರೆಯಲು ನಿಮಗೆ ಇಷ್ಟವಿಲ್ಲದೆ ಇರಬಹುದು. ಮೊನ್ನೆ ಪ್ರಧಾನಿ ಸೂಚನೆ ನೀಡಿದರು.

ಆದರೆ ಸಾರ್ವಜನಿಕರು ಪ್ರಧಾನಿ ಹೇಳದಿದ್ದರೂ ಪಾಲನೆ ಮಾಡುತ್ತಿದ್ದಾರೆ. ಕಾರಲ್ಲಿ ಓಡಾಡಬೇಡಿ ಎಂದಿದ್ದಾರೆ. ಆದರೆ ಎಲ್ಲಾ ರೇಟ್ ಜಾಸ್ತಿ ಆಗಿರುವುದರಿಂದ ಜನರೇ ಬಳಸಲು ಸಾಧ್ಯವಾಗುತ್ತಿಲ್ಲ. ಡಾಲರ್ ರೇಟ್ 100 ರುಪಾಯಿಗೆ ಹೋಗುವಂತೆ ಆಗಿದೆ. ಮತ್ತೆ ಜನರು ವಿದೇಶಿ ಪ್ರವಾಸ ಮಾಡಲು ಹೇಗೆ ಸಾಧ್ಯ. ಅವರು ಹೇಳುತ್ತಿರುವುದನ್ನು ಬಡವರು ಮಧ್ಯಮ ವರ್ಗದ ಜನರು ಅನಿವಾರ್ಯವಾಗಿ ಪಾಲನೆ ಮಾಡುತ್ತಿದ್ದಾರೆ ಎಂದರು.

ಜನ ಎಚ್ಚೆತ್ತುಕೊಳ್ಳಲಿ:

ಜನರು ಎಚ್ಚೆತ್ತುಕೊಂಡರೆ ಪ್ರಜಾಪ್ರಭುತ್ವದಲ್ಲಿ ಆಗುವ ತಪ್ಪನ್ನು ಸರಿಪಡಿಸಬಹುದು. ಇಲ್ಲದಿದ್ದರೆ ತಪ್ಪು ಸರಿಪಡಿಸಲು ಸಾಧ್ಯವೇ ಇಲ್ಲ. ಜಾಣ ಕುರುಡುತನಕ್ಕೆ ಬಲಿಯಾದರೆ ಏನು ಪ್ರಯೋಜನ ಆಗುವುದಿಲ್ಲ. ದೇಶದಲ್ಲಿ ಗೋಲ್ಡ್ ಬಾಂಡ್ಸ್ ಗಳು ಇವೆ. ಜನರ ಅದರ ಮೇಲೆ ಹೂಡಿಕೆ ಮಾಡಿದ್ದಾರೆ. ಅದನ್ನು ವಾಪಸ್ ಪಡೆಯುವ ಸಮಯ ಹತ್ತಿರ ಬರುತ್ತಿದೆ. ಇದನ್ನು ಸರ್ಕಾರಕ್ಕೆ ವಾಪಸ್ ಕೊಡಲು ಸಾಧ್ಯವಿದೆಯೇ. ಕೋಟ್ಯಂತರ ರುಪಾಯಿ ಗೋಲ್ಡ್ ಬಾಂಡ್ಸ್ ಇವೆ. ಆಮದು ಖಡಿತ ಗೊಳಿಸಬೇಕು ಎನ್ನುವುದು ಸರಿ.

ಆದರೆ ಚಿನ್ನ ಖರೀದಿ ನಿಲ್ಲಿಸಲು ಸಾಧ್ಯವೇ? ಜನರು ಒಂದು ಗ್ರಾಂ ಎರಡು ಗ್ರಾಂ ಎಂದು ಖರೀದಿಸಿ ಉಳಿಸಿಕೊಳ್ಳುತ್ತಾರೆ. ಆದರೆ ಹೀಗೆ ಖರೀದಿಸಿ ಉಳಿಸುವುದಕ್ಕೆ ಅವಕಾಶವಿಲ್ಲ. ದೇಶದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಕೇಂದ್ರ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಿರಿಜನ ಹಾಡಿಯಲ್ಲಿ ಅನಧಿಕೃತ ಚರ್ಚ್: ತಮಿಳುನಾಡು ಮೂಲದ ಮಂದಿ ವಶಕ್ಕೆ
ಕಾರಿಂಜ ಸಹಿತ ಎರಡು ದೇವಸ್ಥಾನಕ್ಕೆ ಸಿಡಿಲಾಘಾತ