ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿದ ಪ್ರಧಾನಿ

KannadaprabhaNewsNetwork |  
Published : Jun 19, 2025, 12:35 AM IST
18ಕೆಪಿಎಲ್24 ಕೊಪ್ಪಳ ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಮೋದಿ ಸರ್ಕಾರಕ್ಕೆ  11 ವರ್ಷ ಕಾರ್ಯಕ್ರಮ. | Kannada Prabha

ಸಾರಾಂಶ

ವಿಕಸಿತ ಭಾರತ 2047ರ ಕನಸನ್ನು ನನಸಾಗಿಸಲು ನಾನು ಶಾರೀರಿಕ, ಮಾನಸಿಕವಾಗಿ ನನ್ನ ದೇಹ, ಮನಸ್ಸು, ಸಂಪತ್ತು ಮತ್ತು ಕಾರ್ಯಗಳಿಂದ ಹೃದಯಪೂರ್ವಕವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೊಪ್ಪಳ:

ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿಯ ಜತೆಗೆ ಪ್ರಜಾಪ್ರಭುತ್ವವನ್ನು ಪ್ರಧಾನಿ ನರೇಂದ್ರ ಮೋದಿ ಎತ್ತಿ ಹಿಡಿದಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕ್ಯಾವಟರ ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ವಿಕಸಿತ ಭಾರತ ಅಮೃತ್ ಕಾಲ ಸೇವೆ, ಸುಶಾಸನ, ಮೋದಿ ಸರ್ಕಾರ 11 ವರ್ಷ ಪೂರೈಸಿದಕ್ಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಾಮಾಜಿಕ, ವೈಜ್ಞಾನಿಕ, ಶೈಕ್ಷಣಿಕ, ಆರ್ಥಿಕವಾಗಿ ಸದೃಢ ಭಾರತ ನಿರ್ಮಾಣ ಮಾಡುವಲ್ಲಿ ನರೇಂದ್ರ ಮೋದಿಯವರ ಕೊಡುಗೆ ಅಪಾರವಾಗಿದೆ. ಇದರ ಜತೆಗೆ ಪ್ರಜಾಪ್ರಭುತ್ವದ ಮೌಲ್ಯ ಎತ್ತಿ ಹಿಡಿಯುವಲ್ಲಿ, ಸಾಂಸ್ಕೃತಿಕ ವೈವಿಧ್ಯತೆ, ರಾಷ್ಟ್ರೀಯ ಸಮಗ್ರತೆ, ಏಕತೆ ಹಾಗೂ ಭ್ರಾತೃತ್ವದ ಸಲುವಾಗಿ ಜಾತಿ, ಧರ್ಮ, ಭಾಷೆ, ಲಿಂಗ ಮತ್ತು ಪ್ರಾದೇಶಿಕತೆ ಮತ್ತು ಸಾರ್ವಜನಿಕ ಸ್ವತ್ತು ರಕ್ಷಿಸುವಲ್ಲಿ, ಸ್ವಾಸ್ಥ್ಯ ಭಾರತ ನಿರ್ಮಿಸುವಲ್ಲಿ ನರೇಂದ್ರ ಮೋದಿಯವರ ಸಾಧನೆ ಅಗಾಧವಾಗಿದೆ ಎಂದರು.

ವಿಕಸಿತ ಭಾರತ 2047ರ ಕನಸನ್ನು ನನಸಾಗಿಸಲು ನಾನು ಶಾರೀರಿಕ, ಮಾನಸಿಕವಾಗಿ ನನ್ನ ದೇಹ, ಮನಸ್ಸು, ಸಂಪತ್ತು ಮತ್ತು ಕಾರ್ಯಗಳಿಂದ ಹೃದಯಪೂರ್ವಕವಾಗಿ ತೊಡಗಿಸಿಕೊಳ್ಳುತ್ತೇನೆ ಮತ್ತು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಕ್ಕೆ ಪ್ರತಿಜ್ಞೆ ಮಾಡುತ್ತೇನೆ ಎಂದು ಪ್ರಧಾನಿ ಅವರು ಹೇಳಿದ್ದಾರೆ ಎಂದರು.

ವಿಪ ಸದಸ್ಯೆ ಹೇಮಲತಾ ನಾಯಕ್ ಮಾತನಾಡಿ, ಪ್ರಧಾನ ಮಂತ್ರಿಗಳು ಮಹಿಳೆಯರು ಸಬಲೀಕರಣ ಹೊಂದಬೇಕು ಮತ್ತು ರಾಜಕೀಯ ಸ್ಥಾನ ಪಡೆಯುವಲ್ಲಿ ಸಬಲರಾಗಬೇಕು ಹಾಗೂ ಪ್ರತಿ ಕ್ಷೇತ್ರದಲ್ಲೂ ಮುಖ್ಯ ವಾಹಿನಿಯಲ್ಲಿ ಬರಬೇಕು ಎನ್ನುವುದು ಅವರ ಸಂಕಲ್ಪವಾಗಿದೆ ಎಂದರು.

ಕಳೆದ 11 ವರ್ಷದಲ್ಲಿ ಹಿಂದೆಂದೂ ಕಾಣದ ರೀತಿಯಲ್ಲಿ ಅಭಿವೃದ್ಧಿಯಾಗಿದೆ ಹಾಗಾಗಿ ಪ್ರತಿಯೊಬ್ಬ ಮತದಾರನ ಋಣ ತೀರಿಸುವಂತಹ ಕೆಲಸ ಪ್ರಧಾನ ಮಂತ್ರಿಗಳು ಮಾಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಸಂಚಾಲಕ ಜಿ. ಶ್ರೀಧರ್ ಕೆಸರಟ್ಟಿ, ಸುನೀಲ್ ಹೆಸರೂರು, ಪ್ರಕಾಶ್ ವಕೀಲರು, ಸಹ ಸಂಚಾಲಕ ಮಹೇಶ್ ಅಂಗಡಿ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಜಿಲ್ಲಾಧ್ಯಕ್ಷರ ಅನುಪಸ್ಥಿತಿ

ನಗರದ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮೋದಿ ಸರ್ಕಾರಕ್ಕೆ 11 ವರ್ಷ ಕಾರ್ಯಕ್ರಮಕ್ಕೆ ಕೆಲವೇ ಕೆಲವರು ಭಾಗವಹಿಸಿದ್ದರು. ಪಕ್ಷದ ಜಿಲ್ಲಾಧ್ಯಕ್ಷ ಬಸವರಾಜ ಧಡೇಸ್ಗೂರು ಸೇರಿದಂತೆ ಪ್ರಮುಖ ನಾಯಕರು ಆಗಮಿಸಿರಲಿಲ್ಲ. ಅಷ್ಟೇ ಅಲ್ಲದೇ ಎರಡನೇ ಹಂತದ ನಾಯಕರು, ಕಾರ್ಯಕರ್ತರು ಸಹ ಅಷ್ಟಾಗಿ ಬಂದಿರಲಿಲ್ಲ ಎನ್ನುವುದು ಕಾರ್ಯಕ್ರಮದಲ್ಲಿಯೇ ಬಹಿರಂಗವಾಗಿ ಚರ್ಚೆಯಾಯಿತು. ಪಕ್ಷ ಸಂಘಟನೆ ದಿಕ್ಕು ತಪ್ಪಿಸುತ್ತಿದೆ ಎನ್ನುವಂತಾಗಿದ್ದು, ಅನೇಕರು ಕಾರ್ಯಕ್ರಮಗಳಿಂದ ದೂರ ಉಳಿಯುತ್ತಿರುವುದು ಕಂಡು ಬಂತು.ಲವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ