ಲೋಕಸಭಾ ಚುನಾವಣೆ: ಪ್ರಿಂಟಿಂಗ್ ಪ್ರೆಸ್ ಮಾಲೀಕರ, ಪ್ರತಿನಿಧಿಗಳ ಸಭೆಕನ್ನಡಪ್ರಭ ವಾರ್ತೆ ಕೊಪ್ಪಳ
ಲೋಕಸಭಾ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಸೌರ್ಹದತೆಗೆ ಧಕ್ಕೆ ತರುವ ಕರಪತ್ರ, ಫಲಕಗಳು, ಪೋಸ್ಟರ್ ಮತ್ತು ಬ್ಯಾನರ್ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಈ ಹಿನ್ನೆಲೆ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುದ್ರಕರು ಪಾಂಪ್ಲೇಟ್ಗಳು ಮತ್ತು ಪೋಸ್ಟರ್ಗಳನ್ನು ಮುದ್ರಿಸುವ ಮೊದಲು ಮುದ್ರಣಕ್ಕೆ ನೀಡುವವರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು.ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್, ಫ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮ ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 127 ಎ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಎಲ್ಲ ಪ್ರಿಂಟಿಂಗ್ ಪ್ರೆಸ್ನವರು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುದ್ರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವಿಭಾಗದ ರವಿಕುಮಾರ ವಸ್ತ್ರದ್, ಜಿಲ್ಲಾ ವಾರ್ತಾಧಿಕಾರಿ ಕೆ.ಎನ್. ರಮೇಶ ಸೇರಿದಂತೆ ಜಿಲ್ಲೆಯ ವಿವಿಧ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಇದ್ದರು.