ಕನ್ನಡಪ್ರಭ ವಾರ್ತೆ ಕೋಲಾರ
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕುಡಿಯುವ ನೀರು ನಿರ್ವಹಣೆ, ಮೀನುಗಾರಿಕೆ ಹಾಗೂ ಕೋಳಿ ಸಾಕಾಣಿಕೆ ಸೇರಿದಂತೆ ಗ್ರಾಮೀಣ ಆರ್ಥಿಕತೆಯ ಪ್ರತಿಯೊಂದು ಹಂತದಲ್ಲೂ ಸಂಜೀವಿನಿ ಮಹಿಳಾ ಸ್ವಸಹಾಯ ಸಂಘಗಳನ್ನು ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.
ಕೃಷಿ ಮೌಲ್ಯವರ್ಧನೆ ಮತ್ತು ರಫ್ತಿಗೆ ಒತ್ತು:ಟೊಮೆಟೋ ಬೆಲೆ ಪ್ರತಿ ಕೆಜಿಗೆ ₹೧೬ಕ್ಕಿಂತ ಕಡಿಮೆಯಾಗಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಆಯುಕ್ತರು, ಟೊಮೆಟೋ ಮತ್ತು ಮಾವಿನ ಹಣ್ಣಿನ ಮೌಲ್ಯವರ್ಧನೆಗೆ ತಕ್ಷಣದ ಕ್ರಮ ಕೈಗೊಳ್ಳಬೇಕು, ವಿಶೇಷವಾಗಿ ಸನ್ ಡ್ರ್ರೈಡ್ ಟೊಮೆಟೋ ತಯಾರಿಸಿ ಯುರೋಪ್ ಹಾಗೂ ಗಲ್ಫ್ ರಾಷ್ಟ್ರಗಳಿಗೆ ರಫ್ತು ಮಾಡುವ ಸಾಧ್ಯತೆಗಳನ್ನು ಪರಿಶೀಲಿಸಲು ಮತ್ತು ಜಿಲ್ಲೆಯಲ್ಲೇ ಪಲ್ಪಿಂಗ್ ಯೂನಿಟ್ ಗಳನ್ನು ಸ್ಥಾಪಿಸಲು ನಬಾರ್ಡ್ (ಓಂಃಂಖಆ) ನೆರವು ಪಡೆಯುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖೆಗೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆಯಿಲ್ಲ ಹಾಗೂ ಮಳೆ ಕೊರತೆಯಾದರೆ ಪರ್ಯಾಯ ಬೆಳೆ ಯೋಜನೆ ಸಿದ್ಧವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ೩೫೦ಕ್ಕೂ ಹೆಚ್ಚು ಕೆರೆಗಳಲ್ಲಿ ಶೇ.೫೦ಕ್ಕಿಂತ ಹೆಚ್ಚು ನೀರಿದ್ದು, ಈ ಕೆರೆಗಳಲ್ಲಿ ಮೀನು ಮರಿಗಳನ್ನು ಬಿಡುವ ಜವಾಬ್ದಾರಿ ಎಸ್.ಎಚ್.ಜಿ ಮಹಿಳೆಯರಿಗೆ ನೀಡುವ ಮೂಲಕ ಅವರಿಗೆ ಸ್ಥಳೀಯವಾಗಿ ಆದಾಯ ತಂದುಕೊಡಬೇಕು. ಅಲ್ಲದೆ ಸ್ಥಳೀಯವಾಗಿ ಮೀನು, ಕುರಿ, ಕೋಳಿ ಮೊಟ್ಟೆಗಳನ್ನು ಸ್ಥಳೀಯವಾಗಿ ಮಾರುಕಟ್ಟೆ ಮಾಡಲು ಪ್ರೋತ್ಸಾಹಿಸಬೇಕೆಂದು ತಿಳಿಸಿದರು.
ರಾಜ್ಯಾದ್ಯಂತ ಶಾಲೆ ಮತ್ತು ಅಂಗನವಾಡಿಗಳಿಗೆ ಪ್ರತಿದಿನ ಲಕ್ಷಾಂತರ ಮೊಟ್ಟೆಗಳ ಅಗತ್ಯವಿದ್ದು, ಸ್ಥಳೀಯವಾಗಿಯೇ ಉತ್ಪಾದಿಸುವ ಮೂಲಕ ಬೇಡಿಕೆ ಪೂರೈಸಬಹುದು, ಜಿಲ್ಲೆಯಲ್ಲಿ ೨೯ ವಾರಗಳಿಗೆ ಆಗುವಷ್ಟು ಮೇವಿನ ದಾಸ್ತಾನು ಲಭ್ಯವಿರುವ ಬಗ್ಗೆಯೂ ಅಧಿಕಾರಿಗಳು ವಿವರಿಸಿದರು.
ಪ್ರತಿಯೊಂದು ಗ್ರಾಪಂನಲ್ಲೂ ಮಹಿಳಾ ಸ್ವಸಹಾಯ ಸಂಘಗಳಿಗೆ ಕಾರ್ಯಾಗಾರ ನಿರ್ಮಿಸಲು ಹಾಗೂ ಹಳೆಯ ಕಟ್ಟಡಗಳನ್ನು ನವೀಕರಿಸಿ ಗ್ರಾಮೀಣ ಗ್ರಂಥಾಲಯ ನಿರ್ವಹಣೆ ಮತ್ತು ಪ್ರವಾಸೋಧ್ಯಮ ಅಭಿವೃದ್ಧಿಗೆ ಬಳಸಿಕೊಳ್ಳಲು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದರು.